<p><strong>ನವದೆಹಲಿ:</strong> ‘ಕೋವಿಡ್ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ 17 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p>‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳು ನಮ್ಮೊಂದಿಗೆ ಗುರುವಾರ ಮಾಹಿತಿ ಹಂಚಿಕೊಂಡರು. ಈ ಸಂಬಂಧ ಹೆಚ್ಚಿನ ದೂರುಗಳು ಬಂದರೆ, ಇನ್ನಷ್ಟು ಎಫ್ಐಆರ್ಗಳು ದಾಖಲಾಗುವ ಸಾಧ್ಯತೆಗಳಿವೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ’ ಎಂದು ಅವರು ಹೇಳಿದರು.</p>.<p>‘ನಗರದ ಹಲವು ಭಾಗಗಳಿಂದ 15 ಮಂದಿಯನ್ನು ಬಂಧಿಸಲಾಗಿದ್ದು, 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ ಬಂಧಿಸಲ್ಪಟ್ಟ ಒಬ್ಬ ಆರೋಪಿಯು ತನಗೆ ಈ ಕೆಲಸ ಮಾಡಲು ₹500 ನೀಡಿದ್ದರು ಎಂದು ವಿಚಾರಣೆ ವೇಳೆ ಹೇಳಿದ್ದಾನೆ. ಈ ಪ್ರಕರಣ ಸಂಬಂಧ ಇನ್ನೊಬ್ಬ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ 17 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p>‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳು ನಮ್ಮೊಂದಿಗೆ ಗುರುವಾರ ಮಾಹಿತಿ ಹಂಚಿಕೊಂಡರು. ಈ ಸಂಬಂಧ ಹೆಚ್ಚಿನ ದೂರುಗಳು ಬಂದರೆ, ಇನ್ನಷ್ಟು ಎಫ್ಐಆರ್ಗಳು ದಾಖಲಾಗುವ ಸಾಧ್ಯತೆಗಳಿವೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ’ ಎಂದು ಅವರು ಹೇಳಿದರು.</p>.<p>‘ನಗರದ ಹಲವು ಭಾಗಗಳಿಂದ 15 ಮಂದಿಯನ್ನು ಬಂಧಿಸಲಾಗಿದ್ದು, 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ ಬಂಧಿಸಲ್ಪಟ್ಟ ಒಬ್ಬ ಆರೋಪಿಯು ತನಗೆ ಈ ಕೆಲಸ ಮಾಡಲು ₹500 ನೀಡಿದ್ದರು ಎಂದು ವಿಚಾರಣೆ ವೇಳೆ ಹೇಳಿದ್ದಾನೆ. ಈ ಪ್ರಕರಣ ಸಂಬಂಧ ಇನ್ನೊಬ್ಬ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>