<p><strong>ನವದೆಹಲಿ</strong>: ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಡಿಸೆಂಬರ್ 18ರಿಂದ ರಾಷ್ಟ್ರ ರಾಜಧಾನಿಯ ಪೆಟ್ರೋಲ್ ಪಂಪ್ಗಳಲ್ಲಿ ಇಂಧನ ತುಂಬಲು ಅವಕಾಶ ಇರುವುದಿಲ್ಲ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮಂಗಳವಾರ ಹೇಳಿದ್ದಾರೆ.</p>.<p>ಪಿಯುಸಿ ಮಾನದಂಡಗಳನ್ನು ಪಾಲಿಸಲು ವಾಹನ ಮಾಲೀಕರಿಗೆ ಒಂದು ದಿನದ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪೆಟ್ರೋಲ್ ಪಂಪ್ಗಳಲ್ಲಿ ಅಳವಡಿಸಲಾದ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಪಿಯುಸಿ ಪ್ರಮಾಣಪತ್ರ ಇಲ್ಲದ ವಾಹನಗಳ್ನು ಪತ್ತೆ ಹಚ್ಚಲಿವೆ. ಗುರುವಾರದಿಂದ ಅಂತಹ ವಾಹನಗಳಿಗೆ ಯಾವುದೇ ಗೊಂದಲವಿಲ್ಲದೆ ಇಂಧನ ನಿರಾಕರಿಸಲಾಗುತ್ತದೆ ಎಂದು ಸಿರ್ಸಾ ಹೇಳಿದ್ದಾರೆ.</p>.<p>‘ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರದ 8 ಲಕ್ಷಕ್ಕೂ ಹೆಚ್ಚು ವಾಹನ ಮಾಲೀಕರಿಗೆ ಈಗಾಗಲೆ ದಂಡ ವಿಧಿಸಲಾಗಿದೆ. ಗುರುವಾರದಿಂದ ಮತ್ತು ಮುಂದಿನ ಆದೇಶದವರೆಗೆ ದೆಹಲಿಯ ಹೊರಗಿನಿಂದ ಬರುವ ಬಿಎಸ್–6 ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾದ ವಾಹನಗಳಿಗೆ ಮಾತ್ರ ನಗರವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಡಿಸೆಂಬರ್ 18ರಿಂದ ರಾಷ್ಟ್ರ ರಾಜಧಾನಿಯ ಪೆಟ್ರೋಲ್ ಪಂಪ್ಗಳಲ್ಲಿ ಇಂಧನ ತುಂಬಲು ಅವಕಾಶ ಇರುವುದಿಲ್ಲ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮಂಗಳವಾರ ಹೇಳಿದ್ದಾರೆ.</p>.<p>ಪಿಯುಸಿ ಮಾನದಂಡಗಳನ್ನು ಪಾಲಿಸಲು ವಾಹನ ಮಾಲೀಕರಿಗೆ ಒಂದು ದಿನದ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪೆಟ್ರೋಲ್ ಪಂಪ್ಗಳಲ್ಲಿ ಅಳವಡಿಸಲಾದ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಪಿಯುಸಿ ಪ್ರಮಾಣಪತ್ರ ಇಲ್ಲದ ವಾಹನಗಳ್ನು ಪತ್ತೆ ಹಚ್ಚಲಿವೆ. ಗುರುವಾರದಿಂದ ಅಂತಹ ವಾಹನಗಳಿಗೆ ಯಾವುದೇ ಗೊಂದಲವಿಲ್ಲದೆ ಇಂಧನ ನಿರಾಕರಿಸಲಾಗುತ್ತದೆ ಎಂದು ಸಿರ್ಸಾ ಹೇಳಿದ್ದಾರೆ.</p>.<p>‘ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರದ 8 ಲಕ್ಷಕ್ಕೂ ಹೆಚ್ಚು ವಾಹನ ಮಾಲೀಕರಿಗೆ ಈಗಾಗಲೆ ದಂಡ ವಿಧಿಸಲಾಗಿದೆ. ಗುರುವಾರದಿಂದ ಮತ್ತು ಮುಂದಿನ ಆದೇಶದವರೆಗೆ ದೆಹಲಿಯ ಹೊರಗಿನಿಂದ ಬರುವ ಬಿಎಸ್–6 ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾದ ವಾಹನಗಳಿಗೆ ಮಾತ್ರ ನಗರವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>