<p><strong>ನವದೆಹಲಿ</strong>: ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ನನ್ನ ಪತ್ನಿಯ ಹೆಸರನ್ನು ತೆಗೆದು ಹಾಕಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.</p><p>ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,‘ನನ್ನ ಪತ್ನಿ ಅನಿತಾ ಸಿಂಗ್ ಸೇರಿದಂತೆ ದೆಹಲಿಯಲ್ಲಿ ನೆಲೆಸಿರುವ ಪೂರ್ವಾಂಚಲಿ ಸಮುದಾಯದವರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲು ಬಿಜೆಪಿ ಹುನ್ನಾರ ನಡೆಸುತ್ತಿದೆ’ ಎಂದು ಹೇಳಿದರು.</p><p>ಸಂಜಯ್ ಸಿಂಗ್ ಮತ್ತು ಅವರ ಪತ್ನಿ ಅನಿತಾ ಸಿಂಗ್ ಪೂರ್ವ ಉತ್ತರ ಪ್ರದೇಶಕ್ಕೆ ಸೇರಿದ್ದರೆ, ಪೂರ್ವಾಂಚಲಿಗಳು ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದು ದಶಕಗಳಿಂದ ದೆಹಲಿಯಲ್ಲಿ ನೆಲೆಸಿದ್ದಾರೆ.</p><p>‘ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರತಿನಿಧಿಸುವ ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ತಮ್ಮ ಪತ್ನಿಯ ಹೆಸರನ್ನು ಅಳಿಸಿ ಹಾಕಲು ಡಿಸೆಂಬರ್ 25 ಮತ್ತು 26 ರಂದು ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ’ ಎಂದು ಸಂಜಯ್ ಸಿಂಗ್ ಹೇಳಿದರು.</p><p>‘ಮತದಾರರ ಪಟ್ಟಿಯಿಂದ ಪೂರ್ವಾಂಚಲಿ ಸಮುದಾಯದವರ ಹೆಸರನ್ನು ತೆಗೆದುಹಾಕುತ್ತಿರುವ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಬಿಜೆಪಿಯು ನನ್ನ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ’ ಎಂದು ಅವರು ಹೇಳಿದರು.</p><p>‘ಡಿಸೆಂಬರ್ ಮಧ್ಯಭಾಗದಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ ಸುಮಾರು 5 ಸಾವಿರ ಮತದಾರರ ಹೆಸರನ್ನು ಅಳಿಸಿ ಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ’ ಎಂದು ಭಾನುವಾರ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದರು.</p><p>ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳ ಹೆಸರನ್ನು ಎಎಪಿಯ ಆದೇಶದ ಮೇರೆಗೆ ಮತದಾರರ ಪಟ್ಟಿಗೆ ಸೇರಿಸಲಾಗಿದ್ದು, ಅಕ್ರಮ ವಲಸಿಗರನ್ನು ಎಎಪಿಯು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ನನ್ನ ಪತ್ನಿಯ ಹೆಸರನ್ನು ತೆಗೆದು ಹಾಕಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.</p><p>ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,‘ನನ್ನ ಪತ್ನಿ ಅನಿತಾ ಸಿಂಗ್ ಸೇರಿದಂತೆ ದೆಹಲಿಯಲ್ಲಿ ನೆಲೆಸಿರುವ ಪೂರ್ವಾಂಚಲಿ ಸಮುದಾಯದವರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲು ಬಿಜೆಪಿ ಹುನ್ನಾರ ನಡೆಸುತ್ತಿದೆ’ ಎಂದು ಹೇಳಿದರು.</p><p>ಸಂಜಯ್ ಸಿಂಗ್ ಮತ್ತು ಅವರ ಪತ್ನಿ ಅನಿತಾ ಸಿಂಗ್ ಪೂರ್ವ ಉತ್ತರ ಪ್ರದೇಶಕ್ಕೆ ಸೇರಿದ್ದರೆ, ಪೂರ್ವಾಂಚಲಿಗಳು ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದು ದಶಕಗಳಿಂದ ದೆಹಲಿಯಲ್ಲಿ ನೆಲೆಸಿದ್ದಾರೆ.</p><p>‘ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರತಿನಿಧಿಸುವ ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ತಮ್ಮ ಪತ್ನಿಯ ಹೆಸರನ್ನು ಅಳಿಸಿ ಹಾಕಲು ಡಿಸೆಂಬರ್ 25 ಮತ್ತು 26 ರಂದು ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ’ ಎಂದು ಸಂಜಯ್ ಸಿಂಗ್ ಹೇಳಿದರು.</p><p>‘ಮತದಾರರ ಪಟ್ಟಿಯಿಂದ ಪೂರ್ವಾಂಚಲಿ ಸಮುದಾಯದವರ ಹೆಸರನ್ನು ತೆಗೆದುಹಾಕುತ್ತಿರುವ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಬಿಜೆಪಿಯು ನನ್ನ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ’ ಎಂದು ಅವರು ಹೇಳಿದರು.</p><p>‘ಡಿಸೆಂಬರ್ ಮಧ್ಯಭಾಗದಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ ಸುಮಾರು 5 ಸಾವಿರ ಮತದಾರರ ಹೆಸರನ್ನು ಅಳಿಸಿ ಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ’ ಎಂದು ಭಾನುವಾರ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದರು.</p><p>ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳ ಹೆಸರನ್ನು ಎಎಪಿಯ ಆದೇಶದ ಮೇರೆಗೆ ಮತದಾರರ ಪಟ್ಟಿಗೆ ಸೇರಿಸಲಾಗಿದ್ದು, ಅಕ್ರಮ ವಲಸಿಗರನ್ನು ಎಎಪಿಯು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>