<p><strong>ನವದೆಹಲಿ:</strong> ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಹಾಗೂ ಧಾರ್ಮಿಕ ಬೋಧಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಕಾರು ಸ್ಫೋಟದ ಬೆನ್ನಲ್ಲೇ ಮುಜಮ್ಮಿಲ್ ಗನಿ, ಅದಿಲ್ ರಾಥರ್, ಶಹೀನಾ ಸಯೀದ್ ಮತ್ತು ಮೌಲ್ವಿ ಇರ್ಫಾನ್ ಅಹ್ಮದ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದರು. </p><p>ದೆಹಲಿ ಸ್ಫೋಟದಲ್ಲಿ ಅಮಾಯಕರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಲ್ಲಿ ಆರೋಪಿಗಳ ಪಾತ್ರ ಅಡಗಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ. </p><p>ನವೆಂಬರ್ 11ರಂದು ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಇದರೊಂದಿಗೆ ಪ್ರಕರಣ ದಾಖಲಿಸಲ್ಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. </p><p>ಎನ್ಐಎ ಈಗಾಗಲೇ ಅಮೀರ್ ರಶೀದ್ ಅಲಿ ಮತ್ತು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂಬಾತನನ್ನು ಬಂಧಿಸಿದೆ. </p>.Delhi Red Fort Blast: ಸಹ ಸಂಚುಕೋರ ಬಿಲಾಲ್ 10 ದಿನ ಎನ್ಐಎ ಕಸ್ಟಡಿಗೆ .Delhi Blast | ಆತ್ಮಾಹುತಿ ದಾಳಿ ‘ಹುತಾತ್ಮ ಕಾರ್ಯಾಚರಣೆ‘: ಉಮರ್ ವಿಡಿಯೊ ಬಹಿರಂಗ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಹಾಗೂ ಧಾರ್ಮಿಕ ಬೋಧಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಕಾರು ಸ್ಫೋಟದ ಬೆನ್ನಲ್ಲೇ ಮುಜಮ್ಮಿಲ್ ಗನಿ, ಅದಿಲ್ ರಾಥರ್, ಶಹೀನಾ ಸಯೀದ್ ಮತ್ತು ಮೌಲ್ವಿ ಇರ್ಫಾನ್ ಅಹ್ಮದ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದರು. </p><p>ದೆಹಲಿ ಸ್ಫೋಟದಲ್ಲಿ ಅಮಾಯಕರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಲ್ಲಿ ಆರೋಪಿಗಳ ಪಾತ್ರ ಅಡಗಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ. </p><p>ನವೆಂಬರ್ 11ರಂದು ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಇದರೊಂದಿಗೆ ಪ್ರಕರಣ ದಾಖಲಿಸಲ್ಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. </p><p>ಎನ್ಐಎ ಈಗಾಗಲೇ ಅಮೀರ್ ರಶೀದ್ ಅಲಿ ಮತ್ತು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂಬಾತನನ್ನು ಬಂಧಿಸಿದೆ. </p>.Delhi Red Fort Blast: ಸಹ ಸಂಚುಕೋರ ಬಿಲಾಲ್ 10 ದಿನ ಎನ್ಐಎ ಕಸ್ಟಡಿಗೆ .Delhi Blast | ಆತ್ಮಾಹುತಿ ದಾಳಿ ‘ಹುತಾತ್ಮ ಕಾರ್ಯಾಚರಣೆ‘: ಉಮರ್ ವಿಡಿಯೊ ಬಹಿರಂಗ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>