<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಡ್ಡಾಯ ತಪಾಸಣೆಯ ವೇಳೆ ವಿಳಂಬವನ್ನು ತಪ್ಪಿಸುವ ಸಲುವಾಗಿ ಪ್ರಯಾಣಿಕರು ತಾವು ಪ್ರಯಾಣಿಸುವ ರೈಲು, ಮೆಟ್ರೊ ಮತ್ತು ವಿಮಾನಗಳು ಹೊರಡುವ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಿಲ್ದಾಣಗಳನ್ನು ತಲುಪುವಂತೆ ದೆಹಲಿ ಪೊಲೀಸರು ಸಲಹೆ ನೀಡಿದ್ದಾರೆ. </p><p>ನವೆಂಬರ್ 10ರಂದು (ಸೋಮವಾರ) ಕೆಂಪುಕೋಟೆಯ ಬಳಿ ಬಿಳಿ ಬಣ್ಣದ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿ 13 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>ಘಟನೆಯ ಬೆನ್ನಲ್ಲೇ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿರುವುದರಿಂದ ಎಲ್ಲಾ ಪ್ರಯಾಣಿಕರು ರೈಲು, ಮೆಟ್ರೊ ಮತ್ತು ವಿಮಾನ ನಿಲ್ದಾಣಕ್ಕೆ ಮುಂಚಿತವಾಗಿ ತಲುಪುವಂತೆ ಸೂಚಿಸಲಾಗಿದೆ ಎಂದು ದೆಹಲಿಯ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್ ಡುಂಬ್ರೆ ತಿಳಿಸಿದ್ದಾರೆ. </p><p>ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಬರುವಂತೆ ಮತ್ತು ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವವರು ನಿಗದಿತ ಸಮಯಕ್ಕಿಂತ ಕನಿಷ್ಠ 20 ನಿಮಿಷಗಳ ಮೊದಲು ನಿಲ್ದಾಣಕ್ಕೆ ತಲುಪುವಂತೆ ಸೂಚಿಸಲಾಗಿದೆ ಎಂದು ಮಿಲಿಂದ್ ಹೇಳಿದ್ದಾರೆ.</p><p>ಅಂತರರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಸುವವರು ಕನಿಷ್ಠ ಮೂರು ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಸಲಹೆ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ದೆಹಲಿಯ ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ ಸೇರಿದಂತೆ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿರುವುದರ ನಡುವೆಯೂ ಭದ್ರತಾ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊನೆಯ ಕ್ಷಣದ ಅನಾನುಕೂಲತೆಯನ್ನು ತಪ್ಪಿಸುವ ಸಲುವಾಗಿ ಪ್ರಯಾಣಿಕರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಸುರಕ್ಷತೆ ಮತ್ತು ಪ್ರಯಾಣಿಕರ ಸುಗಮ ಪ್ರಯಾಣ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಡ್ಡಾಯ ತಪಾಸಣೆಯ ವೇಳೆ ವಿಳಂಬವನ್ನು ತಪ್ಪಿಸುವ ಸಲುವಾಗಿ ಪ್ರಯಾಣಿಕರು ತಾವು ಪ್ರಯಾಣಿಸುವ ರೈಲು, ಮೆಟ್ರೊ ಮತ್ತು ವಿಮಾನಗಳು ಹೊರಡುವ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಿಲ್ದಾಣಗಳನ್ನು ತಲುಪುವಂತೆ ದೆಹಲಿ ಪೊಲೀಸರು ಸಲಹೆ ನೀಡಿದ್ದಾರೆ. </p><p>ನವೆಂಬರ್ 10ರಂದು (ಸೋಮವಾರ) ಕೆಂಪುಕೋಟೆಯ ಬಳಿ ಬಿಳಿ ಬಣ್ಣದ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿ 13 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>ಘಟನೆಯ ಬೆನ್ನಲ್ಲೇ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿರುವುದರಿಂದ ಎಲ್ಲಾ ಪ್ರಯಾಣಿಕರು ರೈಲು, ಮೆಟ್ರೊ ಮತ್ತು ವಿಮಾನ ನಿಲ್ದಾಣಕ್ಕೆ ಮುಂಚಿತವಾಗಿ ತಲುಪುವಂತೆ ಸೂಚಿಸಲಾಗಿದೆ ಎಂದು ದೆಹಲಿಯ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್ ಡುಂಬ್ರೆ ತಿಳಿಸಿದ್ದಾರೆ. </p><p>ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಬರುವಂತೆ ಮತ್ತು ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವವರು ನಿಗದಿತ ಸಮಯಕ್ಕಿಂತ ಕನಿಷ್ಠ 20 ನಿಮಿಷಗಳ ಮೊದಲು ನಿಲ್ದಾಣಕ್ಕೆ ತಲುಪುವಂತೆ ಸೂಚಿಸಲಾಗಿದೆ ಎಂದು ಮಿಲಿಂದ್ ಹೇಳಿದ್ದಾರೆ.</p><p>ಅಂತರರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಸುವವರು ಕನಿಷ್ಠ ಮೂರು ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಸಲಹೆ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p><p>ದೆಹಲಿಯ ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ ಸೇರಿದಂತೆ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿರುವುದರ ನಡುವೆಯೂ ಭದ್ರತಾ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊನೆಯ ಕ್ಷಣದ ಅನಾನುಕೂಲತೆಯನ್ನು ತಪ್ಪಿಸುವ ಸಲುವಾಗಿ ಪ್ರಯಾಣಿಕರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಸುರಕ್ಷತೆ ಮತ್ತು ಪ್ರಯಾಣಿಕರ ಸುಗಮ ಪ್ರಯಾಣ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>