ಮಾಜಿ ಶಾಸಕ ಮೊಹಮ್ಮದ್ ಯೂಸುಫ್ ತಾರಿಗಾಮಿ ಮಾತನಾಡಿ, ‘ದೇಶದಾದ್ಯಂತ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಜನರು ತೊಂದರೆಗೆ ಒಳಗಾಗಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿರುವ ಪರಿಣಾಮ ದೇಶದ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉತ್ತುಂಗಕ್ಕೆ ಏರಿದ್ದು,ಇಂತಹ ಸ್ಥಿತಿಯಲ್ಲಿ ಯುವ ಸಮೂಹ ಉದ್ಯೋಗ ಹುಡುಕುವುದನ್ನು ನಿಲ್ಲಿಸಿದೆ’ ಎಂದರು.