<p><strong>ನವದೆಹಲಿ</strong>: ಪೂರ್ವ ದೆಹಲಿಯ ಗಾಜೀಪುರದಲ್ಲಿರುವ ಬೃಹತ್ ಪ್ರಮಾಣದ ತ್ಯಾಜ್ಯದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಗೆ ಆವರಿಸಿಕೊಂಡಿದೆ.</p>.<p>ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೃಹತ್ ಪ್ರಮಾಣದಲ್ಲಿದ್ದ ತ್ಯಾಜ್ಯದಲ್ಲಿ ಉತ್ಪತ್ತಿಯಾದ ಅನಿಲಗಳಿಂದಾಗಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.</p>.<p>‘ಇತರರ ಜೀವ ಮತ್ತು ಸುರಕ್ಷತೆಗೆ ಹಾನಿ ಉಂಟುಮಾಡಿದ ಮತ್ತು ವಾತಾವರಣವನ್ನು ಕಲುಷಿತಗೊಳಿಸಿದ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>‘ಬೆಂಕಿ ಹೊತ್ತಿಕೊಂಡು 15 ಗಂಟೆಗಳು ಕಳೆದಿವೆ. ಇದರಿಂದ ಉಂಟಾಗಿರುವ ಹೊಗೆಯು ಅತಿ ವಿಷಕಾರಿಯಾಗಿದ್ದು, ನಮಗೆ ಕಣ್ಣು ತೆರಯಲು ಕೂಡ ಸಾಧ್ಯವಾಗುತ್ತಿಲ್ಲ. ಕಷ್ಟಪಟ್ಟು ಉಸಿರಾಡುತ್ತಿದ್ದೇವೆ’ ಎಂದು ಸ್ಥಳೀಯ ನಿವಾಸಿ ರಾಮ್ ಕುಮಾರ್ ಅವರು ತಿಳಿಸಿದ್ದಾರೆ.</p>.<p>‘ಹೊಗೆ ತಂಬಿಕೊಂಡಿರುವುದರಿಂದ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.</p>.<p>‘ಘಟನೆಯ ಬಗ್ಗೆ ತಿಳಿದ ತಕ್ಷಣ, ಸ್ಥಳಕ್ಕೆ ಭೇಟಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಡೀ ರಾತ್ರಿ ಅವರು ಸ್ಥಳದಲ್ಲೇ ಇದ್ದರು. ಪರಿಸ್ಥಿತಿ ಸುಧಾರಿಸಿದೆ. ಮುಂದಿನ 5 ಗಂಟೆಗಳಲ್ಲಿ ಹೊಗೆ ನಿಯಂತ್ರಣವಾಗಲಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತೇವೆ. ಬಿಜೆಪಿ ಕೇವಲ ಆರೋಪ ಮಾಡುತ್ತಿದೆ. ರಾಜಕೀಯ ಮಾಡುವ ಸಮಯ ಇದಲ್ಲ’ ಎಂದು ದೆಹಲಿ ಮೇಯರ್ ಶೆಲ್ಲಿ ಓಬೆರಾಯ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೂರ್ವ ದೆಹಲಿಯ ಗಾಜೀಪುರದಲ್ಲಿರುವ ಬೃಹತ್ ಪ್ರಮಾಣದ ತ್ಯಾಜ್ಯದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಗೆ ಆವರಿಸಿಕೊಂಡಿದೆ.</p>.<p>ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೃಹತ್ ಪ್ರಮಾಣದಲ್ಲಿದ್ದ ತ್ಯಾಜ್ಯದಲ್ಲಿ ಉತ್ಪತ್ತಿಯಾದ ಅನಿಲಗಳಿಂದಾಗಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.</p>.<p>‘ಇತರರ ಜೀವ ಮತ್ತು ಸುರಕ್ಷತೆಗೆ ಹಾನಿ ಉಂಟುಮಾಡಿದ ಮತ್ತು ವಾತಾವರಣವನ್ನು ಕಲುಷಿತಗೊಳಿಸಿದ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>‘ಬೆಂಕಿ ಹೊತ್ತಿಕೊಂಡು 15 ಗಂಟೆಗಳು ಕಳೆದಿವೆ. ಇದರಿಂದ ಉಂಟಾಗಿರುವ ಹೊಗೆಯು ಅತಿ ವಿಷಕಾರಿಯಾಗಿದ್ದು, ನಮಗೆ ಕಣ್ಣು ತೆರಯಲು ಕೂಡ ಸಾಧ್ಯವಾಗುತ್ತಿಲ್ಲ. ಕಷ್ಟಪಟ್ಟು ಉಸಿರಾಡುತ್ತಿದ್ದೇವೆ’ ಎಂದು ಸ್ಥಳೀಯ ನಿವಾಸಿ ರಾಮ್ ಕುಮಾರ್ ಅವರು ತಿಳಿಸಿದ್ದಾರೆ.</p>.<p>‘ಹೊಗೆ ತಂಬಿಕೊಂಡಿರುವುದರಿಂದ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.</p>.<p>‘ಘಟನೆಯ ಬಗ್ಗೆ ತಿಳಿದ ತಕ್ಷಣ, ಸ್ಥಳಕ್ಕೆ ಭೇಟಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಡೀ ರಾತ್ರಿ ಅವರು ಸ್ಥಳದಲ್ಲೇ ಇದ್ದರು. ಪರಿಸ್ಥಿತಿ ಸುಧಾರಿಸಿದೆ. ಮುಂದಿನ 5 ಗಂಟೆಗಳಲ್ಲಿ ಹೊಗೆ ನಿಯಂತ್ರಣವಾಗಲಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತೇವೆ. ಬಿಜೆಪಿ ಕೇವಲ ಆರೋಪ ಮಾಡುತ್ತಿದೆ. ರಾಜಕೀಯ ಮಾಡುವ ಸಮಯ ಇದಲ್ಲ’ ಎಂದು ದೆಹಲಿ ಮೇಯರ್ ಶೆಲ್ಲಿ ಓಬೆರಾಯ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>