2014ರ ಜನವರಿಯಲ್ಲಿ ಸುನಂದಾ ಅವರು ನವದೆಹಲಿಯ ಹೋಟೆಲ್ವೊಂದರಲ್ಲಿ ಮೃತಪಟ್ಟಿದ್ದರು. ಕ್ರೌರ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ತರೂರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಅವರನ್ನು ಬಂಧಿಸಿರಲಿಲ್ಲ. 2021ರ ಆಗಸ್ಟ್ 18ರಂದು ವಿಚಾರಣಾಧೀನ ನ್ಯಾಯಾಲಯವು ತರೂರ್ ಅವರನ್ನು ದೋಷಮುಕ್ತಗೊಳಿಸಿತ್ತು.