ಸತ್ನಾ (ಮಧ್ಯಪ್ರದೇಶ): 'ಮೋದಿ, ಅಮಿತ್ ಶಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯಗೊಳ್ಳುತ್ತದೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಭಾನುವಾರ ಮಧ್ಯಪ್ರದೇಶದ ಸತ್ನಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷಗಳಲ್ಲಿ ಇರುವವರೆಗೂ ಭ್ರಷ್ಟರಾಗಿದ್ದವರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.
ಸಂವಿಧಾನ ರಕ್ಷಣೆಯಾಗಬೇಕಾದರೆ, ಮಹಿಳೆಯರ, ಕಾರ್ಮಿಕರ ಹಾಗೂ ರೈತರ ಮತದಾನದ ಹಕ್ಕು ಉಳಿಯಬೇಕಾದರೆ ಕಾಂಗ್ರೆಸ್ನ ಹಸ್ತ ಚಿಹ್ನೆಗೆ ಮತ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.
ಸತ್ನಾ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ಧಾರ್ಥ್ ಕುಶ್ವಾಹ ಪರವಾಗಿ ಖರ್ಗೆ ಸಾತ್ನಾದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿದ್ದಾರೆ.