<p><strong>ಮುಂಬೈ:</strong> ಜೈಲಿನಲ್ಲಿ ಹೆರಿಗೆಯಾದರೆ ಅಲ್ಲಿನ ವಾತಾವರಣವು ತಾಯಿ ಮತ್ತು ಮಗುವಿನ ಮೇಲೆ ಪ್ರಭಾವ ಬೀರುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.</p>.<p>ಮಾದಕವಸ್ತುಗಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಗರ್ಭಿಣಿಯೊಬ್ಬರಿಗೆ 6 ತಿಂಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿರುವ ನಾಗ್ಪುರ ಪೀಠದ ನ್ಯಾಯಮೂರ್ತಿ ಊರ್ಮಿಳಾ ಜೋಶಿ–ಪಾಲ್ಕೆ, ‘ಪ್ರತಿಯೊಬ್ಬ ಖೈದಿಗೂ ಘನತೆಯಿರುತ್ತದೆ’ ಎಂದು ಹೇಳಿದೆ. </p>.<p>ರೈಲಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸುರಭಿ ಸೋನಿ ಮತ್ತು ನಾಲ್ವರನ್ನು ರೈಲ್ವೆ ಭದ್ರತಾ ಪಡೆ 2024ರ ಏಪ್ರಿಲ್ನಲ್ಲಿ ಬಂಧಿಸಿತ್ತು. ಈ ವೇಳೆ ಸುರಭಿ ಸೋನಿ ಎರಡು ತಿಂಗಳ ಗರ್ಭಿಣಿಯಾಗಿದ್ದರು.</p>.<p>ಮಾನವೀಯತೆಯ ಆಧಾರದಲ್ಲಿ ಜಾಮೀನು ನೀಡಿ ಕಾರಾಗೃಹದ ಹೊರಗೆ ಮಗುವಿಗೆ ಜನ್ಮ ನೀಡಲು ಅವಕಾಶ ಕಲ್ಪಿಸಬೇಕೆಂದು ಕೋರಿ ಸುರಭಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮಹಿಳೆಯ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್ ಸುರಕ್ಷಿತ ಹೆರಿಗೆಗೆ ಕಾರಾಗೃಹದಲ್ಲೇ ಕ್ರಮ ವಹಿಸುವುದಾಗಿ ತಿಳಿಸಿತ್ತು.</p>.<p>‘ಜೈಲಿನಲ್ಲಿರುವ ಗರ್ಭಿಣಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು. ಆದರೆ ಜೈಲಿನ ವಾತಾವರಣವು ತಾಯಿಯ ಮೇಲೆ ಮಾತ್ರವಲ್ಲದೇ ಮಗುವಿನ ಮೇಲೆಯೂ ಪರಿಣಾಮ ಬೀರುತ್ತದೆ. ಈ ಬಗ್ಗೆ ಯಾರೂ ಗಮನಹರಿಸುವುದಿಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>‘ಈ ಪ್ರಕರಣವನ್ನು ಮಾನವೀಯತೆಯ ಆಧಾರದಲ್ಲಿ ಪರಿಗಣಿಸುವ ಅಗತ್ಯವಿದೆ. ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಗಳಿರಬಹುದು. ಆದರೆ ಮಹಿಳೆಯನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸುವುದರಿಂದ ತನಿಖೆಯ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ’ ಎಂದು ಕೋರ್ಟ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಜೈಲಿನಲ್ಲಿ ಹೆರಿಗೆಯಾದರೆ ಅಲ್ಲಿನ ವಾತಾವರಣವು ತಾಯಿ ಮತ್ತು ಮಗುವಿನ ಮೇಲೆ ಪ್ರಭಾವ ಬೀರುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.</p>.<p>ಮಾದಕವಸ್ತುಗಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಗರ್ಭಿಣಿಯೊಬ್ಬರಿಗೆ 6 ತಿಂಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿರುವ ನಾಗ್ಪುರ ಪೀಠದ ನ್ಯಾಯಮೂರ್ತಿ ಊರ್ಮಿಳಾ ಜೋಶಿ–ಪಾಲ್ಕೆ, ‘ಪ್ರತಿಯೊಬ್ಬ ಖೈದಿಗೂ ಘನತೆಯಿರುತ್ತದೆ’ ಎಂದು ಹೇಳಿದೆ. </p>.<p>ರೈಲಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸುರಭಿ ಸೋನಿ ಮತ್ತು ನಾಲ್ವರನ್ನು ರೈಲ್ವೆ ಭದ್ರತಾ ಪಡೆ 2024ರ ಏಪ್ರಿಲ್ನಲ್ಲಿ ಬಂಧಿಸಿತ್ತು. ಈ ವೇಳೆ ಸುರಭಿ ಸೋನಿ ಎರಡು ತಿಂಗಳ ಗರ್ಭಿಣಿಯಾಗಿದ್ದರು.</p>.<p>ಮಾನವೀಯತೆಯ ಆಧಾರದಲ್ಲಿ ಜಾಮೀನು ನೀಡಿ ಕಾರಾಗೃಹದ ಹೊರಗೆ ಮಗುವಿಗೆ ಜನ್ಮ ನೀಡಲು ಅವಕಾಶ ಕಲ್ಪಿಸಬೇಕೆಂದು ಕೋರಿ ಸುರಭಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮಹಿಳೆಯ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್ ಸುರಕ್ಷಿತ ಹೆರಿಗೆಗೆ ಕಾರಾಗೃಹದಲ್ಲೇ ಕ್ರಮ ವಹಿಸುವುದಾಗಿ ತಿಳಿಸಿತ್ತು.</p>.<p>‘ಜೈಲಿನಲ್ಲಿರುವ ಗರ್ಭಿಣಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು. ಆದರೆ ಜೈಲಿನ ವಾತಾವರಣವು ತಾಯಿಯ ಮೇಲೆ ಮಾತ್ರವಲ್ಲದೇ ಮಗುವಿನ ಮೇಲೆಯೂ ಪರಿಣಾಮ ಬೀರುತ್ತದೆ. ಈ ಬಗ್ಗೆ ಯಾರೂ ಗಮನಹರಿಸುವುದಿಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>‘ಈ ಪ್ರಕರಣವನ್ನು ಮಾನವೀಯತೆಯ ಆಧಾರದಲ್ಲಿ ಪರಿಗಣಿಸುವ ಅಗತ್ಯವಿದೆ. ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಗಳಿರಬಹುದು. ಆದರೆ ಮಹಿಳೆಯನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸುವುದರಿಂದ ತನಿಖೆಯ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ’ ಎಂದು ಕೋರ್ಟ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>