ಗುರುವಾರ, 13 ನವೆಂಬರ್ 2025
×
ADVERTISEMENT
ADVERTISEMENT

Delhi Blast: ಜನವರಿಯಲ್ಲೇ ಸಂಚು ಶುರು; ಕೆಂಪುಕೋಟೆ ಬಳಿ ಹಲವು ಬಾರಿ ಸಂಚಾರ

ಮೊಬೈಲ್‌ ಗೋಪುರ ಲೊಕೇಷನ್‌ ದತ್ತಾಂಶದಿಂದ ಪತ್ತೆ
Published : 12 ನವೆಂಬರ್ 2025, 23:14 IST
Last Updated : 12 ನವೆಂಬರ್ 2025, 23:14 IST
ಫಾಲೋ ಮಾಡಿ
Comments
ಭಯೋತ್ಪಾದಕ ಕೃತ್ಯ: ಸರ್ಕಾರ
ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಕೃತ್ಯ’ ಎಂದು ಕರೆದಿರುವ ಕೇಂದ್ರ ಸರ್ಕಾರ, ಈ ಪ್ರಕರಣವನ್ನು ತನಿಖಾ ಸಂಸ್ಥೆಗಳು ಅತ್ಯಂತ ತ್ವರಿತ ಮತ್ತು ವೃತ್ತಿಪರತೆಯಿಂದ ನಿಭಾಯಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ವಿಳಂಬವಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣು ನೀತಿಗೆ ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಲಾಯಿತು. ಈ ಘಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು. ಅಲ್ಲದೆ ಜೀವಹಾನಿ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು.
ಮತ್ತೊಂದು ಕಾರು ಪತ್ತೆ
ಸ್ಫೋಟಗೊಂಡ ಕಾರನ್ನು ಓಡಿಸುತ್ತಿದ್ದ ಡಾ. ಉಮರ್ ನಬಿ ಮಾಲೀಕತ್ವದ ಕೆಂಪು ಬಣ್ಣದ ‘ಫೋರ್ಡ್‌ ಎಕೋಸ್ಪೋರ್ಟ್‌’ ಕಾರನ್ನು ತೀವ್ರ ಶೋಧದ ಬಳಿಕ ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಫರೀದಾಬಾದ್‌ ಬಳಿ ಕಾರು ಪತ್ತೆಯಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಹುಂಡೈ ಐ20 ಕಾರಿನ ಜತೆಗೆ ‘ಫೋರ್ಡ್‌ ಎಕೋಸ್ಪೋರ್ಟ್‌’ ಕಾರನ್ನೂ ಸ್ಫೋಟಕ್ಕೆ ಬಳಸುವ ಸಂಚನ್ನು ಉಮರ್‌ ಮಾಡಿರಬಹುದು ಎಂಬ ಶಂಕೆಯಿದೆ. ಈ ದಿಸೆಯಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಹಲವೆಡೆ ಶೋಧ
ಕಾರು ಸ್ಫೋಟ ಪ್ರಕರಣದ ಬೆನ್ನುಬಿದ್ದಿರುವ ಪೊಲೀಸರು, ನಿಷೇಧಿತ ಜಮಾತ್‌–ಎ–ಇಸ್ಲಾಮಿ ಸಂಘಟನೆಯೊಂದಿಗೆ ನಂಟು ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಿಸಿದ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಬುಧವಾರ ಶೋಧ ನಡೆಸಿದರು. ಕುಲ್ಗಾಂ, ಪುಲ್ವಾಮಾ, ಶೋಪಿಯಾನ್‌, ಬಾರಾಮುಲ್ಲಾ, ಗಾಂಧೇರಬಲ್‌ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ADVERTISEMENT
ADVERTISEMENT
ADVERTISEMENT