<p><strong>ನವದೆಹಲಿ:</strong> ‘ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಆಗುವುದು ವಿಧಿಯ ತೀರ್ಮಾನ ಆಗಿತ್ತು. ವಿಧಿಯು ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದೆ’ ಎಂದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.</p> <p>ರಾಷ್ಟ್ರಧರ್ಮ ನಿಯತಕಾಲಿಕೆಯಲ್ಲಿ ಬರೆದಿರುವ 'ಏಕ್ ದಿವ್ಯ ಸ್ವಪ್ನಕಿ ಪೂರ್ಣಿ' (ಒಂದು ದಿವ್ಯ ಸ್ವಪ್ನ ಪೂರ್ಣ) ವಿಶೇಷ ಲೇಖನದಲ್ಲಿ ಅವರು ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ 'ರಥಯಾತ್ರೆ' ಬಗ್ಗೆ ಮೆಲುಕು ಹಾಕಿದ್ದಾರೆ.</p> <p>‘ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ಕೈಗೊಂಡಿದ್ದ ರಥಯಾತ್ರೆಯು ತಮ್ಮ ರಾಜಕೀಯ ಜೀವನದ ‘ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟನೆ ಆಗಿತ್ತು’ ಎಂದು ಲೇಖನದಲ್ಲಿ ಅವರು ತಿಳಿಸಿದ್ದಾರೆ.</p> <p>ಅಯೋಧ್ಯೆ ಚಳವಳಿಯು 'ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟ್ಟ ಎಂಬುವುದು ನನ್ನ ನಂಬಿಕೆ. ಈ ಪ್ರಯಾಣವು ನನಗೆ ಭಾರತವನ್ನು ಮರು ಶೋಧಿಸಲು ಮತ್ತು ನನ್ನನ್ನು ತಾನು ಪುನಃ ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಮಂದಿರ ನಿರ್ಮಾಣದ ಮೂಲಕ ದಿವ್ಯ ಸ್ವಪ್ನವೊಂದು ಪೂರ್ತಿಯಾದ ತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ.</p><p>ರಾಮ ರಥಯಾತ್ರೆ 33 ವರ್ಷಗಳನ್ನು ಪೂರೈಸಿದೆ. 1990ರ ಸೆಪ್ಟೆಂಬರ್ 25 ರಂದು ಬೆಳಿಗ್ಗೆ ರಥಯಾತ್ರೆಯನ್ನು ಪ್ರಾರಂಭಿಸಿದಾಗ, ಭಗವಾನ್ ರಾಮನ ಮೇಲಿನ ನಂಬಿಕೆಯು ಒಂದು ಚಳುವಳಿಯ ಸ್ವರೂಪವನ್ನು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ ಎಂದು ಅಡ್ವಾಣಿ ಹೇಳಿದ್ದಾರೆ </p><p>‘76 ವರ್ಷದ ಹಿಂದಿ ನಿಯತಕಾಲಿಕೆ ರಾಷ್ಟ್ರ ಧರ್ಮ'ದ ವಿಶೇಷ ಆವೃತ್ತಿಗೆ ಬರೆದಿರುವ ಲೇಖನದಲ್ಲಿ, ರಥಯಾತ್ರೆಯ ಉದ್ದಕ್ಕೂ ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮೊಂದಿಗೆ ಇದ್ದರು. ಆಗ(ಮೋದಿ) ಅವರು ಹೆಚ್ಚು ಜನಪ್ರಿಯರಾಗಿರಲಿಲ್ಲ. ಆದರೆ ಆ ಸಮಯದಲ್ಲಿ ಭಗವಾನ್ ರಾಮನು ತನ್ನ ದೇವಾಲಯವನ್ನು ಮರುನಿರ್ಮಾಣ ಮಾಡಲು ತನ್ನ ಭಕ್ತನನ್ನು (ಮೋದಿ) ಆಯ್ಕೆ ಮಾಡಿದ್ದನು ಎಂದು ಅಡ್ವಾಣಿ ಬರೆದಿರುವುದಾಗಿ ಮೂಲವೊಂದು ತಿಳಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ವಿಗ್ರಹವನ್ನು ಮಂದಿರದಲ್ಲಿ ಪ್ರತಿಷ್ಠಾಪಿಸಿದಾಗ, ಅವರು ದೇಶದ ಪ್ರತಿಯೊಬ್ಬ ನಾಗರಿಕರನ್ನು ಪ್ರತಿನಿಧಿಸುತ್ತಾರೆ. ಈ ಮೂಲಕ ದಮನಿತರ ಆಸೆಗಳು ಈಡೇರುತ್ತವೆ. ಶ್ರೀರಾಮನ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ಭಾರತೀಯರನ್ನು ಪ್ರೇರೇಪಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಜೊತೆಗೆ ಮಂದಿರ ಕನಸನ್ನು ಸಾಕಾರಗೊಳಿಸಿದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಎಂದು ಅವರು ಹೇಳಿದ್ದಾರೆ.</p> <p>ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಾದ್ಯಂತದ ಸಾವಿರಾರು ಭಕ್ತರು ಮತ್ತು ಇತರ ಗಣ್ಯರನ್ನು ಆಹ್ವಾನಿಸಲಾಗಿದೆ.</p><p>ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅಡ್ವಾಣಿ ಅವರು ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಅವರು ಬರೆದಿರುವ ಲೇಖನ ಜನವರಿ 16ರಂದು 'ರಾಷ್ಟ್ರ ಧರ್ಮ' ನಿಯತಕಾಲಿಕೆಯಲ್ಲಿ ಪ್ರಕಟವಾಗಲಿದೆ. ಅದರ ಪ್ರತಿಯನ್ನು ಮಂದಿರ ಉದ್ಘಾಟನೆಗೆ ಬರುವ ಭಕ್ತರಿಗೆ ಹಂಚಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಆಗುವುದು ವಿಧಿಯ ತೀರ್ಮಾನ ಆಗಿತ್ತು. ವಿಧಿಯು ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದೆ’ ಎಂದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.</p> <p>ರಾಷ್ಟ್ರಧರ್ಮ ನಿಯತಕಾಲಿಕೆಯಲ್ಲಿ ಬರೆದಿರುವ 'ಏಕ್ ದಿವ್ಯ ಸ್ವಪ್ನಕಿ ಪೂರ್ಣಿ' (ಒಂದು ದಿವ್ಯ ಸ್ವಪ್ನ ಪೂರ್ಣ) ವಿಶೇಷ ಲೇಖನದಲ್ಲಿ ಅವರು ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ 'ರಥಯಾತ್ರೆ' ಬಗ್ಗೆ ಮೆಲುಕು ಹಾಕಿದ್ದಾರೆ.</p> <p>‘ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ಕೈಗೊಂಡಿದ್ದ ರಥಯಾತ್ರೆಯು ತಮ್ಮ ರಾಜಕೀಯ ಜೀವನದ ‘ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟನೆ ಆಗಿತ್ತು’ ಎಂದು ಲೇಖನದಲ್ಲಿ ಅವರು ತಿಳಿಸಿದ್ದಾರೆ.</p> <p>ಅಯೋಧ್ಯೆ ಚಳವಳಿಯು 'ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟ್ಟ ಎಂಬುವುದು ನನ್ನ ನಂಬಿಕೆ. ಈ ಪ್ರಯಾಣವು ನನಗೆ ಭಾರತವನ್ನು ಮರು ಶೋಧಿಸಲು ಮತ್ತು ನನ್ನನ್ನು ತಾನು ಪುನಃ ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಮಂದಿರ ನಿರ್ಮಾಣದ ಮೂಲಕ ದಿವ್ಯ ಸ್ವಪ್ನವೊಂದು ಪೂರ್ತಿಯಾದ ತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ.</p><p>ರಾಮ ರಥಯಾತ್ರೆ 33 ವರ್ಷಗಳನ್ನು ಪೂರೈಸಿದೆ. 1990ರ ಸೆಪ್ಟೆಂಬರ್ 25 ರಂದು ಬೆಳಿಗ್ಗೆ ರಥಯಾತ್ರೆಯನ್ನು ಪ್ರಾರಂಭಿಸಿದಾಗ, ಭಗವಾನ್ ರಾಮನ ಮೇಲಿನ ನಂಬಿಕೆಯು ಒಂದು ಚಳುವಳಿಯ ಸ್ವರೂಪವನ್ನು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ ಎಂದು ಅಡ್ವಾಣಿ ಹೇಳಿದ್ದಾರೆ </p><p>‘76 ವರ್ಷದ ಹಿಂದಿ ನಿಯತಕಾಲಿಕೆ ರಾಷ್ಟ್ರ ಧರ್ಮ'ದ ವಿಶೇಷ ಆವೃತ್ತಿಗೆ ಬರೆದಿರುವ ಲೇಖನದಲ್ಲಿ, ರಥಯಾತ್ರೆಯ ಉದ್ದಕ್ಕೂ ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮೊಂದಿಗೆ ಇದ್ದರು. ಆಗ(ಮೋದಿ) ಅವರು ಹೆಚ್ಚು ಜನಪ್ರಿಯರಾಗಿರಲಿಲ್ಲ. ಆದರೆ ಆ ಸಮಯದಲ್ಲಿ ಭಗವಾನ್ ರಾಮನು ತನ್ನ ದೇವಾಲಯವನ್ನು ಮರುನಿರ್ಮಾಣ ಮಾಡಲು ತನ್ನ ಭಕ್ತನನ್ನು (ಮೋದಿ) ಆಯ್ಕೆ ಮಾಡಿದ್ದನು ಎಂದು ಅಡ್ವಾಣಿ ಬರೆದಿರುವುದಾಗಿ ಮೂಲವೊಂದು ತಿಳಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ವಿಗ್ರಹವನ್ನು ಮಂದಿರದಲ್ಲಿ ಪ್ರತಿಷ್ಠಾಪಿಸಿದಾಗ, ಅವರು ದೇಶದ ಪ್ರತಿಯೊಬ್ಬ ನಾಗರಿಕರನ್ನು ಪ್ರತಿನಿಧಿಸುತ್ತಾರೆ. ಈ ಮೂಲಕ ದಮನಿತರ ಆಸೆಗಳು ಈಡೇರುತ್ತವೆ. ಶ್ರೀರಾಮನ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಎಲ್ಲಾ ಭಾರತೀಯರನ್ನು ಪ್ರೇರೇಪಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಜೊತೆಗೆ ಮಂದಿರ ಕನಸನ್ನು ಸಾಕಾರಗೊಳಿಸಿದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಎಂದು ಅವರು ಹೇಳಿದ್ದಾರೆ.</p> <p>ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಾದ್ಯಂತದ ಸಾವಿರಾರು ಭಕ್ತರು ಮತ್ತು ಇತರ ಗಣ್ಯರನ್ನು ಆಹ್ವಾನಿಸಲಾಗಿದೆ.</p><p>ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅಡ್ವಾಣಿ ಅವರು ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಅವರು ಬರೆದಿರುವ ಲೇಖನ ಜನವರಿ 16ರಂದು 'ರಾಷ್ಟ್ರ ಧರ್ಮ' ನಿಯತಕಾಲಿಕೆಯಲ್ಲಿ ಪ್ರಕಟವಾಗಲಿದೆ. ಅದರ ಪ್ರತಿಯನ್ನು ಮಂದಿರ ಉದ್ಘಾಟನೆಗೆ ಬರುವ ಭಕ್ತರಿಗೆ ಹಂಚಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>