<p><strong>ನವದೆಹಲಿ:</strong> 'ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಚು ರೂಪಿಸಿರುವ ಬಿಜೆಪಿ, ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಅಭ್ಯರ್ಥಿಗಳಿಗೆ ತಲಾ ₹15 ಕೋಟಿ ಆಮಿಷ ಒಡ್ಡಿದೆ' ಎಂದು ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>ಈ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. </p><p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಗಂಭೀರ ಆರೋಪ ಮಾಡಿರುವ ಸಂಜಯ್ ಸಿಂಗ್, 'ಎಎಪಿಯ ಏಳು ಶಾಸಕರಿಗೆ ಕರೆ ಮಾಡಲಾಗಿದ್ದು, ಪಕ್ಷಾಂತರಗೊಂಡು ಬಿಜೆಪಿಗೆ ಸೇರಲು ತಲಾ ₹15 ಕೋಟಿ ಆಮಿಷ ಒಡ್ಡಲಾಗಿದೆ' ಎಂದು ಹೇಳಿದ್ದಾರೆ. </p><p>'ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ ಎಂಬುದು ಇದರಿಂದಲೇ ಸಾಬೀತುಗೊಂಡಿದೆ. ಅದಕ್ಕಾಗಿಯೇ ಈ ರೀತಿಯಾಗಿ ಹಿಂಬಾಗಿಲಿನಿಂದ ಪ್ರಯತ್ನ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ. </p><p>'ಬಿಜೆಪಿಯ ಕರೆಗಳನ್ನು ರೆಕಾರ್ಡ್ ಮಾಡುವಂತೆ ಮತ್ತು ಮುಖಾಮುಖಿ ಭೇಟಿಯಾದರೆ ರಹಸ್ಯ ಕ್ಯಾಮೆರಾಗಳನ್ನು ಸ್ಥಾಪಿಸುವಂತೆ ಪಕ್ಷದ ಅಭ್ಯರ್ಥಿಗಳಿಗೆ ಸಲಹೆ ನೀಡಲಾಗಿದೆ' ಎಂದು ಅವರು ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆದಿತ್ತು. ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. </p>.Delhi Exit Poll: ಬಿಜೆಪಿಗೆ ಗದ್ದುಗೆ ಎನ್ನುತ್ತಿವೆ ಸಮೀಕ್ಷೆ; AAPಗೆ 2ನೇ ಸ್ಥಾನ.Delhi Exit Poll 2025 | ಮತಗಟ್ಟೆ ಸಮೀಕ್ಷೆ ತಿರಸ್ಕರಿಸಿದ ಎಎಪಿ; ಬಿಜೆಪಿ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಚು ರೂಪಿಸಿರುವ ಬಿಜೆಪಿ, ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಅಭ್ಯರ್ಥಿಗಳಿಗೆ ತಲಾ ₹15 ಕೋಟಿ ಆಮಿಷ ಒಡ್ಡಿದೆ' ಎಂದು ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>ಈ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. </p><p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಗಂಭೀರ ಆರೋಪ ಮಾಡಿರುವ ಸಂಜಯ್ ಸಿಂಗ್, 'ಎಎಪಿಯ ಏಳು ಶಾಸಕರಿಗೆ ಕರೆ ಮಾಡಲಾಗಿದ್ದು, ಪಕ್ಷಾಂತರಗೊಂಡು ಬಿಜೆಪಿಗೆ ಸೇರಲು ತಲಾ ₹15 ಕೋಟಿ ಆಮಿಷ ಒಡ್ಡಲಾಗಿದೆ' ಎಂದು ಹೇಳಿದ್ದಾರೆ. </p><p>'ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ ಎಂಬುದು ಇದರಿಂದಲೇ ಸಾಬೀತುಗೊಂಡಿದೆ. ಅದಕ್ಕಾಗಿಯೇ ಈ ರೀತಿಯಾಗಿ ಹಿಂಬಾಗಿಲಿನಿಂದ ಪ್ರಯತ್ನ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ. </p><p>'ಬಿಜೆಪಿಯ ಕರೆಗಳನ್ನು ರೆಕಾರ್ಡ್ ಮಾಡುವಂತೆ ಮತ್ತು ಮುಖಾಮುಖಿ ಭೇಟಿಯಾದರೆ ರಹಸ್ಯ ಕ್ಯಾಮೆರಾಗಳನ್ನು ಸ್ಥಾಪಿಸುವಂತೆ ಪಕ್ಷದ ಅಭ್ಯರ್ಥಿಗಳಿಗೆ ಸಲಹೆ ನೀಡಲಾಗಿದೆ' ಎಂದು ಅವರು ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆದಿತ್ತು. ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. </p>.Delhi Exit Poll: ಬಿಜೆಪಿಗೆ ಗದ್ದುಗೆ ಎನ್ನುತ್ತಿವೆ ಸಮೀಕ್ಷೆ; AAPಗೆ 2ನೇ ಸ್ಥಾನ.Delhi Exit Poll 2025 | ಮತಗಟ್ಟೆ ಸಮೀಕ್ಷೆ ತಿರಸ್ಕರಿಸಿದ ಎಎಪಿ; ಬಿಜೆಪಿ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>