<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಆಗಸ್ಟ್ 5ರ ವರೆಗೆ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. </p>.<p>ಹಲವೆಡೆ ಮಳೆ ನೀರು ನಿಂತ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. </p>.<p>ನಗರದ ಹಲವು ಪ್ರದೇಶಗಳಲ್ಲಿ ಮನೆಗಳೂ ಕುಸಿದಿವೆ. ಜನರು ಮನೆಯಿಂದ ಹೊರಬರಬಾರದು. ಬಾಗಿಲುಗಳು ಹಾಗೂ ಕಿಟಕಿಗಳನ್ನು ಭದ್ರವಾಗಿ ಹಾಕಿಕೊಳ್ಳಬೇಕು. ಅನಗತ್ಯ ಪ್ರಯಾಣ ಕೈಗೊಳ್ಳದಂತೆಯೂ ಇಲಾಖೆ ಸಲಹೆ ನೀಡಿದೆ.</p>.<p>ಪರಿಹಾರ ಕಾರ್ಯ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವುದಕ್ಕಾಗಿ ಎಲ್ಲ ಅಧಿಕಾರಿಗಳು ಸನ್ನದ್ಧರಿರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸೂಚನೆ ನೀಡಿದ್ದಾರೆ.</p>.<p>ಮಾರ್ಗ ಬದಲು: ಭಾರಿ ಮಳೆ ಕಾರಣ, ಕನಿಷ್ಠ 10 ವಿಮಾನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪ್ರತಿಕೂಲ ಹವಾಮಾನ ಕಾರಣ ಸಂಜೆ 7.30ರ ನಂತರ ವಿಮಾನಗಳ ಮಾರ್ಗಗಳ ಬದಲಾವಣೆ ಮಾಡಲಾಯಿತು. ಜೈಪುರನತ್ತ 8 ಹಾಗೂ ಲಖನೌನತ್ತ ಎರಡು ವಿಮಾನಗಳನ್ನು ಕಳುಹಿಸಲಾಯಿತು’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರತಿಕೂಲ ಹವಾಮಾನ ಕಾರಣ ದೆಹಲಿಗೆ ಬರುವ ಹಾಗೂ ಇಲ್ಲಿಂದ ಹೊರಡುವ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಲಿದೆ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆ ತಿಳಿಸಿದೆ.</p>.<p>‘ದೆಹಲಿಯಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರಯಾಣಿಕರು ತಾವು ಪ್ರಯಾಣಿಸಬೇಕಾದ ವಿಮಾನಗಳ ಸಂಚಾರ ಕುರಿತು ಪರಿಶೀಲಿಸಬೇಕು’ ಎಂದು ಇಂಡಿಗೊ ಸಂಸ್ಥೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಆಗಸ್ಟ್ 5ರ ವರೆಗೆ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. </p>.<p>ಹಲವೆಡೆ ಮಳೆ ನೀರು ನಿಂತ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. </p>.<p>ನಗರದ ಹಲವು ಪ್ರದೇಶಗಳಲ್ಲಿ ಮನೆಗಳೂ ಕುಸಿದಿವೆ. ಜನರು ಮನೆಯಿಂದ ಹೊರಬರಬಾರದು. ಬಾಗಿಲುಗಳು ಹಾಗೂ ಕಿಟಕಿಗಳನ್ನು ಭದ್ರವಾಗಿ ಹಾಕಿಕೊಳ್ಳಬೇಕು. ಅನಗತ್ಯ ಪ್ರಯಾಣ ಕೈಗೊಳ್ಳದಂತೆಯೂ ಇಲಾಖೆ ಸಲಹೆ ನೀಡಿದೆ.</p>.<p>ಪರಿಹಾರ ಕಾರ್ಯ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವುದಕ್ಕಾಗಿ ಎಲ್ಲ ಅಧಿಕಾರಿಗಳು ಸನ್ನದ್ಧರಿರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸೂಚನೆ ನೀಡಿದ್ದಾರೆ.</p>.<p>ಮಾರ್ಗ ಬದಲು: ಭಾರಿ ಮಳೆ ಕಾರಣ, ಕನಿಷ್ಠ 10 ವಿಮಾನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪ್ರತಿಕೂಲ ಹವಾಮಾನ ಕಾರಣ ಸಂಜೆ 7.30ರ ನಂತರ ವಿಮಾನಗಳ ಮಾರ್ಗಗಳ ಬದಲಾವಣೆ ಮಾಡಲಾಯಿತು. ಜೈಪುರನತ್ತ 8 ಹಾಗೂ ಲಖನೌನತ್ತ ಎರಡು ವಿಮಾನಗಳನ್ನು ಕಳುಹಿಸಲಾಯಿತು’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರತಿಕೂಲ ಹವಾಮಾನ ಕಾರಣ ದೆಹಲಿಗೆ ಬರುವ ಹಾಗೂ ಇಲ್ಲಿಂದ ಹೊರಡುವ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಲಿದೆ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆ ತಿಳಿಸಿದೆ.</p>.<p>‘ದೆಹಲಿಯಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರಯಾಣಿಕರು ತಾವು ಪ್ರಯಾಣಿಸಬೇಕಾದ ವಿಮಾನಗಳ ಸಂಚಾರ ಕುರಿತು ಪರಿಶೀಲಿಸಬೇಕು’ ಎಂದು ಇಂಡಿಗೊ ಸಂಸ್ಥೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>