<p><strong>ನವದೆಹಲಿ:</strong> ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ್ ಸನಾತನ ಧರ್ಮ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ದೆಬ್ನಾಥ್ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ.</p><p>19 ವರ್ಷದ ಸ್ನೇಹಾ ದೆಬ್ನಾಥ್ ತ್ರಿಪುರಾ ರಾಜ್ಯದವರಾಗಿದ್ದು ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 7ರಿಂದ ನಾಪತ್ತೆಯಾಗಿದ್ದಾಳೆ ಎಂದು ಸ್ನೇಹಾ ಪೋಷಕರು ಹೇಳಿದ್ದಾರೆ. </p><p>ಸ್ನೇಹಾ ಪತ್ತೆಗಾಗಿ ದೆಹಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಯಾವುದೇ ಸುಳಿವು ಇದುವರೆಗೂ ಸಿಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಸ್ನೇಹಾ ಕಾಣೆಯಾದ ದಿನ ಕ್ಯಾಬ್ನಲ್ಲಿ ಪ್ರಯಾಣ ಮಾಡಿದ್ದರು. ಪೊಲೀಸರು ಕ್ಯಾಬ್ ಚಾಲಕನನ್ನು ಪತ್ತೆ ಮಾಡಿದ್ದು ಆಕೆ ಇಲ್ಲಿನ ಸಿಗ್ನೇಚರ್ ಬ್ರಿಡ್ಜ್ ಬಳಿ ಇಳಿದಿದ್ದಾಗಿ ದೃಢಪಡಿಸಿದ್ದಾರೆ. ಅಲ್ಲಿಂದ ಸ್ನೇಹಾ ಎಲ್ಲಿಗೆ ಹೋದರು ಎಂಬುದು ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಸಿಸಿಟಿವಿ ಲಭ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಈ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಸುಳಿವು ಸಿಕ್ಕಿಲ್ಲ. ಈ ನಡುವೆ ತ್ರಿಪುರಾ ಮುಖ್ಯಮಂತ್ರಿ ಕೂಡ ಸ್ನೇಹಾರನ್ನು ತ್ವರಿತವಾಗಿ ಪತ್ತೆ ಮಾಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ್ ಸನಾತನ ಧರ್ಮ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ದೆಬ್ನಾಥ್ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ.</p><p>19 ವರ್ಷದ ಸ್ನೇಹಾ ದೆಬ್ನಾಥ್ ತ್ರಿಪುರಾ ರಾಜ್ಯದವರಾಗಿದ್ದು ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 7ರಿಂದ ನಾಪತ್ತೆಯಾಗಿದ್ದಾಳೆ ಎಂದು ಸ್ನೇಹಾ ಪೋಷಕರು ಹೇಳಿದ್ದಾರೆ. </p><p>ಸ್ನೇಹಾ ಪತ್ತೆಗಾಗಿ ದೆಹಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಯಾವುದೇ ಸುಳಿವು ಇದುವರೆಗೂ ಸಿಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಸ್ನೇಹಾ ಕಾಣೆಯಾದ ದಿನ ಕ್ಯಾಬ್ನಲ್ಲಿ ಪ್ರಯಾಣ ಮಾಡಿದ್ದರು. ಪೊಲೀಸರು ಕ್ಯಾಬ್ ಚಾಲಕನನ್ನು ಪತ್ತೆ ಮಾಡಿದ್ದು ಆಕೆ ಇಲ್ಲಿನ ಸಿಗ್ನೇಚರ್ ಬ್ರಿಡ್ಜ್ ಬಳಿ ಇಳಿದಿದ್ದಾಗಿ ದೃಢಪಡಿಸಿದ್ದಾರೆ. ಅಲ್ಲಿಂದ ಸ್ನೇಹಾ ಎಲ್ಲಿಗೆ ಹೋದರು ಎಂಬುದು ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಸಿಸಿಟಿವಿ ಲಭ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಈ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಸುಳಿವು ಸಿಕ್ಕಿಲ್ಲ. ಈ ನಡುವೆ ತ್ರಿಪುರಾ ಮುಖ್ಯಮಂತ್ರಿ ಕೂಡ ಸ್ನೇಹಾರನ್ನು ತ್ವರಿತವಾಗಿ ಪತ್ತೆ ಮಾಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>