<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ದಶಕಕ್ಕೂ ಹೆಚ್ಚು ಅವಧಿವರೆಗೆ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರ ಕಳೆದುಕೊಂಡಿದ್ದಲ್ಲದೆ, ಮಾಜಿ ಮುಖ್ಯಮಂತ್ರಿ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸಿದ್ದ ನವದೆಹಲಿ ಕ್ಷೇತ್ರದಲ್ಲೂ ಸೋಲಿನ ರುಚಿ ಅನುಭವಿಸಿದ್ದಾರೆ. </p><p>ಪ್ರತಿಷ್ಠಿತ ಕ್ಷೇತ್ರವಾಗಿದ್ದ ನವದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು 30,088 ಮತಗಳನ್ನು ಗಳಿಸಿದ್ದು, 4,089 ಮತಗಳ ಅಂತರದಿಂದ ಅರವಿಂದ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ. </p><p>ಇದೇ ಕ್ಷೇತ್ರದಲ್ಲಿ ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ಅವರು 4,541 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ. ಉಳಿದಂತೆ ಬಿಎಸ್ಪಿ ಅಭ್ಯರ್ಥಿ ವೀರೇಂದ್ರ 142 ಮತಗಳು ಮತಗಳನ್ನು ಪಡೆದಿದ್ದಾರೆ. </p><p>ಈ ಮೂಲಕ ಬಿಜೆಪಿ ಎರಡನೇ ಬಾರಿಗೆ ನವದೆಹಲಿ ವಿಧಾನಸಭಾ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಇದೇ ಕ್ಷೇತ್ರದಲ್ಲಿ 2013ರಲ್ಲಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸುವ ಮೂಲಕ ಕೇಜ್ರಿವಾಲ್ ಅವರು 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿದ್ದರು.</p><p>ಮಾಜಿ ಮಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್, ನವದೆಹಲಿ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದು, ಜನವರಿಯಲ್ಲಿ ಪ್ರಚಾರ ಆರಂಭಿಸಿದ್ದರು. ಇದೀಗ ಗೆಲುವಿನ ಬಳಿಕ ಪರ್ವೇಶ್ ಅವರೇ ‘ದೆಹಲಿ ಸಿಎಂ’ ಎಂದು ಅವರ ಬೆಂಬಲಿಗರು ಬಿಂಬಿಸಿದ್ದಾರೆ.</p><p>ಚುನಾವಣಾ ಫಲಿತಾಂಶದ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪರ್ವೇಶ್, ‘ಕತ್ತಲೆ ದೂರವಾಯಿತು... ಸೂರ್ಯ ಉದಯಿಸಿತು... ಕಮಲ ಅರಳಿತು. ದೆಹಲಿ ಅಭಿವೃದ್ಧಿಯನ್ನು ಆಯ್ಕೆ ಮಾಡಿದೆ. ಈ ಗೆಲುವು ದೆಹಲಿ ಜನರ ನಂಬಿಕೆಗೆ ಸಂದ ಜಯ. ಈ ಗೆಲುವು ದೆಹಲಿಯ ಭವಿಷ್ಯಕ್ಕಾಗಿ’ ಎಂದು ತಿಳಿಸಿದ್ದಾರೆ. </p><p>ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಾಯಕತ್ವಕ್ಕಾಗಿ ಮತ್ತು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ಮತ್ತು ಜನರ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ ಎಂದು ಪರ್ವೇಶ್ ಹೇಳಿದ್ದಾರೆ. </p>. <p>ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರೂ ಆಗಿರುವ ವರ್ಮಾ, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ 2013, 2015 ಹಾಗೂ 2020ರಲ್ಲಿ ಗೆಲುವು ಸಾಧಿಸಿದ್ದ ಕೇಜ್ರಿವಾಲ್, ಈ ಬಾರಿ ವರ್ಮಾ ಎದುರು ಸೋಲು ಕಂಡಿದ್ದಾರೆ.</p><p>70 ಸದಸ್ಯ ಬಲದ ದೆಹಲ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. 48 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಭಾರಿ ಬಹುಮತ ಸಾದಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ದಶಕಕ್ಕೂ ಹೆಚ್ಚು ಅವಧಿವರೆಗೆ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರ ಕಳೆದುಕೊಂಡಿದ್ದಲ್ಲದೆ, ಮಾಜಿ ಮುಖ್ಯಮಂತ್ರಿ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸಿದ್ದ ನವದೆಹಲಿ ಕ್ಷೇತ್ರದಲ್ಲೂ ಸೋಲಿನ ರುಚಿ ಅನುಭವಿಸಿದ್ದಾರೆ. </p><p>ಪ್ರತಿಷ್ಠಿತ ಕ್ಷೇತ್ರವಾಗಿದ್ದ ನವದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು 30,088 ಮತಗಳನ್ನು ಗಳಿಸಿದ್ದು, 4,089 ಮತಗಳ ಅಂತರದಿಂದ ಅರವಿಂದ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ. </p><p>ಇದೇ ಕ್ಷೇತ್ರದಲ್ಲಿ ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ಅವರು 4,541 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ. ಉಳಿದಂತೆ ಬಿಎಸ್ಪಿ ಅಭ್ಯರ್ಥಿ ವೀರೇಂದ್ರ 142 ಮತಗಳು ಮತಗಳನ್ನು ಪಡೆದಿದ್ದಾರೆ. </p><p>ಈ ಮೂಲಕ ಬಿಜೆಪಿ ಎರಡನೇ ಬಾರಿಗೆ ನವದೆಹಲಿ ವಿಧಾನಸಭಾ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಇದೇ ಕ್ಷೇತ್ರದಲ್ಲಿ 2013ರಲ್ಲಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸುವ ಮೂಲಕ ಕೇಜ್ರಿವಾಲ್ ಅವರು 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿದ್ದರು.</p><p>ಮಾಜಿ ಮಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್, ನವದೆಹಲಿ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದು, ಜನವರಿಯಲ್ಲಿ ಪ್ರಚಾರ ಆರಂಭಿಸಿದ್ದರು. ಇದೀಗ ಗೆಲುವಿನ ಬಳಿಕ ಪರ್ವೇಶ್ ಅವರೇ ‘ದೆಹಲಿ ಸಿಎಂ’ ಎಂದು ಅವರ ಬೆಂಬಲಿಗರು ಬಿಂಬಿಸಿದ್ದಾರೆ.</p><p>ಚುನಾವಣಾ ಫಲಿತಾಂಶದ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪರ್ವೇಶ್, ‘ಕತ್ತಲೆ ದೂರವಾಯಿತು... ಸೂರ್ಯ ಉದಯಿಸಿತು... ಕಮಲ ಅರಳಿತು. ದೆಹಲಿ ಅಭಿವೃದ್ಧಿಯನ್ನು ಆಯ್ಕೆ ಮಾಡಿದೆ. ಈ ಗೆಲುವು ದೆಹಲಿ ಜನರ ನಂಬಿಕೆಗೆ ಸಂದ ಜಯ. ಈ ಗೆಲುವು ದೆಹಲಿಯ ಭವಿಷ್ಯಕ್ಕಾಗಿ’ ಎಂದು ತಿಳಿಸಿದ್ದಾರೆ. </p><p>ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಾಯಕತ್ವಕ್ಕಾಗಿ ಮತ್ತು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ಮತ್ತು ಜನರ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ ಎಂದು ಪರ್ವೇಶ್ ಹೇಳಿದ್ದಾರೆ. </p>. <p>ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರೂ ಆಗಿರುವ ವರ್ಮಾ, 'ದೆಹಲಿ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಎಲ್ಲರೂ ಒಟ್ಟಾಗಿ, ಉಜ್ವಲ ಭವಿಷ್ಯ ನಿರ್ಮಿಸೋಣ' ಎಂದು ಕರೆ ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ 2013, 2015 ಹಾಗೂ 2020ರಲ್ಲಿ ಗೆಲುವು ಸಾಧಿಸಿದ್ದ ಕೇಜ್ರಿವಾಲ್, ಈ ಬಾರಿ ವರ್ಮಾ ಎದುರು ಸೋಲು ಕಂಡಿದ್ದಾರೆ.</p><p>70 ಸದಸ್ಯ ಬಲದ ದೆಹಲ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. 48 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಭಾರಿ ಬಹುಮತ ಸಾದಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>