<p><strong>ನವದೆಹಲಿ</strong>: ಸಂಸತ್ತಿನಲ್ಲಿ ನ್ಯಾಯಬದ್ಧವಾದ ಬೇಡಿಕೆ ಇರಿಸಿದ ಕಾರಣಕ್ಕಾಗಿ ಸಂಸದರನ್ನು ಅಮಾನತು ಮಾಡುವ ಮೂಲಕ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಆರೋಪಿಸಿದ್ದಾರೆ. </p>.<p>ಸಂವಿಧಾನ ಸದನದ (ಹಳೆ ಸಂಸತ್ ಕಟ್ಟಡ) ಸೆಂಟ್ರಲ್ ಹಾಲ್ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ‘ಈಚೆಗೆ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶದಿಂದ ಆಗಿರುವ ನಿರಾಶೆಯನ್ನು ಲೋಕಸಭೆ ಚುನಾವಣೆಗೆ ಸಕಾರಾತ್ಮಕ ಬಲವನ್ನಾಗಿ ಬದಲಾಯಿಸಬೇಕು’ ಎಂದರು.</p>.<p>ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಇದೇ ಮೊದಲ ಬಾರಿಗೆ ಸೋನಿಯಾ ಅವರು ಮಾತನಾಡಿದ್ದಾರೆ. ‘ನಾವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ತಾಳ್ಮೆ, ದೃಢಚಿತ್ತವು ಸವಾಲು ಎದುರಿಸಲು ನಮಗೆ ಶಕ್ತಿ ನೀಡುತ್ತದೆ. ನಮ್ಮ ಸಿದ್ಧಾಂತ ಮತ್ತು ಮಾಲ್ಯಗಳು ಈ ಸಂದರ್ಭದಲ್ಲಿ ನಮಗೆ ದಾರಿದೀಪವಾಗಲಿವೆ’ ಎಂದರು.</p>.<p>‘ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷವಾಗಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ಸದಸ್ಯ ಪಕ್ಷವಾಗಿ ನಮ್ಮ ಮೇಲೆ ಗುರುತರ ಜವಾಬ್ದಾರಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನಲ್ಲಿ ನ್ಯಾಯಬದ್ಧವಾದ ಬೇಡಿಕೆ ಇರಿಸಿದ ಕಾರಣಕ್ಕಾಗಿ ಸಂಸದರನ್ನು ಅಮಾನತು ಮಾಡುವ ಮೂಲಕ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಆರೋಪಿಸಿದ್ದಾರೆ. </p>.<p>ಸಂವಿಧಾನ ಸದನದ (ಹಳೆ ಸಂಸತ್ ಕಟ್ಟಡ) ಸೆಂಟ್ರಲ್ ಹಾಲ್ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ‘ಈಚೆಗೆ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶದಿಂದ ಆಗಿರುವ ನಿರಾಶೆಯನ್ನು ಲೋಕಸಭೆ ಚುನಾವಣೆಗೆ ಸಕಾರಾತ್ಮಕ ಬಲವನ್ನಾಗಿ ಬದಲಾಯಿಸಬೇಕು’ ಎಂದರು.</p>.<p>ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಇದೇ ಮೊದಲ ಬಾರಿಗೆ ಸೋನಿಯಾ ಅವರು ಮಾತನಾಡಿದ್ದಾರೆ. ‘ನಾವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ತಾಳ್ಮೆ, ದೃಢಚಿತ್ತವು ಸವಾಲು ಎದುರಿಸಲು ನಮಗೆ ಶಕ್ತಿ ನೀಡುತ್ತದೆ. ನಮ್ಮ ಸಿದ್ಧಾಂತ ಮತ್ತು ಮಾಲ್ಯಗಳು ಈ ಸಂದರ್ಭದಲ್ಲಿ ನಮಗೆ ದಾರಿದೀಪವಾಗಲಿವೆ’ ಎಂದರು.</p>.<p>‘ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷವಾಗಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ಸದಸ್ಯ ಪಕ್ಷವಾಗಿ ನಮ್ಮ ಮೇಲೆ ಗುರುತರ ಜವಾಬ್ದಾರಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>