<p><strong>ನವದೆಹಲಿ:</strong> 2020ರ ದೆಹಲಿ ಗಲಭೆಗೆ ಪಿತೂರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಐವರು ಆರೋಪಿಗಳ ಪೈಕಿ ನಾಲ್ವರು ಸಲ್ಲಿಸಿದ ದಾಖಲೆಗಳು ಮತ್ತು ಶ್ಯೂರಿಟಿಗಳನ್ನು ಪರಿಶೀಲಿಸಲು ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದ್ದು, ಅವರ ಬಿಡುಗಡೆ ಒಂದು ದಿನ ವಿಳಂಬವಾಗಿದೆ.</p>.<p>ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ 11 ಷರತ್ತುಗಳನ್ನು ವಿಧಿಸಿತ್ತು.</p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸಮೀರ್ ಬಾಜಪೈ ಅವರು ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮದ್ ಸಲೀಂ ಖಾನ್ ಸಲ್ಲಿಸಿದ ತಲಾ ₹2 ಲಕ್ಷ ಮೊತ್ತದ ಜಾಮೀನು ಬಾಂಡ್ಗಳು ಮತ್ತು ಇಬ್ಬರ ಶ್ಯೂರಿಟಿಗಳನ್ನು ಅಂಗೀಕರಿಸಿದರು. ಬುಧವಾರದೊಳಗೆ ದಾಖಲೆಗಳನ್ನು ಪರಿಶೀಲಿಸುವಂತೆ ಪೊಲೀಸರಿಗೆ ಸೂಚಿಸಿದರು.</p>.<p>ಐದನೇ ಆರೋಪಿ ಶಾದಾಬ್ ಅಹ್ಮದ್ ಜಾಮೀನು ಬಾಂಡ್ ಸಲ್ಲಿಸಲು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.</p>.<p>ದಾಖಲೆ ಪರಿಶೀಲನೆಯ ಅಗತ್ಯವನ್ನು ಪ್ರಶ್ನಿಸಿದ ಮೀರನ್ ಹೈದರ್ ಪರ ವಕೀಲ ಎಂ.ಎನ್. ಖಾನ್, ಶ್ಯೂರಿಟಿ ಬಾಂಡ್ ಸಲ್ಲಿಸಿದ ವ್ಯಕ್ತಿ ತನ್ನ ಕಕ್ಷಿದಾರರ ಸಂಬಂಧಿಯಾಗಿದ್ದು, ಅದೇ ನಿವಾಸದಲ್ಲಿ ವಾಸಿಸುತ್ತಿದ್ದಾರೆ ಎಂದು ವಾದಿಸಿದರು. ನಂತರ, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 7ಕ್ಕೆ ನಿಗದಿಪಡಿಸಿತು.</p>.<p>ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿತ್ತು. ಇತರ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2020ರ ದೆಹಲಿ ಗಲಭೆಗೆ ಪಿತೂರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಐವರು ಆರೋಪಿಗಳ ಪೈಕಿ ನಾಲ್ವರು ಸಲ್ಲಿಸಿದ ದಾಖಲೆಗಳು ಮತ್ತು ಶ್ಯೂರಿಟಿಗಳನ್ನು ಪರಿಶೀಲಿಸಲು ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದ್ದು, ಅವರ ಬಿಡುಗಡೆ ಒಂದು ದಿನ ವಿಳಂಬವಾಗಿದೆ.</p>.<p>ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ 11 ಷರತ್ತುಗಳನ್ನು ವಿಧಿಸಿತ್ತು.</p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸಮೀರ್ ಬಾಜಪೈ ಅವರು ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮದ್ ಸಲೀಂ ಖಾನ್ ಸಲ್ಲಿಸಿದ ತಲಾ ₹2 ಲಕ್ಷ ಮೊತ್ತದ ಜಾಮೀನು ಬಾಂಡ್ಗಳು ಮತ್ತು ಇಬ್ಬರ ಶ್ಯೂರಿಟಿಗಳನ್ನು ಅಂಗೀಕರಿಸಿದರು. ಬುಧವಾರದೊಳಗೆ ದಾಖಲೆಗಳನ್ನು ಪರಿಶೀಲಿಸುವಂತೆ ಪೊಲೀಸರಿಗೆ ಸೂಚಿಸಿದರು.</p>.<p>ಐದನೇ ಆರೋಪಿ ಶಾದಾಬ್ ಅಹ್ಮದ್ ಜಾಮೀನು ಬಾಂಡ್ ಸಲ್ಲಿಸಲು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.</p>.<p>ದಾಖಲೆ ಪರಿಶೀಲನೆಯ ಅಗತ್ಯವನ್ನು ಪ್ರಶ್ನಿಸಿದ ಮೀರನ್ ಹೈದರ್ ಪರ ವಕೀಲ ಎಂ.ಎನ್. ಖಾನ್, ಶ್ಯೂರಿಟಿ ಬಾಂಡ್ ಸಲ್ಲಿಸಿದ ವ್ಯಕ್ತಿ ತನ್ನ ಕಕ್ಷಿದಾರರ ಸಂಬಂಧಿಯಾಗಿದ್ದು, ಅದೇ ನಿವಾಸದಲ್ಲಿ ವಾಸಿಸುತ್ತಿದ್ದಾರೆ ಎಂದು ವಾದಿಸಿದರು. ನಂತರ, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 7ಕ್ಕೆ ನಿಗದಿಪಡಿಸಿತು.</p>.<p>ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿತ್ತು. ಇತರ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>