ಫೆಬ್ರುವರಿ 25ರಂದು ರಾತ್ರಿ ಇಂದಿರಾ ವಿಹಾರ್ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪೊಂದು ಶಿವ ದೇಗುಲದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಲು ಮುಂದಾಗಿತ್ತು. ಧಾರ್ಮಿಕ ಕೇಂದ್ರಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿತ್ತು. ಆ ಸಂದರ್ಭದಲ್ಲಿ, ಶಕೀಲ್ ಅಹ್ಮದ್ ಎಂಬ ವ್ಯಕ್ತಿ ಮತ್ತು ಇತರ ನಿವಾಸಿಗಳು ದೇಗುಲವನ್ನು ರಕ್ಷಿಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.