<p><strong>ನವದೆಹಲಿ:</strong> ದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸುತ್ತಿದ್ದ ಅಲ್–ಖೈದಾ ಘಟಕವನ್ನು ಬೇಧಿಸಿದ್ದು, ಜಾರ್ಖಂಡ್, ರಾಜಸ್ಥಾನ ಹಾಗೂ ಉತ್ತರಪ್ರದೇಶದಲ್ಲಿ 14 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಗುಪ್ತಚರ ಮಾಹಿತಿ ಆಧರಿಸಿ, ಆಯಾಯ ರಾಜ್ಯದ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>‘ಜಾರ್ಖಂಡ್ನ ರಾಂಚಿಯ ಡಾ.ಇಶ್ತಿಯಾಕ್ ನೇತೃತ್ವದಲ್ಲಿ ಅಲ್ ಖೈದಾ ಘಟಕವು ಕಾರ್ಯಾಚರಣೆ ನಡೆಸುತ್ತಿದ್ದು, ದೇಶದ ಒಳಗಡೆ ಗಂಭೀರವಾದ ಭಯೋತ್ಪಾದಕ ಕೃತ್ಯವೆಸಗಿ ‘ಖಿಲಾಫತ್’ ಘೋಷಿಸುವ ಉದ್ದೇಶ ಹೊಂದಿದ್ದರು’ ಎಂದು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಭಯೋತ್ಪಾದನಾ ಘಟಕದ ಸದಸ್ಯರಿಗೆ ದೇಶದ ವಿವಿಧ ಭಾಗಗಳಲ್ಲಿ ಶಸ್ತ್ರಾಸ್ತ್ರಗಳ ನಿರ್ವಹಣೆಯ ತರಬೇತಿಯನ್ನು ನೀಡಲಾಗಿತ್ತು. ಇವರಲ್ಲಿ ಆರು ಮಂದಿಯನ್ನು ರಾಜಸ್ಥಾನದ ಭಿವಂಡಿ ಹಾಗೂ ಉಳಿದ 8 ಮಂದಿಯನ್ನು ಜಾರ್ಖಂಡ್, ರಾಜಸ್ಥಾನದಲ್ಲಿ ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸುತ್ತಿದ್ದ ಅಲ್–ಖೈದಾ ಘಟಕವನ್ನು ಬೇಧಿಸಿದ್ದು, ಜಾರ್ಖಂಡ್, ರಾಜಸ್ಥಾನ ಹಾಗೂ ಉತ್ತರಪ್ರದೇಶದಲ್ಲಿ 14 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಗುಪ್ತಚರ ಮಾಹಿತಿ ಆಧರಿಸಿ, ಆಯಾಯ ರಾಜ್ಯದ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>‘ಜಾರ್ಖಂಡ್ನ ರಾಂಚಿಯ ಡಾ.ಇಶ್ತಿಯಾಕ್ ನೇತೃತ್ವದಲ್ಲಿ ಅಲ್ ಖೈದಾ ಘಟಕವು ಕಾರ್ಯಾಚರಣೆ ನಡೆಸುತ್ತಿದ್ದು, ದೇಶದ ಒಳಗಡೆ ಗಂಭೀರವಾದ ಭಯೋತ್ಪಾದಕ ಕೃತ್ಯವೆಸಗಿ ‘ಖಿಲಾಫತ್’ ಘೋಷಿಸುವ ಉದ್ದೇಶ ಹೊಂದಿದ್ದರು’ ಎಂದು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಭಯೋತ್ಪಾದನಾ ಘಟಕದ ಸದಸ್ಯರಿಗೆ ದೇಶದ ವಿವಿಧ ಭಾಗಗಳಲ್ಲಿ ಶಸ್ತ್ರಾಸ್ತ್ರಗಳ ನಿರ್ವಹಣೆಯ ತರಬೇತಿಯನ್ನು ನೀಡಲಾಗಿತ್ತು. ಇವರಲ್ಲಿ ಆರು ಮಂದಿಯನ್ನು ರಾಜಸ್ಥಾನದ ಭಿವಂಡಿ ಹಾಗೂ ಉಳಿದ 8 ಮಂದಿಯನ್ನು ಜಾರ್ಖಂಡ್, ರಾಜಸ್ಥಾನದಲ್ಲಿ ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>