ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಂಗಾಲೋಯಿ ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಆರು ಮಂದಿ ಬಂಧನ

Published 4 ಆಗಸ್ಟ್ 2023, 13:20 IST
Last Updated 4 ಆಗಸ್ಟ್ 2023, 13:20 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಂಗಾಲೋಯಿ ಪ್ರದೇಶದಲ್ಲಿ ಇತ್ತೀಚೆಗೆ ಮೊಹರಂ ಮೆರವಣಿಗೆಯಲ್ಲಿ ಅಶಿಸ್ತಿನಿಂದ ವರ್ತಿಸಿ, ಕಲ್ಲುತೂರಾಟ ನಡೆಸಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಶಹಿಲ್‌ ಸಲ್ಮಾನಿ (25), ಅಸ್ಲಾಂ ಖುರೇಶಿ (37), ಸಮೀರ್‌ ಅಲಿಯಾಸ್‌ ಚೋಟಿ (23), ಶಹೀಲ್‌ ಖಾನ್‌ (21), ಅಜೀಂ (23) ಮತ್ತು ಶೋಹಿಬ್‌ (23) ಬಂಧಿತ ಆರೋಪಿಗಳು.

ಈ ಆರು ಜನ ಆರೋಪಿಗಳನ್ನು ಹೊರ ಜಿಲ್ಲೆಯ ಪೊಲೀಸ್ ತಂಡಗಳು ಗುರುತಿಸಿ ಬಂಧಿಸಿವೆ ಎಂದು ಉಪ ಪೊಲೀಸ್ ಆಯುಕ್ತ ಹರೇಂದ್ರ ಸಿಂಗ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜುಲೈ 29 ರಂದು ನಂಗಾಲೋಯಿ ಪ್ರದೇಶದಲ್ಲಿ ಸುಮಾರು ಎಂಟರಿಂದ 10 ಸಾವಿರ ಜನರು ತಾಜಿಯಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರೋಹ್ಟಕ್ ರಸ್ತೆಯಲ್ಲಿ ಮೆರವಣಿಗೆ ಸಾಗುವಾಗ, ಕೆಲವು ಕಿಡಿಗೇಡಿಗಳು ಪೂರ್ವ ನಿರ್ಧರಿತ ಮಾರ್ಗದಲ್ಲಿ ಸಾಗದೆ ಬೇರೆ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಯತ್ನಿಸಿ, ಸಾರ್ವಜನಿಕರನ್ನು ಪ್ರಚೋದಿಸಿ, ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಆರು ಪೊಲೀಸರು ಸೇರಿ 12 ಜನರು ಗಾಯಗೊಂಡಿದ್ದರು. ಪರಿಸ್ಥಿತಿ ನಿಯಂತ್ರಿಸಲು ‌ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT