<p><strong>ನವದೆಹಲಿ</strong>: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದರು.</p><p>ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಈ ದೇಶದ ಕಾನೂನಿಗೆ ಹೆದರದ ಈ ದೊಡ್ಡ ಗೂಂಡಾ ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ಎಎಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಬಹಿರಂಗವಾಗಿ ಹಲ್ಲೆ ನಡೆಸುತ್ತಿರುವ ಈ ಗೂಂಡಾ ಯಾರು? ದೆಹಲಿ ಪೊಲೀಸರಿಗೆ ಆದೇಶ ನೀಡುತ್ತಿರುವ, ಭಯ ಮತ್ತು ಅಸಹಾಯಕತೆಯನ್ನು ಅನುಭವಿಸುವಂತೆ ಮಾಡಿರುವ ಈ ಗೂಂಡಾ ಯಾರು?’ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.</p><p>‘ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ₹25,000 ಹಣ ಉಳಿಸುತ್ತಿದೆ, ಇನ್ನೊಂದು ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ’ ಎಂದು ಬಿಜೆಪಿಯನ್ನು ಗುರಿಯಾಗಿಸಿ ಹೇಳಿದರು.</p><p>ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, ‘ವೈಯಕ್ತಿಕ ಲಾಭಕ್ಕಾಗಿ ರಾಜಿ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದರು.</p><p>ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಈ ದೇಶದ ಕಾನೂನಿಗೆ ಹೆದರದ ಈ ದೊಡ್ಡ ಗೂಂಡಾ ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ಎಎಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಬಹಿರಂಗವಾಗಿ ಹಲ್ಲೆ ನಡೆಸುತ್ತಿರುವ ಈ ಗೂಂಡಾ ಯಾರು? ದೆಹಲಿ ಪೊಲೀಸರಿಗೆ ಆದೇಶ ನೀಡುತ್ತಿರುವ, ಭಯ ಮತ್ತು ಅಸಹಾಯಕತೆಯನ್ನು ಅನುಭವಿಸುವಂತೆ ಮಾಡಿರುವ ಈ ಗೂಂಡಾ ಯಾರು?’ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.</p><p>‘ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ₹25,000 ಹಣ ಉಳಿಸುತ್ತಿದೆ, ಇನ್ನೊಂದು ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ’ ಎಂದು ಬಿಜೆಪಿಯನ್ನು ಗುರಿಯಾಗಿಸಿ ಹೇಳಿದರು.</p><p>ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, ‘ವೈಯಕ್ತಿಕ ಲಾಭಕ್ಕಾಗಿ ರಾಜಿ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>