<p><strong>ನವದೆಹಲಿ</strong>: 2020ರ ದೆಹಲಿ ಗಲಭೆಗೆ ಸಂಚು ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿಗಳ ಪೈಕಿ ಐವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಿಗೆ, ಮತ್ತೊಬ್ಬ ಆರೋಪಿಯು ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಸಿಎಎ/ಎನ್ಆರ್ಸಿ ವಿರೋಧಿ ಸಭೆಯ 11 ಸಂಘಟಕರು ಮತ್ತು ಭಾಷಣಕಾರರಲ್ಲಿ ಒಬ್ಬರಾದ ಸಲೀಂ ಮಲಿಕ್ ಅಲಿಯಾಸ್ ಮುನ್ನಾ ಅವರು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೈ ಮುಂದೆ ತಮ್ಮ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.</p>.<p>ಕ್ರಿಮಿನಲ್ ಪಿತೂರಿ ಆರೋಪದಡಿ ಸಲೀಂ ವಿರುದ್ಧ ನ್ಯಾಯಾಲಯದಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಆರೋಪ ಎದುರಿಸುತ್ತಿರುವ ಮತ್ತೊಬ್ಬ ಆರೋಪಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಮಲಿಕ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಜ.8ರಂದು ವಿಚಾರಣೆಗಾಗಿ ಪಟ್ಟಿ ಮಾಡಿದೆ.</p>.<p>ಬಿಡುಗಡೆ ಆದೇಶ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿರುವ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ. </p>.<p>ಪ್ರಕರಣದ ಐದನೇ ಆರೋಪಿ ಶದಾಬ್ ಅಹ್ಮದ್ ಅವರಿಗೂ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಆದರೆ, ಜಾಮೀನಿಗೆ ಸಂಬಂಧಿಸಿದ ಭದ್ರತಾ ಬಾಂಡ್ಗಳನ್ನು ಸಲ್ಲಿಸಲು ಅವರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2020ರ ದೆಹಲಿ ಗಲಭೆಗೆ ಸಂಚು ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿಗಳ ಪೈಕಿ ಐವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಿಗೆ, ಮತ್ತೊಬ್ಬ ಆರೋಪಿಯು ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಸಿಎಎ/ಎನ್ಆರ್ಸಿ ವಿರೋಧಿ ಸಭೆಯ 11 ಸಂಘಟಕರು ಮತ್ತು ಭಾಷಣಕಾರರಲ್ಲಿ ಒಬ್ಬರಾದ ಸಲೀಂ ಮಲಿಕ್ ಅಲಿಯಾಸ್ ಮುನ್ನಾ ಅವರು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೈ ಮುಂದೆ ತಮ್ಮ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.</p>.<p>ಕ್ರಿಮಿನಲ್ ಪಿತೂರಿ ಆರೋಪದಡಿ ಸಲೀಂ ವಿರುದ್ಧ ನ್ಯಾಯಾಲಯದಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಆರೋಪ ಎದುರಿಸುತ್ತಿರುವ ಮತ್ತೊಬ್ಬ ಆರೋಪಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಮಲಿಕ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಜ.8ರಂದು ವಿಚಾರಣೆಗಾಗಿ ಪಟ್ಟಿ ಮಾಡಿದೆ.</p>.<p>ಬಿಡುಗಡೆ ಆದೇಶ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿರುವ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ. </p>.<p>ಪ್ರಕರಣದ ಐದನೇ ಆರೋಪಿ ಶದಾಬ್ ಅಹ್ಮದ್ ಅವರಿಗೂ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಆದರೆ, ಜಾಮೀನಿಗೆ ಸಂಬಂಧಿಸಿದ ಭದ್ರತಾ ಬಾಂಡ್ಗಳನ್ನು ಸಲ್ಲಿಸಲು ಅವರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>