<p><strong>ನವದೆಹಲಿ:</strong> ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ 17 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಪಟಿಯಾಲ ನ್ಯಾಯಾಲಯ ಆದೇಶ ನೀಡಿದೆ. </p><p>62 ವರ್ಷದ ಚೈತನ್ಯಾನಂದ ವಿರುದ್ಧ ಆಗಸ್ಟ್ 4ರಂದು ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ಆಶ್ರಮದಿಂದ ಪರಾರಿಯಾಗಿದ್ದರು. ತಲೆಮರೆಸಿಕೊಂಡಿದ್ದ ಚೈತನ್ಯಾನಂದ ಅವರನ್ನು ಆಗ್ರಾದ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದರು. </p><p>‘ಚೈತನ್ಯಾನಂದ ಅವರ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ಆಗ್ರಾದ ತಾಜ್ ಗಂಜ್ ಪ್ರದೇಶದಲ್ಲಿರುವ ಹೋಟೆಲ್ನಲ್ಲಿ ಅವರು ತಂಗಿರುವುದು ಖಚಿತಪಟ್ಟ ಬಳಿಕ ಭಾನುವಾರ ಬೆಳಿಗ್ಗೆ 3:30ರ ವೇಳೆಗೆ ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ನೈಋತ್ಯ ದೆಹಲಿಯಲ್ಲಿರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ಮಾಜಿ ಮುಖ್ಯಸ್ಥರಾಗಿದ್ದ ಸರಸ್ವತಿ ಅವರ ವಸತಿಗೃಹಕ್ಕೆ ಭೇಟಿ ನೀಡುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರುತ್ತಿದ್ದರು. ಅಲ್ಲದೇ, ಅವರ ಚಲನವಲನಗಳ ಮೇಲೆ ಮೊಬೈಲ್ನ ಮೂಲಕವೇ ನಿಗಾ ಇಡುತ್ತಿದ್ದರು’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ 17 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಪಟಿಯಾಲ ನ್ಯಾಯಾಲಯ ಆದೇಶ ನೀಡಿದೆ. </p><p>62 ವರ್ಷದ ಚೈತನ್ಯಾನಂದ ವಿರುದ್ಧ ಆಗಸ್ಟ್ 4ರಂದು ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ಆಶ್ರಮದಿಂದ ಪರಾರಿಯಾಗಿದ್ದರು. ತಲೆಮರೆಸಿಕೊಂಡಿದ್ದ ಚೈತನ್ಯಾನಂದ ಅವರನ್ನು ಆಗ್ರಾದ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದರು. </p><p>‘ಚೈತನ್ಯಾನಂದ ಅವರ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ಆಗ್ರಾದ ತಾಜ್ ಗಂಜ್ ಪ್ರದೇಶದಲ್ಲಿರುವ ಹೋಟೆಲ್ನಲ್ಲಿ ಅವರು ತಂಗಿರುವುದು ಖಚಿತಪಟ್ಟ ಬಳಿಕ ಭಾನುವಾರ ಬೆಳಿಗ್ಗೆ 3:30ರ ವೇಳೆಗೆ ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ನೈಋತ್ಯ ದೆಹಲಿಯಲ್ಲಿರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ಮಾಜಿ ಮುಖ್ಯಸ್ಥರಾಗಿದ್ದ ಸರಸ್ವತಿ ಅವರ ವಸತಿಗೃಹಕ್ಕೆ ಭೇಟಿ ನೀಡುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರುತ್ತಿದ್ದರು. ಅಲ್ಲದೇ, ಅವರ ಚಲನವಲನಗಳ ಮೇಲೆ ಮೊಬೈಲ್ನ ಮೂಲಕವೇ ನಿಗಾ ಇಡುತ್ತಿದ್ದರು’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>