ನವದೆಹಲಿ (ಪಿಟಿಐ): ‘ಕೇಂದ್ರ ಸರ್ಕಾರವು ‘ಅರಣ್ಯ (ಸಂರಕ್ಷಣಾ) ತಿದ್ದುಪಡಿ ಮಸೂದೆ’ಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ನೀಡುವ ಬದಲಿಗೆ, ಜಂಟಿ ಸಮಿತಿಗೆ ನೀಡಿದೆ. ಈ ಮೂಲಕ ಸ್ಥಾಯಿ ಸಮಿತಿಯನ್ನು ಅಪಮೌಲ್ಯ ಮತ್ತು ಅವಹೇಳನ ಮಾಡಿದೆ’ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಈ ಸಂಬಂಧ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಅವರು, ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಎಂದು ಆಗ್ರಹಿಸಿದ್ದಾರೆ.