<p><strong>ನವದೆಹಲಿ: </strong>ಇಲ್ಲಿನ ರೋಹಿಣಿ ಕೋರ್ಟ್ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣದ ಮುಖ್ಯ ಆರೋಪಿ ರಾಕೇಶ್ ತಾಜ್ಪುರಿಯಾ (31) ಎಂಬಾತನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಉತ್ತರ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ನಂತರ, ಆರೋಪಿಯನ್ನು ಬಂಧಿಸಲಾಯಿತು. ಆರೋಪಿ ಅಲಿಪುರ ನಿವಾಸಿಯಾಗಿದ್ದು, ಟಿಲ್ಲು ಗ್ಯಾಂಗ್ನ ಸದಸ್ಯ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಟಿಲ್ಲು ಗ್ಯಾಂಗ್ ಸದಸ್ಯರ ಪೈಕಿ ರಾಕೇಶ್ ಹೆಚ್ಚು ಸಕ್ರಿಯವಾಗಿರುವ ಶಾರ್ಪ್ಶೂಟರ್. ಈತನ ಬಗ್ಗೆ ಸುಳಿವು ನೀಡಿದವರಿಗೆ ₹ 50,000 ಬಹುಮಾನ ಘೋಷಿಸಲಾಗಿತ್ತು.</p>.<p>ಕಳೆದ ವರ್ಷ ಸೆಪ್ಟೆಂಬರ್ 24ರಂದು, ವಕೀಲರ ವೇಷ ತೊಟ್ಟು ಕೋರ್ಟ್ ಆವರಣ ಪ್ರವೇಶಿಸಿದ್ದ ಸುನೀಲ್ ಟಿಲ್ಲು ಗ್ಯಾಂಗ್ನ ಇಬ್ಬರು ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಜಿತೇಂದರ್ ಗೋಗಿ ಎಂಬುವವರು ಮೃತಪಟ್ಟಿದ್ದರು. ಟಿಲ್ಲು ಗ್ಯಾಂಗ್ನ ಎದುರಾಳಿಯಾಗಿದ್ದ ಜಿತೇಂದರ್ ಹತ್ಯೆಗೆ ಬಂಧಿತ ಆರೋಪಿ ರಾಕೇಶ್ ಸಂಚು ರೂಪಿಸಿದ್ದ. ಸುನೀಲ್ ಸೂಚನೆಯಂತೆ ಶೂಟರ್ಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<p>ಗೋಗಿ ಗ್ಯಾಂಗ್ ಸದಸ್ಯರಾಗಿದ್ದ ಸೋನು ಕಂಡಾ, ಕುಲ್ಬೀರ್ ಮಾಥೂರ್ ಹಾಗೂ ನಿತೇಶ್ ಎಂಬುವವರನ್ನು ಕಳೆದ ವರ್ಷ ರಾಕೇಶ್ ಹತ್ಯೆ ಮಾಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಲ್ಲಿನ ರೋಹಿಣಿ ಕೋರ್ಟ್ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣದ ಮುಖ್ಯ ಆರೋಪಿ ರಾಕೇಶ್ ತಾಜ್ಪುರಿಯಾ (31) ಎಂಬಾತನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಉತ್ತರ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ನಂತರ, ಆರೋಪಿಯನ್ನು ಬಂಧಿಸಲಾಯಿತು. ಆರೋಪಿ ಅಲಿಪುರ ನಿವಾಸಿಯಾಗಿದ್ದು, ಟಿಲ್ಲು ಗ್ಯಾಂಗ್ನ ಸದಸ್ಯ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಟಿಲ್ಲು ಗ್ಯಾಂಗ್ ಸದಸ್ಯರ ಪೈಕಿ ರಾಕೇಶ್ ಹೆಚ್ಚು ಸಕ್ರಿಯವಾಗಿರುವ ಶಾರ್ಪ್ಶೂಟರ್. ಈತನ ಬಗ್ಗೆ ಸುಳಿವು ನೀಡಿದವರಿಗೆ ₹ 50,000 ಬಹುಮಾನ ಘೋಷಿಸಲಾಗಿತ್ತು.</p>.<p>ಕಳೆದ ವರ್ಷ ಸೆಪ್ಟೆಂಬರ್ 24ರಂದು, ವಕೀಲರ ವೇಷ ತೊಟ್ಟು ಕೋರ್ಟ್ ಆವರಣ ಪ್ರವೇಶಿಸಿದ್ದ ಸುನೀಲ್ ಟಿಲ್ಲು ಗ್ಯಾಂಗ್ನ ಇಬ್ಬರು ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಜಿತೇಂದರ್ ಗೋಗಿ ಎಂಬುವವರು ಮೃತಪಟ್ಟಿದ್ದರು. ಟಿಲ್ಲು ಗ್ಯಾಂಗ್ನ ಎದುರಾಳಿಯಾಗಿದ್ದ ಜಿತೇಂದರ್ ಹತ್ಯೆಗೆ ಬಂಧಿತ ಆರೋಪಿ ರಾಕೇಶ್ ಸಂಚು ರೂಪಿಸಿದ್ದ. ಸುನೀಲ್ ಸೂಚನೆಯಂತೆ ಶೂಟರ್ಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<p>ಗೋಗಿ ಗ್ಯಾಂಗ್ ಸದಸ್ಯರಾಗಿದ್ದ ಸೋನು ಕಂಡಾ, ಕುಲ್ಬೀರ್ ಮಾಥೂರ್ ಹಾಗೂ ನಿತೇಶ್ ಎಂಬುವವರನ್ನು ಕಳೆದ ವರ್ಷ ರಾಕೇಶ್ ಹತ್ಯೆ ಮಾಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>