<p><strong>ಪಟ್ನಾ(ಬಿಹಾರ)</strong>: ಹಣ ಪಡೆದುಕೊಂಡು ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಆರೋಪಿಸಿರುವ ಆರ್ಜೆಡಿ ಪಕ್ಷದ ಟಿಕೆಟ್ ಆಕಾಂಕ್ಷಿಯೊಬ್ಬರು, ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಅವರ ನಿವಾಸ ಮುಂದೆ ಬಟ್ಟೆ ಹರಿದುಕೊಂಡು, ರಸ್ತೆಯಲ್ಲಿ ಉರುಳಾಡಿ ಕಣ್ನೀರಿಟ್ಟಿದ್ದಾರೆ.</p><p>ಮದನ್ ಸಾಹ್ ಅವರು ಆರ್ಜೆಡಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2020ರಲ್ಲಿ ಆರ್ಜೆಡಿ ಟಿಕೆಟ್ನಿಂದ ಮಧುಬನ್ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋತಿದ್ದರು. ಈ ಬಾರಿಯೂ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದ ಅವರಿಗೆ ಪಕ್ಷವು ಟಿಕೆಟ್ ನಿರಾಕರಿಸಿದೆ. ಸುದೀರ್ಘ ಕಾಲ ಪಕ್ಷದ ಕೆಲಸ ಮಾಡಿದ ತಮಗೆ ಟಿಕೆಟ್ ನಿರಾಕರಿಸಿರುವುದು ಸರಿಯಲ್ಲ ಎಂದು ಸಾಹ್ ಅವರು ಅವಲತ್ತುಕೊಂಡಿದ್ದಾರೆ.</p><p>‘ಟಿಕೆಟ್ಗಾಗಿ ನನ್ನ ಬಳಿ ₹2.70 ಕೋಟಿ ಕೇಳಿದ್ದರು. ನನ್ನ ಮಕ್ಕಳ ಮದುವೆಯನ್ನು ಮುಂದೂಡುವ ಮೂಲಕ ಹಣ ಹೊಂದಿಸಿದ್ದೆ. ಈಗ ಎಲ್ಲವೂ ಮುಗಿದಿದೆ. ಕನಿಷ್ಠ ಪಕ್ಷ ಅವರು ನನ್ನ ಹಣವನ್ನು ಹಿಂದಿರುಗಿಸಬೇಕು’ ಎಂದು ಮಾಧ್ಯಮಗಳ ಮುಂದೆ ಸಾಹ್ ಆರೋಪಿಸಿದ್ದಾರೆ.</p><p>ಸಾಹ್ ಅವರ ಆರೋಪ ಕುರಿತಂತೆ ಆರ್ಜೆಡಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿದೆ. ಮಧುಬನ್ ಕ್ಷೇತ್ರದಿಂದ ಆರ್ಜೆಡಿ ಸ್ಪರ್ಧಿಸಲಿದೆಯೇ? ಅಥವಾ ಅದರ ಮಿತ್ರಪಕ್ಷಗಳು ಸ್ಪರ್ಧಿಸುತ್ತವೆಯೇ? ಎಂಬುದು ಇನ್ನು ಸ್ಪಷ್ಟವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ(ಬಿಹಾರ)</strong>: ಹಣ ಪಡೆದುಕೊಂಡು ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಆರೋಪಿಸಿರುವ ಆರ್ಜೆಡಿ ಪಕ್ಷದ ಟಿಕೆಟ್ ಆಕಾಂಕ್ಷಿಯೊಬ್ಬರು, ಪಕ್ಷದ ಅಧ್ಯಕ್ಷ ಲಾಲೂ ಪ್ರಸಾದ್ ಅವರ ನಿವಾಸ ಮುಂದೆ ಬಟ್ಟೆ ಹರಿದುಕೊಂಡು, ರಸ್ತೆಯಲ್ಲಿ ಉರುಳಾಡಿ ಕಣ್ನೀರಿಟ್ಟಿದ್ದಾರೆ.</p><p>ಮದನ್ ಸಾಹ್ ಅವರು ಆರ್ಜೆಡಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2020ರಲ್ಲಿ ಆರ್ಜೆಡಿ ಟಿಕೆಟ್ನಿಂದ ಮಧುಬನ್ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋತಿದ್ದರು. ಈ ಬಾರಿಯೂ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದ ಅವರಿಗೆ ಪಕ್ಷವು ಟಿಕೆಟ್ ನಿರಾಕರಿಸಿದೆ. ಸುದೀರ್ಘ ಕಾಲ ಪಕ್ಷದ ಕೆಲಸ ಮಾಡಿದ ತಮಗೆ ಟಿಕೆಟ್ ನಿರಾಕರಿಸಿರುವುದು ಸರಿಯಲ್ಲ ಎಂದು ಸಾಹ್ ಅವರು ಅವಲತ್ತುಕೊಂಡಿದ್ದಾರೆ.</p><p>‘ಟಿಕೆಟ್ಗಾಗಿ ನನ್ನ ಬಳಿ ₹2.70 ಕೋಟಿ ಕೇಳಿದ್ದರು. ನನ್ನ ಮಕ್ಕಳ ಮದುವೆಯನ್ನು ಮುಂದೂಡುವ ಮೂಲಕ ಹಣ ಹೊಂದಿಸಿದ್ದೆ. ಈಗ ಎಲ್ಲವೂ ಮುಗಿದಿದೆ. ಕನಿಷ್ಠ ಪಕ್ಷ ಅವರು ನನ್ನ ಹಣವನ್ನು ಹಿಂದಿರುಗಿಸಬೇಕು’ ಎಂದು ಮಾಧ್ಯಮಗಳ ಮುಂದೆ ಸಾಹ್ ಆರೋಪಿಸಿದ್ದಾರೆ.</p><p>ಸಾಹ್ ಅವರ ಆರೋಪ ಕುರಿತಂತೆ ಆರ್ಜೆಡಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿದೆ. ಮಧುಬನ್ ಕ್ಷೇತ್ರದಿಂದ ಆರ್ಜೆಡಿ ಸ್ಪರ್ಧಿಸಲಿದೆಯೇ? ಅಥವಾ ಅದರ ಮಿತ್ರಪಕ್ಷಗಳು ಸ್ಪರ್ಧಿಸುತ್ತವೆಯೇ? ಎಂಬುದು ಇನ್ನು ಸ್ಪಷ್ಟವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>