<p><strong>ನವದೆಹಲಿ:</strong> ಪೂರ್ವ ದೆಹಲಿಯ ವಿವೇಕ್ ವಿಹಾರದಲ್ಲಿನ ವಸತಿ ಕಟ್ಟಡವೊಂದರಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಸುಗೂಸು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.</p>.<p>ನಾಲ್ಕು ಮಹಡಿಯ ಕಟ್ಟಡದಲ್ಲಿ ಮುಂಜಾನೆ 3:48ಕ್ಕೆ ಈ ಅವಘಡ ಸಂಭವಿಸಿದೆ. ಕಟ್ಟಡದ ಎರಡನೇ, ಮೂರನೇ ಮತ್ತು ನಾಲ್ಕನೇ ಮಹಡಿಯಲ್ಲಿ ಬೆಂಕಿಯ ಜ್ವಾಲೆಗಳು ವ್ಯಾಪಿಸಿದ್ದವು. ಕಟ್ಟಡದಿಂದ ಹೊರಗೆ ಬರಲು ಸಾಧ್ಯವಾಗದೆ ಎರಡು ಕುಟುಂಬಗಳ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. 10ರಿಂದ 15 ಜನರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಹವಾನಿಯಂತ್ರಕ ಸ್ಫೋಟಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<p>ಬೆಂಕಿಯಿಂದ ಸುಟ್ಟು ಕರಕಲಾದ ಮೃತದೇಹಗಳು ಕಟ್ಟಡದ ವಿವಿಧೆಡೆ ದೊರೆತಿವೆ. ಕಟ್ಟಡದ ಮೊದಲ ಮಹಡಿಯಲ್ಲಿ ಒಂದು ಮೃತದೇಹ, ಎರಡನೇ ಮಹಡಿಯಲ್ಲಿ ಐದು ಮೃತದೇಹ ಮತ್ತು ಮೆಟ್ಟಿಲುಗಳಲ್ಲಿ ಮೂರು ಮೃತದೇಹಗಳು ಸಿಕ್ಕವು ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸೆಂಟ್ರಲ್ ಲಾಕಿಂಗ್ ಸಿಸ್ಟಂ ಅಳವಡಿಕೆ, ಕಟ್ಟಡದ ಹಿಂಭಾಗದಲ್ಲಿ ದಪ್ಪ ಕಬ್ಬಿಣದ ಜಾಲರಿ ಹಾಗೂ ಕಟ್ಟಡದ ಹೊರಗೆ ತೆರಳಲು ಒಂದೇ ಮೆಟ್ಟಿಲು ಇದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು. ಎಲ್ಲ ಬಾಗಿಲುಗಳು ಲಾಕ್ ಆಗಿದ್ದ ಕಾರಣ ಮನೆ ಒಳಗೆ ಇದ್ದವರು ಹೊರಬರುವುದು ಕಷ್ಟಕರವಾಯಿತು. ಚಾವಣಿಯ ಮೇಲೆ ಹೋಗುವ ದಾರಿಯಲ್ಲೂ ಮೃತ ದೇಹಗಳು ಇದ್ದವು. ಚಾವಣಿಗೆ ಹೋಗುವ ಬಾಗಿಲಿಗೆ ಬೀಗ ಹಾಕಿದ್ದರಿಂದ ಅವರು ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>12 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು. ‘ಕಟ್ಟಡ ತುಂಬಾ ದಟ್ಟ ಹೊಗೆ ಆವರಿಸಿತ್ತು. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕಟ್ಟಡದೊಳಗೆ ಬೆಂಕಿಯಲ್ಲಿ ಸಿಲುಕಿದ್ದವರ ಅರ್ತನಾದ ಕೇಳುತ್ತಿತ್ತು’ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ದೆಹಲಿಯ ವಿವೇಕ್ ವಿಹಾರದಲ್ಲಿನ ವಸತಿ ಕಟ್ಟಡವೊಂದರಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಸುಗೂಸು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.</p>.<p>ನಾಲ್ಕು ಮಹಡಿಯ ಕಟ್ಟಡದಲ್ಲಿ ಮುಂಜಾನೆ 3:48ಕ್ಕೆ ಈ ಅವಘಡ ಸಂಭವಿಸಿದೆ. ಕಟ್ಟಡದ ಎರಡನೇ, ಮೂರನೇ ಮತ್ತು ನಾಲ್ಕನೇ ಮಹಡಿಯಲ್ಲಿ ಬೆಂಕಿಯ ಜ್ವಾಲೆಗಳು ವ್ಯಾಪಿಸಿದ್ದವು. ಕಟ್ಟಡದಿಂದ ಹೊರಗೆ ಬರಲು ಸಾಧ್ಯವಾಗದೆ ಎರಡು ಕುಟುಂಬಗಳ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. 10ರಿಂದ 15 ಜನರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಹವಾನಿಯಂತ್ರಕ ಸ್ಫೋಟಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<p>ಬೆಂಕಿಯಿಂದ ಸುಟ್ಟು ಕರಕಲಾದ ಮೃತದೇಹಗಳು ಕಟ್ಟಡದ ವಿವಿಧೆಡೆ ದೊರೆತಿವೆ. ಕಟ್ಟಡದ ಮೊದಲ ಮಹಡಿಯಲ್ಲಿ ಒಂದು ಮೃತದೇಹ, ಎರಡನೇ ಮಹಡಿಯಲ್ಲಿ ಐದು ಮೃತದೇಹ ಮತ್ತು ಮೆಟ್ಟಿಲುಗಳಲ್ಲಿ ಮೂರು ಮೃತದೇಹಗಳು ಸಿಕ್ಕವು ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸೆಂಟ್ರಲ್ ಲಾಕಿಂಗ್ ಸಿಸ್ಟಂ ಅಳವಡಿಕೆ, ಕಟ್ಟಡದ ಹಿಂಭಾಗದಲ್ಲಿ ದಪ್ಪ ಕಬ್ಬಿಣದ ಜಾಲರಿ ಹಾಗೂ ಕಟ್ಟಡದ ಹೊರಗೆ ತೆರಳಲು ಒಂದೇ ಮೆಟ್ಟಿಲು ಇದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು. ಎಲ್ಲ ಬಾಗಿಲುಗಳು ಲಾಕ್ ಆಗಿದ್ದ ಕಾರಣ ಮನೆ ಒಳಗೆ ಇದ್ದವರು ಹೊರಬರುವುದು ಕಷ್ಟಕರವಾಯಿತು. ಚಾವಣಿಯ ಮೇಲೆ ಹೋಗುವ ದಾರಿಯಲ್ಲೂ ಮೃತ ದೇಹಗಳು ಇದ್ದವು. ಚಾವಣಿಗೆ ಹೋಗುವ ಬಾಗಿಲಿಗೆ ಬೀಗ ಹಾಕಿದ್ದರಿಂದ ಅವರು ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>12 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು. ‘ಕಟ್ಟಡ ತುಂಬಾ ದಟ್ಟ ಹೊಗೆ ಆವರಿಸಿತ್ತು. ಇದರಿಂದ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕಟ್ಟಡದೊಳಗೆ ಬೆಂಕಿಯಲ್ಲಿ ಸಿಲುಕಿದ್ದವರ ಅರ್ತನಾದ ಕೇಳುತ್ತಿತ್ತು’ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>