<p><strong>ನವದೆಹಲಿ:</strong> ಉತ್ತರ ದೆಹಲಿಯ ವಜೀರ್ಪುರದಲ್ಲಿ ಕೋಟಿಗಟ್ಟಲೆ ಮೌಲ್ಯದ ಅಮಾನ್ಯ ಮಾಡಿದ್ದ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ನಗದು ಅಕ್ರಮ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ. </p>.ಇಂಡಿಗೊ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ.ವಿಮಾನ ಸಂಚಾರ ವ್ಯತ್ಯಯ: ಸಮಗ್ರ ವರದಿಯೊಂದಿಗೆ ಹಾಜರಾಗಿ: ಇಂಡಿಗೊಗೆ ಡಿಜಿಸಿಎ ಸೂಚನೆ.<p>₹500 ಹಾಗೂ ₹1000 ಮುಖಬೆಲೆಯ ನೋಟುಗಳನ್ನು ಹೊಂದಿದ್ದ ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. </p><p>ನೋಟು ಸಾಗಣೆಗಾಗಿ ಬಳಕೆ ಮಾಡಲಾದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ. </p><p>ಈ ಹಣ ಎಲ್ಲಿಂದ ಬಂತು ಎಂದು ಪರಿಶೀಲಿಸಲಾಗುತ್ತಿದೆ. ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ 2016ರ ನವೆಂಬರ್ನಲ್ಲಿ ₹500 ಹಾಗೂ ₹1000 ಮುಖಬೆಲೆಯ ನೋಟು ರದ್ದತಿ ನಿರ್ಧಾರವನ್ನು ಪ್ರಕಟಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ದೆಹಲಿಯ ವಜೀರ್ಪುರದಲ್ಲಿ ಕೋಟಿಗಟ್ಟಲೆ ಮೌಲ್ಯದ ಅಮಾನ್ಯ ಮಾಡಿದ್ದ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ನಗದು ಅಕ್ರಮ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ. </p>.ಇಂಡಿಗೊ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ.ವಿಮಾನ ಸಂಚಾರ ವ್ಯತ್ಯಯ: ಸಮಗ್ರ ವರದಿಯೊಂದಿಗೆ ಹಾಜರಾಗಿ: ಇಂಡಿಗೊಗೆ ಡಿಜಿಸಿಎ ಸೂಚನೆ.<p>₹500 ಹಾಗೂ ₹1000 ಮುಖಬೆಲೆಯ ನೋಟುಗಳನ್ನು ಹೊಂದಿದ್ದ ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. </p><p>ನೋಟು ಸಾಗಣೆಗಾಗಿ ಬಳಕೆ ಮಾಡಲಾದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ. </p><p>ಈ ಹಣ ಎಲ್ಲಿಂದ ಬಂತು ಎಂದು ಪರಿಶೀಲಿಸಲಾಗುತ್ತಿದೆ. ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ 2016ರ ನವೆಂಬರ್ನಲ್ಲಿ ₹500 ಹಾಗೂ ₹1000 ಮುಖಬೆಲೆಯ ನೋಟು ರದ್ದತಿ ನಿರ್ಧಾರವನ್ನು ಪ್ರಕಟಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>