<p><strong>ಲಖನೌ:</strong> ಲಂಚ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಾದ ಪಂಚಾಯಿತಿ ಕಾರ್ಯದರ್ಶಿಯೊಬ್ಬರು, ಬದುಕಿರುವ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣಪತ್ರ ವಿತರಿಸಿರುವ ವಿಲಕ್ಷಣ ಪ್ರಕರಣ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ವರದಿಯಾಗಿದೆ.</p><p>ವರದಿಗಳ ಪ್ರಕಾರ, ಜಿಲ್ಲೆಯ ಅತ್ವಾ ಗ್ರಾಮದ ನಿವಾಸಿ ವಿಶ್ವನಾಥ್ ಕುಮಾರ್ ಎಂಬವರು ತಮ್ಮ ಪತ್ನಿ ಶಾಂತಿ ದೇವಿ ಅವರ ಮರಣ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಶಾಂತಿ ದೇವಿ ಅವರು 15 ದಿನಗಳ ಹಿಂದೆ ಮೃತಪಟ್ಟಿದ್ದರು.</p><p>ಒಂದೆರಡು ದಿನಗಳ ಹಿಂದೆ ಕುಮಾರ್ ಅವರ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಲಾಗಿದೆ. ಇದರಿಂದ ಬೇಸರಗೊಂಡ ಅವರು, ಪಂಚಾಯಿತಿ ಅಧಿಕಾರಿಯ ಕ್ರಮದ ವಿರುದ್ಧ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ದೂರು ನೀಡಿದ್ದರು.</p><p>'ದಿವಂಗತ ಪತ್ನಿಯ ಮರಣಪ್ರಮಾಣ ಪತ್ರ ನೀಡಲು ಪಂಚಾಯಿತಿ ಕಾರ್ಯದರ್ಶಿ ಸರಿತಾ ದೇವಿ ಅವರು ₹ 2,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ನಿರಾಕರಿಸಿದ್ದಕ್ಕೆ, ನನ್ನನ್ನು ಪ್ರತಿ ದಿನ ಪಂಚಾಯಿತಿಗೆ ಅಲೆಯುವಂತೆ ಮಾಡಿದ್ದರು' ಎಂದು ಆರೋಪಿಸಿದ್ದರು.</p>.ಹಣ ವಸೂಲಿಗೆ ಅಪಹರಣದ ನಾಟಕ; ಸ್ಪೆಲ್ಲಿಂಗ್ ಮಿಸ್ಟೇಕ್ ಮಾಡಿ ಸಿಕ್ಕಿಬಿದ್ದ ಆರೋಪಿ.ಓಡಿ ಹೋಗಿ ಮದುವೆಯಾದ ಸೋದರ ಸೊಸೆ; ಆರತಕ್ಷತೆ ವೇಳೆ ಊಟಕ್ಕೆ ವಿಷ ಬೆರೆಸಿದ ಮಾವ!.<p>ದೂರಿನ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡಿರುವ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಯ ಅಮಾನತಿಗೆ ಆದೇಶಿಸಿದ್ದಾರೆ. ಹಾಗೆಯೇ, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.</p><p>'ಲಂಚಕ್ಕೆ ಬೇಡಿಕೆ ಇಡುವುದು ಮತ್ತು ಜೀವಂತ ಇರುವವರನ್ನು ಮೃತಪಟ್ಟಿದ್ದಾರೆ ಎಂದು ಪ್ರಮಾಣಪತ್ರ ನೀಡುವುದು ಗಂಭೀರ ವಿಚಾರ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಜಿಲ್ಲೆಯ ಉನ್ನತಾಧಿಕಾರಿಯೊಬ್ಬರು ಬುಧವಾರ ಪ್ರತಿಕ್ರಿಯಿಸಿದ್ದಾರೆ.</p><p>ಹಿರಿಯ ಅಧಿಕಾರಿಗಳ ನಿರ್ದೇಶನದ ಬಳಿಕ ಕುಮಾರ್ ಅವರಿಗೆ ಕೊನೆಗೂ ಸರಿಯಾದ ಪ್ರಮಾಣಪತ್ರ ಸಿಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಲಂಚ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಾದ ಪಂಚಾಯಿತಿ ಕಾರ್ಯದರ್ಶಿಯೊಬ್ಬರು, ಬದುಕಿರುವ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣಪತ್ರ ವಿತರಿಸಿರುವ ವಿಲಕ್ಷಣ ಪ್ರಕರಣ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ವರದಿಯಾಗಿದೆ.</p><p>ವರದಿಗಳ ಪ್ರಕಾರ, ಜಿಲ್ಲೆಯ ಅತ್ವಾ ಗ್ರಾಮದ ನಿವಾಸಿ ವಿಶ್ವನಾಥ್ ಕುಮಾರ್ ಎಂಬವರು ತಮ್ಮ ಪತ್ನಿ ಶಾಂತಿ ದೇವಿ ಅವರ ಮರಣ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಶಾಂತಿ ದೇವಿ ಅವರು 15 ದಿನಗಳ ಹಿಂದೆ ಮೃತಪಟ್ಟಿದ್ದರು.</p><p>ಒಂದೆರಡು ದಿನಗಳ ಹಿಂದೆ ಕುಮಾರ್ ಅವರ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಲಾಗಿದೆ. ಇದರಿಂದ ಬೇಸರಗೊಂಡ ಅವರು, ಪಂಚಾಯಿತಿ ಅಧಿಕಾರಿಯ ಕ್ರಮದ ವಿರುದ್ಧ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ದೂರು ನೀಡಿದ್ದರು.</p><p>'ದಿವಂಗತ ಪತ್ನಿಯ ಮರಣಪ್ರಮಾಣ ಪತ್ರ ನೀಡಲು ಪಂಚಾಯಿತಿ ಕಾರ್ಯದರ್ಶಿ ಸರಿತಾ ದೇವಿ ಅವರು ₹ 2,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ನಿರಾಕರಿಸಿದ್ದಕ್ಕೆ, ನನ್ನನ್ನು ಪ್ರತಿ ದಿನ ಪಂಚಾಯಿತಿಗೆ ಅಲೆಯುವಂತೆ ಮಾಡಿದ್ದರು' ಎಂದು ಆರೋಪಿಸಿದ್ದರು.</p>.ಹಣ ವಸೂಲಿಗೆ ಅಪಹರಣದ ನಾಟಕ; ಸ್ಪೆಲ್ಲಿಂಗ್ ಮಿಸ್ಟೇಕ್ ಮಾಡಿ ಸಿಕ್ಕಿಬಿದ್ದ ಆರೋಪಿ.ಓಡಿ ಹೋಗಿ ಮದುವೆಯಾದ ಸೋದರ ಸೊಸೆ; ಆರತಕ್ಷತೆ ವೇಳೆ ಊಟಕ್ಕೆ ವಿಷ ಬೆರೆಸಿದ ಮಾವ!.<p>ದೂರಿನ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡಿರುವ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಯ ಅಮಾನತಿಗೆ ಆದೇಶಿಸಿದ್ದಾರೆ. ಹಾಗೆಯೇ, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.</p><p>'ಲಂಚಕ್ಕೆ ಬೇಡಿಕೆ ಇಡುವುದು ಮತ್ತು ಜೀವಂತ ಇರುವವರನ್ನು ಮೃತಪಟ್ಟಿದ್ದಾರೆ ಎಂದು ಪ್ರಮಾಣಪತ್ರ ನೀಡುವುದು ಗಂಭೀರ ವಿಚಾರ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಜಿಲ್ಲೆಯ ಉನ್ನತಾಧಿಕಾರಿಯೊಬ್ಬರು ಬುಧವಾರ ಪ್ರತಿಕ್ರಿಯಿಸಿದ್ದಾರೆ.</p><p>ಹಿರಿಯ ಅಧಿಕಾರಿಗಳ ನಿರ್ದೇಶನದ ಬಳಿಕ ಕುಮಾರ್ ಅವರಿಗೆ ಕೊನೆಗೂ ಸರಿಯಾದ ಪ್ರಮಾಣಪತ್ರ ಸಿಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>