<p><strong>ನವದೆಹಲಿ:</strong> ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. </p><p>ನವೆಂಬರ್ 10, ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಈ ಕಾರು ಸ್ಫೋಟದಲ್ಲಿ ಗಾಯಗೊಂಡು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಲಾಲ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸ್ಫೋಟದಲ್ಲಿ ಬಿಲಾಲ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಅವರ ಸಾವಿನ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ ದೊರಕಿದೆ. ಮರಣೋತ್ತರ ಪರೀಕ್ಷೆಯನ್ನು ಇಂದು ಮಧ್ಯಾಹ್ನ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. </p><p>ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು 'ಭಯೋತ್ಪಾದಕ ಕೃತ್ಯ' ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ಸಮಗ್ರ ತನಿಖೆ ನಡೆಸಲಾಗುತ್ತಿದೆ. </p>.ಆಳ ಅಗಲ | ಭಯೋತ್ಪಾದನೆಯ 'ಹೊಸ' ಮುಖ: 'ವೈಟ್ ಕಾಲರ್' ಉಗ್ರರು.Delhi Blast: ಬಾಬರಿ ಮಸೀದಿ ಧ್ವಂಸ ದಿನವಾದ ಡಿ. 6ರಂದು ಪ್ರಬಲ ಸ್ಫೋಟದ ಪಿತೂರಿ.Delhi Blast: ಜನವರಿಯಲ್ಲೇ ಸಂಚು ಶುರು; ಕೆಂಪುಕೋಟೆ ಬಳಿ ಹಲವು ಬಾರಿ ಸಂಚಾರ.Delhi Blast| ಕಾರು ಚಲಾಯಿಸುತ್ತಿದ್ದದ್ದು ಡಾ.ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. </p><p>ನವೆಂಬರ್ 10, ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಈ ಕಾರು ಸ್ಫೋಟದಲ್ಲಿ ಗಾಯಗೊಂಡು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಲಾಲ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸ್ಫೋಟದಲ್ಲಿ ಬಿಲಾಲ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಅವರ ಸಾವಿನ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ ದೊರಕಿದೆ. ಮರಣೋತ್ತರ ಪರೀಕ್ಷೆಯನ್ನು ಇಂದು ಮಧ್ಯಾಹ್ನ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. </p><p>ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು 'ಭಯೋತ್ಪಾದಕ ಕೃತ್ಯ' ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ಸಮಗ್ರ ತನಿಖೆ ನಡೆಸಲಾಗುತ್ತಿದೆ. </p>.ಆಳ ಅಗಲ | ಭಯೋತ್ಪಾದನೆಯ 'ಹೊಸ' ಮುಖ: 'ವೈಟ್ ಕಾಲರ್' ಉಗ್ರರು.Delhi Blast: ಬಾಬರಿ ಮಸೀದಿ ಧ್ವಂಸ ದಿನವಾದ ಡಿ. 6ರಂದು ಪ್ರಬಲ ಸ್ಫೋಟದ ಪಿತೂರಿ.Delhi Blast: ಜನವರಿಯಲ್ಲೇ ಸಂಚು ಶುರು; ಕೆಂಪುಕೋಟೆ ಬಳಿ ಹಲವು ಬಾರಿ ಸಂಚಾರ.Delhi Blast| ಕಾರು ಚಲಾಯಿಸುತ್ತಿದ್ದದ್ದು ಡಾ.ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>