<p><strong>ನವದೆಹಲಿ: </strong>ಗಲಭೆ ಪೀಡಿತ ದೆಹಲಿಯಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.</p>.<p>ಕಳೆದ ಭಾನುವಾರ ಸಂಜೆಯಿಂದ ಗುರುವಾರದವರೆಗೆ ಹೊತ್ತಿ ಉರಿದಿರುವ ಈಶಾನ್ಯ ದೆಹಲಿಯಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ.</p>.<p>ಈಶಾನ್ಯ ದೆಹಲಿಯ ಚಾಂದ್ಬಾಗ್, ಶಿವಪುರಿ, ಮೌಜ್ಪುರ, ಜಾಫರಾಬಾದ್, ಭಜನ್ಪುರ್, ಗೋಕುಲ್ಪುರಿ, ಭಾಗೀರಥಿ ವಿಹಾರ್, ಬಾಬರ್ಪುರ, ಸೀಲಂಪುರ್, ಖಜೂರಿಖಾಸ್, ಶಿವ್ವಿಹಾರ್, ಮುಸ್ತಫಾಬಾದ್ ಮತ್ತಿತರ ಪ್ರದೇಶಗಳಲ್ಲಿ ಈಗಲೂ ಬೂದಿ ಮೆಚ್ಚಿದ ಕೆಂಡದಂತಹ ಸ್ಥಿತಿ ಇದೆ.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ನಡೆದಸಂಘರ್ಷದಲ್ಲಿ ಇವರೆಗೂ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಸುಪ್ರೀಂಕೋರ್ಟ್ ಮೇಲ್ವಿಚಾರಣೆಗೆ ಆಗ್ರಹ</strong><br />ದೆಹಲಿ ಗಲಭೆ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಮೇಲ್ವಾಚರಣೆ ನಡೆಸುವಂತೆ ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪತ್ರ ಬರೆದಿದ್ದಾರೆ.</p>.<p><strong>‘ಪರಿಸ್ಥಿತಿ ಶಾಂತಿಯುತ’</strong><br />ದೆಹಲಿಯ ಜಾಫರಾಬಾದ್ ಪ್ರದೇಶಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯದ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ, ಉದ್ವಿಗ್ನತೆ ಇನ್ನು ಹಾಗೆಯೇ ಉಳಿದಿದೆ’ ಎಂದು ತಿಳಿಸಿದ್ದಾರೆ.</p>.<p>ಅತ್ಯಾಚಾರ ಅಥವಾ ಕಿರುಕುಳದಂತಹ ಯಾವುದೇ ಪ್ರಕರಣಗಳು ದಾಖಲಾಗಿಲ್ಲಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಲಭೆ ಪೀಡಿತ ದೆಹಲಿಯಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.</p>.<p>ಕಳೆದ ಭಾನುವಾರ ಸಂಜೆಯಿಂದ ಗುರುವಾರದವರೆಗೆ ಹೊತ್ತಿ ಉರಿದಿರುವ ಈಶಾನ್ಯ ದೆಹಲಿಯಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ.</p>.<p>ಈಶಾನ್ಯ ದೆಹಲಿಯ ಚಾಂದ್ಬಾಗ್, ಶಿವಪುರಿ, ಮೌಜ್ಪುರ, ಜಾಫರಾಬಾದ್, ಭಜನ್ಪುರ್, ಗೋಕುಲ್ಪುರಿ, ಭಾಗೀರಥಿ ವಿಹಾರ್, ಬಾಬರ್ಪುರ, ಸೀಲಂಪುರ್, ಖಜೂರಿಖಾಸ್, ಶಿವ್ವಿಹಾರ್, ಮುಸ್ತಫಾಬಾದ್ ಮತ್ತಿತರ ಪ್ರದೇಶಗಳಲ್ಲಿ ಈಗಲೂ ಬೂದಿ ಮೆಚ್ಚಿದ ಕೆಂಡದಂತಹ ಸ್ಥಿತಿ ಇದೆ.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ನಡೆದಸಂಘರ್ಷದಲ್ಲಿ ಇವರೆಗೂ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಸುಪ್ರೀಂಕೋರ್ಟ್ ಮೇಲ್ವಿಚಾರಣೆಗೆ ಆಗ್ರಹ</strong><br />ದೆಹಲಿ ಗಲಭೆ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಮೇಲ್ವಾಚರಣೆ ನಡೆಸುವಂತೆ ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪತ್ರ ಬರೆದಿದ್ದಾರೆ.</p>.<p><strong>‘ಪರಿಸ್ಥಿತಿ ಶಾಂತಿಯುತ’</strong><br />ದೆಹಲಿಯ ಜಾಫರಾಬಾದ್ ಪ್ರದೇಶಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯದ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ, ಉದ್ವಿಗ್ನತೆ ಇನ್ನು ಹಾಗೆಯೇ ಉಳಿದಿದೆ’ ಎಂದು ತಿಳಿಸಿದ್ದಾರೆ.</p>.<p>ಅತ್ಯಾಚಾರ ಅಥವಾ ಕಿರುಕುಳದಂತಹ ಯಾವುದೇ ಪ್ರಕರಣಗಳು ದಾಖಲಾಗಿಲ್ಲಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>