ಕೋವಿಡ್ ಮತ್ತು ಭಾರಿ ಮಳೆಯ ಕಾರಣ ಯಾತ್ರಾರ್ಥಿಗಳನ್ನು ನಿಯಂತ್ರಿಸುವುದಕ್ಕಾಗಿ ಹಿಂದಿನ ವರ್ಷದಂತೆ ಈ ಬಾರಿಯೂ ವರ್ಚುವಲ್ ಸರದಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ಮುಂದಿನ ಮೂರ್ನಾಲ್ಕು ದಿನ ಭಕ್ತರ ಭೇಟಿಗೆ ಮಿತಿ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಪಂಪಾ ನದಿ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿರುವುದರಿಂದ ನದಿಯಲ್ಲಿ ಸ್ನಾನ ಮಾಡಲು ಯಾರಿಗೂ ಅವಕಾಶ ನೀಡಿಲ್ಲ.