<p><strong>ನವದೆಹಲಿ:</strong> ಹಸಿವಿನಿಂದ ಮೂವರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿ ನಡೆದಿದೆ.</p>.<p>8 ದಿನಗಳಿಂದ ಆಹಾರ ಇಲ್ಲದೇ ಬಳಲಿ ಮೂವರು ಅಕ್ಕ ತಂಗಿಯರು ( 8 ವರ್ಷ, 4 ವರ್ಷ ಹಾಗೂ 2 ವರ್ಷದ ಹೆಣ್ಣು ಮಗು) ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ಪೂರ್ವ ದೆಹಲಿಯ ಮಂಡಿವಾಲದಲ್ಲಿ ನೆಲೆಸಿದ್ದ ಈ ಕುಟುಂಬದ ಯಜಮಾನ ಸೈಕಲ್ ರಿಕ್ಷಾ ತಳ್ಳಿ ಜೀವನ ಸಾಗಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಸೈಕಲ್ ರಿಕ್ಷಾ ಕಳ್ಳತನವಾಗಿದ್ದರಿಂದ ಅವರು ಕೆಲಸ ಹುಡುಕಿಕೊಂಡು ಹೊರಟ್ಟಿದ್ದರು. ಅವರು ಕಳೆದೊಂದು ವಾರದಿಂದ ಮನೆಗೆ ಬಂದಿರಲಿಲ್ಲ ಎಂದು ಅಕ್ಕ ಮಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ.</p>.<p>ಹಸಿವಿನಿಂದ ನಿತ್ರಾಣಗೊಂಡು ಕೋಮಾ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ತರಲಾಗಿತ್ತು. ಆ ಮೂರು ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಾವು ಹೇಗೆ ಸಂಭವಿಸಿತು ಎಂದು ತಾಯಿಯನ್ನು ಕೇಳಿದಾಗ ಅವರು ‘ನಮಗೆ ಊಟ ಕೊಡಿ’ ಎಂದು ಕೇಳಿದರು ಎಂದು ಪೊಲೀಸರ ತಿಳಿಸಿದ್ದಾರೆ.</p>.<p>ಕಳೆದ 15 ವರ್ಷಗಳ ಸೇವೆಯಲ್ಲಿ ಇಂತಹ ಪ್ರಕರಣವನ್ನೇ ನಾನು ಕಂಡಿಲ್ಲ, ರಾಷ್ಟ್ರ ರಾಜಧಾನಿಯಲ್ಲಿ ಮೂವರು ಮಕ್ಕಳು ಹಸಿವಿನಿಂದ ಮೃತಪಟ್ಟಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ.ಮೃತ ಮಕ್ಕಳ ತಾಯಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುರಿತಂತೆ ಎಎಪಿ ಸರ್ಕಾರ ತನಿಖೆಗೆ ಆದೇಶ ಮಾಡಿದೆ.</p>.<p>8 ವರ್ಷ ಮತ್ತು 4 ವರ್ಷದ ಹೆಣ್ಣು ಮಗುವಿಗೆ ಆರೋಗ್ಯ ಸರಿ ಇರಲಿಲ್ಲ. ಆ ಮಕ್ಕಳು ವಾಂತಿ, ಬೇಧಿಯಿಂದ ಬಳುತ್ತಿದ್ದವು ಎನ್ನಲಾಗಿದೆ. 8 ವರ್ಷವಾಗಿದ್ದರೂ ಹಿರಿಯ ಮಗಳನ್ನು ಶಾಲೆ ಸೇರಿಸಿರಲಿಲ್ಲ. ಒಂದು ವೇಳೆ ಶಾಲೆಗೆ ಹೋಗುತ್ತಿದ್ದಾರೆ ಮಧ್ಯಾಹ್ನದ ಊಟವಾದರೂ ದೊರೆಯುತ್ತಿತ್ತು ಎಂದು ವೈದ್ಯರು ಹೇಳಿದ್ದಾರೆ.</p>.<p>ಈ ಕುಟುಂಬ ವಾಸವಾಗಿದ್ದ ಮನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಭೇಟಿ ಮಾಡಿ ಮಕ್ಕಳ ಸಾವಿಗೆ ಎಎಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.</p>.<p>’ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ, ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರ ನೀಡುವ ಆಹಾರ ಪದಾರ್ಥಗಳನ್ನು ನಾಗರಿಕರಿಗೆ ಸಮರ್ಪಕವಾಗಿ ಹಂಚುವ ಕೆಲಸವನ್ನು ದೆಹಲಿ ಸರ್ಕಾರ ಮಾಡಿಲ್ಲ, ಈ ಮಕ್ಕಳ ಸಾವಿಗೆ ಎಎಪಿ ಸರ್ಕಾರವೇ ಕಾರಣ ಎಂದು ಬಿಜೆಪಿಯ ಮನೋಜ್ ತಿವಾರಿ ಹೇಳಿದ್ದಾರೆ.</p>.<p>ಈ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ, ಇದು ಸರ್ಕಾರ ಮತ್ತು ವ್ಯವಸ್ಥೆಯ ವೈಫಲ್ಯ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮೇಕನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಸಿವಿನಿಂದ ಮೂವರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿ ನಡೆದಿದೆ.</p>.<p>8 ದಿನಗಳಿಂದ ಆಹಾರ ಇಲ್ಲದೇ ಬಳಲಿ ಮೂವರು ಅಕ್ಕ ತಂಗಿಯರು ( 8 ವರ್ಷ, 4 ವರ್ಷ ಹಾಗೂ 2 ವರ್ಷದ ಹೆಣ್ಣು ಮಗು) ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ಪೂರ್ವ ದೆಹಲಿಯ ಮಂಡಿವಾಲದಲ್ಲಿ ನೆಲೆಸಿದ್ದ ಈ ಕುಟುಂಬದ ಯಜಮಾನ ಸೈಕಲ್ ರಿಕ್ಷಾ ತಳ್ಳಿ ಜೀವನ ಸಾಗಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಸೈಕಲ್ ರಿಕ್ಷಾ ಕಳ್ಳತನವಾಗಿದ್ದರಿಂದ ಅವರು ಕೆಲಸ ಹುಡುಕಿಕೊಂಡು ಹೊರಟ್ಟಿದ್ದರು. ಅವರು ಕಳೆದೊಂದು ವಾರದಿಂದ ಮನೆಗೆ ಬಂದಿರಲಿಲ್ಲ ಎಂದು ಅಕ್ಕ ಮಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ.</p>.<p>ಹಸಿವಿನಿಂದ ನಿತ್ರಾಣಗೊಂಡು ಕೋಮಾ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ತರಲಾಗಿತ್ತು. ಆ ಮೂರು ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಾವು ಹೇಗೆ ಸಂಭವಿಸಿತು ಎಂದು ತಾಯಿಯನ್ನು ಕೇಳಿದಾಗ ಅವರು ‘ನಮಗೆ ಊಟ ಕೊಡಿ’ ಎಂದು ಕೇಳಿದರು ಎಂದು ಪೊಲೀಸರ ತಿಳಿಸಿದ್ದಾರೆ.</p>.<p>ಕಳೆದ 15 ವರ್ಷಗಳ ಸೇವೆಯಲ್ಲಿ ಇಂತಹ ಪ್ರಕರಣವನ್ನೇ ನಾನು ಕಂಡಿಲ್ಲ, ರಾಷ್ಟ್ರ ರಾಜಧಾನಿಯಲ್ಲಿ ಮೂವರು ಮಕ್ಕಳು ಹಸಿವಿನಿಂದ ಮೃತಪಟ್ಟಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ.ಮೃತ ಮಕ್ಕಳ ತಾಯಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುರಿತಂತೆ ಎಎಪಿ ಸರ್ಕಾರ ತನಿಖೆಗೆ ಆದೇಶ ಮಾಡಿದೆ.</p>.<p>8 ವರ್ಷ ಮತ್ತು 4 ವರ್ಷದ ಹೆಣ್ಣು ಮಗುವಿಗೆ ಆರೋಗ್ಯ ಸರಿ ಇರಲಿಲ್ಲ. ಆ ಮಕ್ಕಳು ವಾಂತಿ, ಬೇಧಿಯಿಂದ ಬಳುತ್ತಿದ್ದವು ಎನ್ನಲಾಗಿದೆ. 8 ವರ್ಷವಾಗಿದ್ದರೂ ಹಿರಿಯ ಮಗಳನ್ನು ಶಾಲೆ ಸೇರಿಸಿರಲಿಲ್ಲ. ಒಂದು ವೇಳೆ ಶಾಲೆಗೆ ಹೋಗುತ್ತಿದ್ದಾರೆ ಮಧ್ಯಾಹ್ನದ ಊಟವಾದರೂ ದೊರೆಯುತ್ತಿತ್ತು ಎಂದು ವೈದ್ಯರು ಹೇಳಿದ್ದಾರೆ.</p>.<p>ಈ ಕುಟುಂಬ ವಾಸವಾಗಿದ್ದ ಮನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಭೇಟಿ ಮಾಡಿ ಮಕ್ಕಳ ಸಾವಿಗೆ ಎಎಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.</p>.<p>’ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ, ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರ ನೀಡುವ ಆಹಾರ ಪದಾರ್ಥಗಳನ್ನು ನಾಗರಿಕರಿಗೆ ಸಮರ್ಪಕವಾಗಿ ಹಂಚುವ ಕೆಲಸವನ್ನು ದೆಹಲಿ ಸರ್ಕಾರ ಮಾಡಿಲ್ಲ, ಈ ಮಕ್ಕಳ ಸಾವಿಗೆ ಎಎಪಿ ಸರ್ಕಾರವೇ ಕಾರಣ ಎಂದು ಬಿಜೆಪಿಯ ಮನೋಜ್ ತಿವಾರಿ ಹೇಳಿದ್ದಾರೆ.</p>.<p>ಈ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ, ಇದು ಸರ್ಕಾರ ಮತ್ತು ವ್ಯವಸ್ಥೆಯ ವೈಫಲ್ಯ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮೇಕನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>