ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇರಿಸಬೇಕು ಎಂಬ ವಕೀಲರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನೊಳಗೊಂಡ ಪೀಠ ತಿರಸ್ಕರಿಸಿದೆ. ಅಲ್ಲದೆ, ‘ಇದು ಎನ್ಕೌಂಟರ್ಗೆ ಸಂಬಂಧಿಸಿದ ಪ್ರಕರಣ. ಇದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆಯೋಗವು ಯಾರನ್ನೋ ತಪ್ಪಿತಸ್ಥರೆಂದು ಗುರುತಿಸಿದೆ. ನಾವೀಗ ಪ್ರಕರಣವನ್ನು ಹೈಕೋರ್ಟ್ಗೆ ಕಳುಹಿಸಲಿದ್ದೇವೆ’ ಎಂದು ಹೇಳಿತು.