<p><strong>ಸತ್ನಾ (ಮಧ್ಯಪ್ರದೇಶ):</strong> 'ಮೋದಿ, ಅಮಿತ್ ಶಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯಗೊಳ್ಳುತ್ತದೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p> <p>ಭಾನುವಾರ ಮಧ್ಯಪ್ರದೇಶದ ಸತ್ನಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷಗಳಲ್ಲಿ ಇರುವವರೆಗೂ ಭ್ರಷ್ಟರಾಗಿದ್ದವರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. </p> <p>ಸಂವಿಧಾನ ರಕ್ಷಣೆಯಾಗಬೇಕಾದರೆ, ಮಹಿಳೆಯರ, ಕಾರ್ಮಿಕರ ಹಾಗೂ ರೈತರ ಮತದಾನದ ಹಕ್ಕು ಉಳಿಯಬೇಕಾದರೆ ಕಾಂಗ್ರೆಸ್ನ ಹಸ್ತ ಚಿಹ್ನೆಗೆ ಮತ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.</p><p>ಸತ್ನಾ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ಧಾರ್ಥ್ ಕುಶ್ವಾಹ ಪರವಾಗಿ ಖರ್ಗೆ ಸಾತ್ನಾದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿದ್ದಾರೆ.</p>.ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸತ್ನಾ (ಮಧ್ಯಪ್ರದೇಶ):</strong> 'ಮೋದಿ, ಅಮಿತ್ ಶಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯಗೊಳ್ಳುತ್ತದೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p> <p>ಭಾನುವಾರ ಮಧ್ಯಪ್ರದೇಶದ ಸತ್ನಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷಗಳಲ್ಲಿ ಇರುವವರೆಗೂ ಭ್ರಷ್ಟರಾಗಿದ್ದವರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. </p> <p>ಸಂವಿಧಾನ ರಕ್ಷಣೆಯಾಗಬೇಕಾದರೆ, ಮಹಿಳೆಯರ, ಕಾರ್ಮಿಕರ ಹಾಗೂ ರೈತರ ಮತದಾನದ ಹಕ್ಕು ಉಳಿಯಬೇಕಾದರೆ ಕಾಂಗ್ರೆಸ್ನ ಹಸ್ತ ಚಿಹ್ನೆಗೆ ಮತ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.</p><p>ಸತ್ನಾ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ಧಾರ್ಥ್ ಕುಶ್ವಾಹ ಪರವಾಗಿ ಖರ್ಗೆ ಸಾತ್ನಾದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿದ್ದಾರೆ.</p>.ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಆರಂಭವಾಗಿದೆ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>