<p><strong>ನವದೆಹಲಿ</strong>: ದೇಶದ ರಾಜಧಾನಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದು, ದೆಹಲಿಯಲ್ಲಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (ಜಿಆರ್ಎಪಿ) ಅಡಿ ತೀವ್ರ ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸದಿಂದ ವಂಚಿತರಾಗುವ ಕಟ್ಟಡ ಕಾರ್ಮಿಕರಿಗೆ ಹಣಕಾಸು ನೆರವು ನೀಡುವುದಾಗಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ.</p><p>ದೆಹಲಿಯಲ್ಲಿ 16 ದಿನಗಳಿಂದ ಜಿಆರ್ಎಪಿ ನಿರ್ಬಂಧಗಳು ಜಾರಿಯಲ್ಲಿದ್ದು, ನಗರದಾದ್ಯಂತ ಎಲ್ಲ ಕಟ್ಟಡ ನಿರ್ಮಾಣ ಕೆಲಸಗಳು ಸ್ಥಗಿತಗೊಂಡಿವೆ. ಈ ವಲಯದ ಮೇಲೆ ಅವಲಂಬಿತವಾಗಿರುವ ದಿನಗೂಲಿ ಕೆಲಸಗಾರರ ಮೇಲೆ ಇದು ಪರಿಣಾಮ ಬೀರಿದೆ. ಅಲ್ಲದೆ, ನಿರ್ಬಂಧ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೋಂದಣಿ ಮಾಡಿಕೊಂಡಿರುವ ಮತ್ತು ವೆರಿಫೈಡ್ ಕಟ್ಟಡ ಕಾರ್ಮಿಕರಿಗೆ ನೇರ ಸವಲತ್ತು ವರ್ಗಾವಣೆ(ಡಿಬಿಟಿ) ಮೂಲಕ ತಲಾ ₹10,000 ಹಣವನ್ನು ಅವರ ಖಾತೆಗಳಿಗೆ ವರ್ಗಾಯಿಸಲು ಕಾರ್ಮಿಕ ಸಚಿವಾಲಯ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.</p><p>ನಿರ್ಬಂಧ ತೆರವಾದ ಬಳಿಕವೂ ನಿರ್ಬಂಧಗಳಿದ್ದ ದಿನಗಳನ್ನು ಲೆಕ್ಕಾಚಾರ ಮಾಡಿ ಪರಿಹಾರದ ಹಣ ನೀಡಲಾಗುವುದು ಎಂದಿದ್ದಾರೆ.</p><p>ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ವೆರಿಫೈ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ದೆಹಲಿ ಸರ್ಕಾರದ ಪೋರ್ಟಲ್ನಲ್ಲಿ ನೋಂದಣಿ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕಾರ್ಮಿಕರನ್ನು ಮಿಶ್ರಾ ಒತ್ತಾಯಿಸಿದ್ದಾರೆ.</p><p>ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ನೆರವಿಗೆ ಸದಾ ಸಿದ್ಧರಿರುತ್ತಾರೆ. ಭವಿಷ್ಯದ ಮಾಲಿನ್ಯ ಸಂಬಂಧಿತ ನಿರ್ಬಂಧಗಳಿಂದ ಮಹಿಳಾ ಮತ್ತು ಪುರುಷ ಕಾರ್ಮಿಕರು ಸಂಕಷ್ಟಕ್ಕೆ ಈಡಾಗದಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.</p><p>ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಬುಧವಾರ ಎಲ್ಲ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಕಾರ್ಮಿಕರಿಗೆ ಶೇ 50ರಷ್ಟು ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿತ್ತು. ಅಲ್ಲದೆ, ಆದೇಶ ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿದೆ.</p> .ವಾಯುಮಾಲಿನ್ಯ: ದೆಹಲಿಯ ಖಾಸಗಿ, ಸರ್ಕಾರಿ ಸಂಸ್ಥೆಗಳಲ್ಲಿ ಶೇ 50ರಷ್ಟು WFH ಕಡ್ಡಾಯ.ಭಾರಿ ಕುಸಿತದ ಬಳಿಕ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ರಾಜಧಾನಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದು, ದೆಹಲಿಯಲ್ಲಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (ಜಿಆರ್ಎಪಿ) ಅಡಿ ತೀವ್ರ ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸದಿಂದ ವಂಚಿತರಾಗುವ ಕಟ್ಟಡ ಕಾರ್ಮಿಕರಿಗೆ ಹಣಕಾಸು ನೆರವು ನೀಡುವುದಾಗಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ.</p><p>ದೆಹಲಿಯಲ್ಲಿ 16 ದಿನಗಳಿಂದ ಜಿಆರ್ಎಪಿ ನಿರ್ಬಂಧಗಳು ಜಾರಿಯಲ್ಲಿದ್ದು, ನಗರದಾದ್ಯಂತ ಎಲ್ಲ ಕಟ್ಟಡ ನಿರ್ಮಾಣ ಕೆಲಸಗಳು ಸ್ಥಗಿತಗೊಂಡಿವೆ. ಈ ವಲಯದ ಮೇಲೆ ಅವಲಂಬಿತವಾಗಿರುವ ದಿನಗೂಲಿ ಕೆಲಸಗಾರರ ಮೇಲೆ ಇದು ಪರಿಣಾಮ ಬೀರಿದೆ. ಅಲ್ಲದೆ, ನಿರ್ಬಂಧ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೋಂದಣಿ ಮಾಡಿಕೊಂಡಿರುವ ಮತ್ತು ವೆರಿಫೈಡ್ ಕಟ್ಟಡ ಕಾರ್ಮಿಕರಿಗೆ ನೇರ ಸವಲತ್ತು ವರ್ಗಾವಣೆ(ಡಿಬಿಟಿ) ಮೂಲಕ ತಲಾ ₹10,000 ಹಣವನ್ನು ಅವರ ಖಾತೆಗಳಿಗೆ ವರ್ಗಾಯಿಸಲು ಕಾರ್ಮಿಕ ಸಚಿವಾಲಯ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.</p><p>ನಿರ್ಬಂಧ ತೆರವಾದ ಬಳಿಕವೂ ನಿರ್ಬಂಧಗಳಿದ್ದ ದಿನಗಳನ್ನು ಲೆಕ್ಕಾಚಾರ ಮಾಡಿ ಪರಿಹಾರದ ಹಣ ನೀಡಲಾಗುವುದು ಎಂದಿದ್ದಾರೆ.</p><p>ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ವೆರಿಫೈ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ದೆಹಲಿ ಸರ್ಕಾರದ ಪೋರ್ಟಲ್ನಲ್ಲಿ ನೋಂದಣಿ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕಾರ್ಮಿಕರನ್ನು ಮಿಶ್ರಾ ಒತ್ತಾಯಿಸಿದ್ದಾರೆ.</p><p>ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ನೆರವಿಗೆ ಸದಾ ಸಿದ್ಧರಿರುತ್ತಾರೆ. ಭವಿಷ್ಯದ ಮಾಲಿನ್ಯ ಸಂಬಂಧಿತ ನಿರ್ಬಂಧಗಳಿಂದ ಮಹಿಳಾ ಮತ್ತು ಪುರುಷ ಕಾರ್ಮಿಕರು ಸಂಕಷ್ಟಕ್ಕೆ ಈಡಾಗದಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.</p><p>ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಬುಧವಾರ ಎಲ್ಲ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಕಾರ್ಮಿಕರಿಗೆ ಶೇ 50ರಷ್ಟು ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿತ್ತು. ಅಲ್ಲದೆ, ಆದೇಶ ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿದೆ.</p> .ವಾಯುಮಾಲಿನ್ಯ: ದೆಹಲಿಯ ಖಾಸಗಿ, ಸರ್ಕಾರಿ ಸಂಸ್ಥೆಗಳಲ್ಲಿ ಶೇ 50ರಷ್ಟು WFH ಕಡ್ಡಾಯ.ಭಾರಿ ಕುಸಿತದ ಬಳಿಕ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>