<p><strong>ನವದೆಹಲಿ:</strong> ದೆಹಲಿಯ ಈಶಾನ್ಯ ಭಾಗದಲ್ಲಿ 2020ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ವಜಾಗೊಳಿಸಿದೆ.</p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರು ಅರ್ಜಿ ವಿಚಾರಣೆ ನಡೆಸಿದರು.</p>.<p>‘ಸೋದರ ಸಂಬಂಧಿ ಮೃತಪಟ್ಟಿದ್ದು, 40 ದಿನ ನಡೆಸುವ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಬೇಕು. ತಾಯಿಯು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಆಕೆಯ ಆರೈಕೆ ಮಾಡಬೇಕಾಗಿರುವ ಕಾರಣ 15 ದಿನಗಳ ಮಧ್ಯಂತರ ಜಾಮೀನು ನೀಡಬೇಕು’ ಎಂದು ಖಾಲಿದ್ ಅರ್ಜಿ ಸಲ್ಲಿಸಿದ್ದರು.</p>.<p>ಸಿಎಎ ಹಾಗೂ ಎನ್ಆರ್ಸಿ ವಿರೋಧಿ ಪ್ರತಿಭಟನೆಗಳ ವೇಳೆ ಭುಗಿಲೆದ್ದಿದ್ದ ಹಿಂಸಾಚಾರ, ಗಲಭೆಗೆ ಸಂಬಂಧಿಸಿ ಖಾಲಿದ್ ಹಾಗೂ ಇತರರ ವಿರುದ್ಧ ಯುಎಪಿಎ, ಐಪಿಸಿ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.</p>.<p>ಈ ಗಲಭೆಗಳಲ್ಲಿ 53 ಮಂದಿ ಮೃತಪಟ್ಟು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<p>‘ಕಾರಣ ಸಮರ್ಥನೀಯವಲ್ಲ’: ವಿಚಾರಣೆ ವೇಳೆ, ‘ಜಾಮೀನಿಗಾಗಿ ನೀಡಿರುವ ಕಾರಣಗಳು ಸಮರ್ಥನೀಯವಲ್ಲ’ ಎಂದು ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ನೀಡಿರುವ ಆದೇಶದಲ್ಲಿ ತಿಳಿಸಿದೆ.</p>.<p>‘ಅರ್ಜಿದಾರನ ತೀರ ಹತ್ತಿರದ ಸಂಬಂಧಿ ನಿಧನದ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿ ನಡೆಯುತ್ತಿದ್ದಲ್ಲಿ, ಅರ್ಜಿಯನ್ನು ಪರಿಗಣಿಸಬಹುದಿತ್ತು. ಅಲ್ಲದೇ, ಮೃತವ್ಯಕ್ತಿ ಅಷ್ಟೊಂದು ಹತ್ತಿರದ ಸಂಬಂಧಿಯಾಗಿದ್ದಲ್ಲಿ ಅವರು ಸತ್ತ ಸಂದರ್ಭದಲ್ಲಿಯೇ ಅರ್ಜಿದಾರ ಜಾಮೀನು ಕೇಳುತ್ತಿದ್ದರು’ ಎಂದೂ ನ್ಯಾಯಾಲಯ ಹೇಳಿದೆ.</p>.<p>ಇದಕ್ಕೂ ಮುನ್ನ, ಖಾಲಿದ್ ಜಾಮೀನು ಅರ್ಜಿ ವಿರೋಧಿಸಿದ ವಿಶೇಷ ಸರ್ಕಾರಿ ವಕೀಲ ಅನಿರುದ್ಧ ಮಿಶ್ರಾ, ‘ಅರ್ಜಿದಾರನಿಗೆ ತಂದೆ ಹಾಗೂ ಐವರು ಸಹೋದರಿಯರು ಇದ್ದಾರೆ. ಶಸ್ತ್ರಚಿಕಿತ್ಸೆಗೂ ಮುನ್ನ ಹಾಗೂ ನಂತರ ಇವರೆಲ್ಲಾ ತಾಯಿಯ ಆರೈಕೆ ಮಾಡಬಲ್ಲರು’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಖಾಲಿದ್ ತಾಯಿಗೆ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ನಡೆಸಲು ಉದ್ದೇಶಿಸಲಾಗಿದೆ. ಹೀಗಾಗಿ ತಾಯಿಯ ಆರೈಕೆಗಾಗಿ ಅರ್ಜಿದಾರ ಹೋಗುವ ಅವಶ್ಯಕತೆ ಇಲ್ಲ’ ಎಂದೂ ಹೇಳಿದರು. ಈ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಖಾಲಿದ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-1029081772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಈಶಾನ್ಯ ಭಾಗದಲ್ಲಿ 2020ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ವಜಾಗೊಳಿಸಿದೆ.</p>.<p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರು ಅರ್ಜಿ ವಿಚಾರಣೆ ನಡೆಸಿದರು.</p>.<p>‘ಸೋದರ ಸಂಬಂಧಿ ಮೃತಪಟ್ಟಿದ್ದು, 40 ದಿನ ನಡೆಸುವ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಬೇಕು. ತಾಯಿಯು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಆಕೆಯ ಆರೈಕೆ ಮಾಡಬೇಕಾಗಿರುವ ಕಾರಣ 15 ದಿನಗಳ ಮಧ್ಯಂತರ ಜಾಮೀನು ನೀಡಬೇಕು’ ಎಂದು ಖಾಲಿದ್ ಅರ್ಜಿ ಸಲ್ಲಿಸಿದ್ದರು.</p>.<p>ಸಿಎಎ ಹಾಗೂ ಎನ್ಆರ್ಸಿ ವಿರೋಧಿ ಪ್ರತಿಭಟನೆಗಳ ವೇಳೆ ಭುಗಿಲೆದ್ದಿದ್ದ ಹಿಂಸಾಚಾರ, ಗಲಭೆಗೆ ಸಂಬಂಧಿಸಿ ಖಾಲಿದ್ ಹಾಗೂ ಇತರರ ವಿರುದ್ಧ ಯುಎಪಿಎ, ಐಪಿಸಿ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.</p>.<p>ಈ ಗಲಭೆಗಳಲ್ಲಿ 53 ಮಂದಿ ಮೃತಪಟ್ಟು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<p>‘ಕಾರಣ ಸಮರ್ಥನೀಯವಲ್ಲ’: ವಿಚಾರಣೆ ವೇಳೆ, ‘ಜಾಮೀನಿಗಾಗಿ ನೀಡಿರುವ ಕಾರಣಗಳು ಸಮರ್ಥನೀಯವಲ್ಲ’ ಎಂದು ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ನೀಡಿರುವ ಆದೇಶದಲ್ಲಿ ತಿಳಿಸಿದೆ.</p>.<p>‘ಅರ್ಜಿದಾರನ ತೀರ ಹತ್ತಿರದ ಸಂಬಂಧಿ ನಿಧನದ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿ ನಡೆಯುತ್ತಿದ್ದಲ್ಲಿ, ಅರ್ಜಿಯನ್ನು ಪರಿಗಣಿಸಬಹುದಿತ್ತು. ಅಲ್ಲದೇ, ಮೃತವ್ಯಕ್ತಿ ಅಷ್ಟೊಂದು ಹತ್ತಿರದ ಸಂಬಂಧಿಯಾಗಿದ್ದಲ್ಲಿ ಅವರು ಸತ್ತ ಸಂದರ್ಭದಲ್ಲಿಯೇ ಅರ್ಜಿದಾರ ಜಾಮೀನು ಕೇಳುತ್ತಿದ್ದರು’ ಎಂದೂ ನ್ಯಾಯಾಲಯ ಹೇಳಿದೆ.</p>.<p>ಇದಕ್ಕೂ ಮುನ್ನ, ಖಾಲಿದ್ ಜಾಮೀನು ಅರ್ಜಿ ವಿರೋಧಿಸಿದ ವಿಶೇಷ ಸರ್ಕಾರಿ ವಕೀಲ ಅನಿರುದ್ಧ ಮಿಶ್ರಾ, ‘ಅರ್ಜಿದಾರನಿಗೆ ತಂದೆ ಹಾಗೂ ಐವರು ಸಹೋದರಿಯರು ಇದ್ದಾರೆ. ಶಸ್ತ್ರಚಿಕಿತ್ಸೆಗೂ ಮುನ್ನ ಹಾಗೂ ನಂತರ ಇವರೆಲ್ಲಾ ತಾಯಿಯ ಆರೈಕೆ ಮಾಡಬಲ್ಲರು’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಖಾಲಿದ್ ತಾಯಿಗೆ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ನಡೆಸಲು ಉದ್ದೇಶಿಸಲಾಗಿದೆ. ಹೀಗಾಗಿ ತಾಯಿಯ ಆರೈಕೆಗಾಗಿ ಅರ್ಜಿದಾರ ಹೋಗುವ ಅವಶ್ಯಕತೆ ಇಲ್ಲ’ ಎಂದೂ ಹೇಳಿದರು. ಈ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಖಾಲಿದ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-1029081772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>