<p><strong>ದೆಹಲಿ</strong>: ಈ ತಿಂಗಳ ಆರಂಭದಲ್ಲಿ ಚಂಡೀಗಢದಲ್ಲಿ ನಡೆದ ಪ್ರತಿಸ್ಪರ್ಧಿ ಗ್ಯಾಂಗ್ಸ್ಟರ್ನ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ‘ಅನ್ಮೋಲ್ ಬಿಷ್ಣೋಯಿ–ಹ್ಯಾರಿ ಬಾಕ್ಸರ್’ ಗುಂಪಿಗೆ ಸೇರಿದ ಐವರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.</p>.<p>ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಮಾಜಿ ಆಪ್ತ ಸಹಾಯಕ ಇಂದರ್ಪ್ರೀತ್ ಸಿಂಗ್ ಅಲಿಯಾಸ್ ಪ್ಯಾರಿಯನ್ನು ಡಿಸೆಂಬರ್ 1ರಂದು ಸೆಕ್ಟರ್ 26ರಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಕೊಲೆಯ ಹಿಂದೆ ಗ್ಯಾಂಗ್ವಾರ್ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಕೊಲೆಯಾದ ಪ್ಯಾರಿ ಈ ಹಿಂದೆ ಬಿಷ್ಣೋಯಿ ಗ್ಯಾಂಗ್ನೊಂದಿಗೆ ಗುರುತಿಸಿಕೊಂಡಿದ್ದನು. ಆದರೆ ನಂತರ ಕೆನಡಾದಲ್ಲಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಗುಂಪಿನ ಜೊತೆ ಸೇರಿಕೊಂಡಿದ್ದನು. ಚಂಡೀಗಢ ಮೂಲದ ಈತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.</p>.<p>ಕೊಲೆಯ ನಂತರ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿತ್ತು. ದುಬೈನಲ್ಲಿ ನಡೆದ ತಮ್ಮ ಫೈನಾನ್ಷಿಯರ್ ಹತ್ಯೆಗೆ ಸೇಡು ತೀರಿಸಲು ಈ ಕೊಲೆ ನಡೆಸಲಾಗಿದೆ ಎಂದು ಅದು ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ</strong>: ಈ ತಿಂಗಳ ಆರಂಭದಲ್ಲಿ ಚಂಡೀಗಢದಲ್ಲಿ ನಡೆದ ಪ್ರತಿಸ್ಪರ್ಧಿ ಗ್ಯಾಂಗ್ಸ್ಟರ್ನ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ‘ಅನ್ಮೋಲ್ ಬಿಷ್ಣೋಯಿ–ಹ್ಯಾರಿ ಬಾಕ್ಸರ್’ ಗುಂಪಿಗೆ ಸೇರಿದ ಐವರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.</p>.<p>ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಮಾಜಿ ಆಪ್ತ ಸಹಾಯಕ ಇಂದರ್ಪ್ರೀತ್ ಸಿಂಗ್ ಅಲಿಯಾಸ್ ಪ್ಯಾರಿಯನ್ನು ಡಿಸೆಂಬರ್ 1ರಂದು ಸೆಕ್ಟರ್ 26ರಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಕೊಲೆಯ ಹಿಂದೆ ಗ್ಯಾಂಗ್ವಾರ್ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಕೊಲೆಯಾದ ಪ್ಯಾರಿ ಈ ಹಿಂದೆ ಬಿಷ್ಣೋಯಿ ಗ್ಯಾಂಗ್ನೊಂದಿಗೆ ಗುರುತಿಸಿಕೊಂಡಿದ್ದನು. ಆದರೆ ನಂತರ ಕೆನಡಾದಲ್ಲಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಗುಂಪಿನ ಜೊತೆ ಸೇರಿಕೊಂಡಿದ್ದನು. ಚಂಡೀಗಢ ಮೂಲದ ಈತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.</p>.<p>ಕೊಲೆಯ ನಂತರ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿತ್ತು. ದುಬೈನಲ್ಲಿ ನಡೆದ ತಮ್ಮ ಫೈನಾನ್ಷಿಯರ್ ಹತ್ಯೆಗೆ ಸೇಡು ತೀರಿಸಲು ಈ ಕೊಲೆ ನಡೆಸಲಾಗಿದೆ ಎಂದು ಅದು ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>