<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ಬಿರುಸಿನಿಂದ ಸಾಗುತ್ತಿರುವಂತೆಯೇ ಪಂಜಾಬ್ ಸರ್ಕಾರಕ್ಕೆ ಸೇರಿದ ಕಾರೊಂದನ್ನು ಜಪ್ತಿ ಮಾಡಲಾಗಿದ್ದು, ನಗದು, ಮದ್ಯ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಕರಪತ್ರಗಳನ್ನು ವಶಪಡಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ತಿಳಿಸಿದೆ. </p><p>ನವದೆಹಲಿ ಜಿಲ್ಲೆಯಲ್ಲಿ ಪಂಜಾಬ್ ದಾಖಲಾತಿ ಹೊಂದಿರುವ ವಾಹನವನ್ನು ತಡೆಹಿಡಿಯಲಾಯಿತು. ಚುನಾವಣಾ ಮಾದರಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಆದರೆ ದೆಹಲಿ ಪೊಲೀಸ್ ಹೇಳಿಕೆಯನ್ನು ಪಂಜಾಬ್ ಸರ್ಕಾರ ತಳ್ಳಿ ಹಾಕಿದೆ. ವಾಹನದ ನಂಬರ್ ಪ್ಲೇಟ್ ನಕಲಿಯಾಗಿದ್ದು, ಪಂಜಾಬ್ ಸರ್ಕಾರದ ಅಧೀನದಲ್ಲಿರುವ ಕಾರು ಅಲ್ಲ ಎಂದು ಸ್ಪಷ್ಟನೆ ನೀಡಿದೆ. </p><p>ಎಎಪಿ ಕೂಡ ಕಾರು ಜಪ್ತಿ ಪ್ರಕರಣವನ್ನು ತಳ್ಳಿ ಹಾಕಿದೆ. ಇದೊಂದು ಸುಳ್ಳು ಆರೋಪವಾಗಿದ್ದು, ಉದ್ದೇಶಪೂರ್ವಕವಾಗಿ ತಂತ್ರ ಹೆಣೆಯಲಾಗಿದೆ. ಆದರೆ ಅದನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. </p><p>'ಕಾರಿನಲ್ಲಿ ಶೋಧ ನಡೆಸಿದಾಗ ನಗದು, ಮದ್ಯದ ಬಾಟಲಿ ಮತ್ತು ಎಎಪಿ ಕರಪತ್ರಗಳು ಲಭಿಸಿವೆ. ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ' ಎಂದು ದೆಹಲಿ ಪೊಲೀಸ್ ತಿಳಿಸಿದೆ. </p><p>'ಘಟನೆಗೆ ದೆಹಲಿಯ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ ಆಘಾತ ವ್ಯಕ್ತಪಡಿಸಿದ್ದು, ಪಂಜಾಬ್ ಸರ್ಕಾರಕ್ಕೆ ಸೇರಿದ ಕಾರಿನಿಂದ ₹10 ಲಕ್ಷ ನಗದು, ಮದ್ಯ ಮತ್ತು ಎಎಪಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ರಾಜಕೀಯ ವ್ಯವಸ್ಥೆಯನ್ನು ಅರವಿಂದ ಕೇಜ್ರಿವಾಲ್ ಕಲುಷಿತಗೊಳಿಸಿದ್ದಾರೆ' ಎಂದು ಆರೋಪಿಸಿದ್ದಾರೆ. </p><p>'ನನ್ನ 35 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಷ್ಟು ದೊಡ್ಡ ಪ್ರಮಾಣದ ನಗದು ಹಾಗೂ ಮದ್ಯ ವಸೂಲಿ ಮಾಡಿದ ಒಂದೇ ಒಂದು ಘಟನೆ ನೆನಪಿಲ್ಲ' ಎಂದು ಅವರು ಹೇಳಿದರು. </p>.Delhi Elections 2025: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಪ್ರಮುಖ ಭರವಸೆಗಳೇನು? .Delhi elections: 15 ಭರವಸೆ ಒಳಗೊಂಡ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಬಿಡುಗಡೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ಬಿರುಸಿನಿಂದ ಸಾಗುತ್ತಿರುವಂತೆಯೇ ಪಂಜಾಬ್ ಸರ್ಕಾರಕ್ಕೆ ಸೇರಿದ ಕಾರೊಂದನ್ನು ಜಪ್ತಿ ಮಾಡಲಾಗಿದ್ದು, ನಗದು, ಮದ್ಯ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಕರಪತ್ರಗಳನ್ನು ವಶಪಡಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ತಿಳಿಸಿದೆ. </p><p>ನವದೆಹಲಿ ಜಿಲ್ಲೆಯಲ್ಲಿ ಪಂಜಾಬ್ ದಾಖಲಾತಿ ಹೊಂದಿರುವ ವಾಹನವನ್ನು ತಡೆಹಿಡಿಯಲಾಯಿತು. ಚುನಾವಣಾ ಮಾದರಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಆದರೆ ದೆಹಲಿ ಪೊಲೀಸ್ ಹೇಳಿಕೆಯನ್ನು ಪಂಜಾಬ್ ಸರ್ಕಾರ ತಳ್ಳಿ ಹಾಕಿದೆ. ವಾಹನದ ನಂಬರ್ ಪ್ಲೇಟ್ ನಕಲಿಯಾಗಿದ್ದು, ಪಂಜಾಬ್ ಸರ್ಕಾರದ ಅಧೀನದಲ್ಲಿರುವ ಕಾರು ಅಲ್ಲ ಎಂದು ಸ್ಪಷ್ಟನೆ ನೀಡಿದೆ. </p><p>ಎಎಪಿ ಕೂಡ ಕಾರು ಜಪ್ತಿ ಪ್ರಕರಣವನ್ನು ತಳ್ಳಿ ಹಾಕಿದೆ. ಇದೊಂದು ಸುಳ್ಳು ಆರೋಪವಾಗಿದ್ದು, ಉದ್ದೇಶಪೂರ್ವಕವಾಗಿ ತಂತ್ರ ಹೆಣೆಯಲಾಗಿದೆ. ಆದರೆ ಅದನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. </p><p>'ಕಾರಿನಲ್ಲಿ ಶೋಧ ನಡೆಸಿದಾಗ ನಗದು, ಮದ್ಯದ ಬಾಟಲಿ ಮತ್ತು ಎಎಪಿ ಕರಪತ್ರಗಳು ಲಭಿಸಿವೆ. ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ' ಎಂದು ದೆಹಲಿ ಪೊಲೀಸ್ ತಿಳಿಸಿದೆ. </p><p>'ಘಟನೆಗೆ ದೆಹಲಿಯ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ ಆಘಾತ ವ್ಯಕ್ತಪಡಿಸಿದ್ದು, ಪಂಜಾಬ್ ಸರ್ಕಾರಕ್ಕೆ ಸೇರಿದ ಕಾರಿನಿಂದ ₹10 ಲಕ್ಷ ನಗದು, ಮದ್ಯ ಮತ್ತು ಎಎಪಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ರಾಜಕೀಯ ವ್ಯವಸ್ಥೆಯನ್ನು ಅರವಿಂದ ಕೇಜ್ರಿವಾಲ್ ಕಲುಷಿತಗೊಳಿಸಿದ್ದಾರೆ' ಎಂದು ಆರೋಪಿಸಿದ್ದಾರೆ. </p><p>'ನನ್ನ 35 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಷ್ಟು ದೊಡ್ಡ ಪ್ರಮಾಣದ ನಗದು ಹಾಗೂ ಮದ್ಯ ವಸೂಲಿ ಮಾಡಿದ ಒಂದೇ ಒಂದು ಘಟನೆ ನೆನಪಿಲ್ಲ' ಎಂದು ಅವರು ಹೇಳಿದರು. </p>.Delhi Elections 2025: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಪ್ರಮುಖ ಭರವಸೆಗಳೇನು? .Delhi elections: 15 ಭರವಸೆ ಒಳಗೊಂಡ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಬಿಡುಗಡೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>