<p><strong>ನವದೆಹಲಿ</strong>: ಲಾಕ್ಡೌನ್ ಜಾರಿಯಲ್ಲಿರುವಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರವು ನೀಡಲಿದೆ. ದಯವಿಟ್ಟು ಯಾರೊಬ್ಬರೂ ನಗರದಿಂದ ಹೊರ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮನವಿ ಮಾಡಿದ್ದಾರೆ.</p>.<p>ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ಸೋಮವಾರ ಸಂಜೆಯಿಂದ ಏಪ್ರಿಲ್26ರ ಮುಂಜಾನೆವರೆಗೆ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ನಗರವನ್ನು ತೊರೆಯಲು ಬಸ್ ಹಾಗೂ ರೈಲು ನಿಲ್ದಾಣಗಳ ಬಳಿ ವಲಸೆ ಕಾರ್ಮಿಕರು ಜಮಾಯಿಸಿರುವ ಬಗ್ಗೆ ವರದಿಯಾಗಿವೆ.ಕಾರ್ಮಿಕರು ಸಮಸ್ಯೆ ಎದುರಿಸುತ್ತಿರುವುದನ್ನು ಬಿಂಬಿಸುವಸಾಕಷ್ಟುಚಿತ್ರಗಳು ವೈರಲ್ ಆಗಿವೆ. ಈ ಬಗ್ಗೆ ಬೈಜಲ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮುಖ್ಯ ಕಾರ್ಯದರ್ಶಿ ಅವರನ್ನೂ ಭೇಟಿ ಮಾಡಿರುವ ಬೈಜಲ್, ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಹಾಗೆಯೇ ವಲಸೆ ತಡೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.</p>.<p>ಮೂಲಗಳ ಪ್ರಕಾರ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪೊಲೀಸ್ ವಿಶೇಷ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.</p>.<p>ಲಾಕ್ಡೌನ್ ಘೋಷಣೆ ಬಳಿಕ ನೂರಾರು ಸಂಖ್ಯೆಯ ಕಾರ್ಮಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಆನಂದ ವಿಹಾರ್ ಬಸ್ ಟರ್ಮಿನಲ್ ಬಳಿ ಸೋಮವಾರ ಸಂಜೆ ಜಮಾಯಿಸಿದ್ದರು. ಮಹಿಳೆಯರು ಮಕ್ಕಳು ಸೇರಿದಂತೆ ಸಾಕಷ್ಟು ಕಾರ್ಮಿಕರು ರಸ್ತೆ ಮೇಲೆಯೇ ಮಲಗಿದ್ದ ದೃಶ್ಯಗಳು ರಾಷ್ಟ್ರ ರಾಜಧಾನಿಯಾದ್ಯಂತ ಕಂಡು ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಾಕ್ಡೌನ್ ಜಾರಿಯಲ್ಲಿರುವಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರವು ನೀಡಲಿದೆ. ದಯವಿಟ್ಟು ಯಾರೊಬ್ಬರೂ ನಗರದಿಂದ ಹೊರ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮನವಿ ಮಾಡಿದ್ದಾರೆ.</p>.<p>ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ಸೋಮವಾರ ಸಂಜೆಯಿಂದ ಏಪ್ರಿಲ್26ರ ಮುಂಜಾನೆವರೆಗೆ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ನಗರವನ್ನು ತೊರೆಯಲು ಬಸ್ ಹಾಗೂ ರೈಲು ನಿಲ್ದಾಣಗಳ ಬಳಿ ವಲಸೆ ಕಾರ್ಮಿಕರು ಜಮಾಯಿಸಿರುವ ಬಗ್ಗೆ ವರದಿಯಾಗಿವೆ.ಕಾರ್ಮಿಕರು ಸಮಸ್ಯೆ ಎದುರಿಸುತ್ತಿರುವುದನ್ನು ಬಿಂಬಿಸುವಸಾಕಷ್ಟುಚಿತ್ರಗಳು ವೈರಲ್ ಆಗಿವೆ. ಈ ಬಗ್ಗೆ ಬೈಜಲ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮುಖ್ಯ ಕಾರ್ಯದರ್ಶಿ ಅವರನ್ನೂ ಭೇಟಿ ಮಾಡಿರುವ ಬೈಜಲ್, ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಹಾಗೆಯೇ ವಲಸೆ ತಡೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.</p>.<p>ಮೂಲಗಳ ಪ್ರಕಾರ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪೊಲೀಸ್ ವಿಶೇಷ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.</p>.<p>ಲಾಕ್ಡೌನ್ ಘೋಷಣೆ ಬಳಿಕ ನೂರಾರು ಸಂಖ್ಯೆಯ ಕಾರ್ಮಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಆನಂದ ವಿಹಾರ್ ಬಸ್ ಟರ್ಮಿನಲ್ ಬಳಿ ಸೋಮವಾರ ಸಂಜೆ ಜಮಾಯಿಸಿದ್ದರು. ಮಹಿಳೆಯರು ಮಕ್ಕಳು ಸೇರಿದಂತೆ ಸಾಕಷ್ಟು ಕಾರ್ಮಿಕರು ರಸ್ತೆ ಮೇಲೆಯೇ ಮಲಗಿದ್ದ ದೃಶ್ಯಗಳು ರಾಷ್ಟ್ರ ರಾಜಧಾನಿಯಾದ್ಯಂತ ಕಂಡು ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>