ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿ, ಮಧ್ಯಪ್ರದೇಶ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ದೆಹಲಿಗೆ ಕಳುಹಿಸಲಾಗಿತ್ತು. ಈಗ ಬಂಧಿಸಿರುವ ಆರೋಪಿಗಳಿಂದ ದೊರೆಯುವ ಸುಳಿವುಗಳನ್ನು ಆಧರಿಸಿ ತಂಡಗಳು ಕಾರ್ಯಾಚರಣೆಯನ್ನು ಮುಂದುವರಿಸಲಿವೆ ಎಂದು ವಿಶೇಷ ಪೊಲೀಸ್ ಕಮಿಷನರ್ (ವಿಶೇಷ ಘಟಕ) ಎಚ್.ಜಿ.ಎಸ್. ಧಲಿವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.