ಒಂದು ಸಾಲಿನಲ್ಲಿ
ಮಹಿಳಾ ಮೀಸಲಾತಿ ನೆಪದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆಯು ದಕ್ಷಿಣದ ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

‘ಸಂಸತ್ತಿನಲ್ಲಿ ಮಂಡನೆಯಾಗಲಿರುವ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಮರುವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ಹಲವಾರು ವಿರೋಧ ಪಕ್ಷಗಳು ನಿರ್ಧರಿಸಿವೆ. ನಾವು ಮಹಿಳಾ ಮೀಸಲಾತಿಯ ವಿರುದ್ಧವಾಗಿಲ್ಲ, ಆದರೆ ಮಸೂದೆಯನ್ನು ತರುತ್ತಿರುವ ರೀತಿಯನ್ನು ವಿರೋಧಿಸುತ್ತೇವೆ. ಇದು ರಾಜಕೀಯ ಪ್ರೇರಿತ ಕಾನೂನು. ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು, ದಮನಿಸಲು ಸರ್ಕಾರ ಈ ಕಾನೂನು ತರುತ್ತಿದೆ.– ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.