<p><strong>ಲಾತೂರ್:</strong> ಉತ್ತಮ ರಸ್ತೆಗಳಿಲ್ಲದೆ ಅಭಿವೃದ್ಧಿ ಹೊಂದುವುದು ಅಸಾಧ್ಯ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ರಸ್ತೆಗಳನ್ನು ಸುಧಾರಿಸುವತ್ತ ಗಮನಹರಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>₹40 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತ್ನ ಸೂರತ್ ಮತ್ತು ದಕ್ಷಿಣ ಭಾರತದೊಂದಿಗೆ ಸಂಪರ್ಕ ಕಲ್ಪಿಸುವ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಇದು ಮಹಾರಾಷ್ಟ್ರದ ನಾಶಿಕ್, ಅಹ್ಮದ್ ನಗರ ಮತ್ತು ಸೋಲಾಪುರ ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ರಸ್ತೆಯ ಸಂಪರ್ಕವನ್ನು ಲಾತೂರ್ ಜಿಲ್ಲೆಯೂ ಸೇರಿದಂತೆ ಮರಾಠವಾಡ ಪ್ರದೇಶದ ಇತರ ಪ್ರದೇಶಗಳಿಗೂ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/govt-plans-more-tax-concessions-on-vehicles-purchased-after-scrapping-old-ones-gadkari-886420.html" itemprop="url">ಗುಜರಿ ನೀತಿ ಅಡಿ ಇನ್ನಷ್ಟು ವಿನಾಯಿತಿ ನೀಡುವ ಬಗ್ಗೆ ಪರಿಶೀಲನೆ: ನಿತಿನ್ ಗಡ್ಕರಿ </a></p>.<p>₹1,023 ಕೋಟಿ ವೆಚ್ಚದ 19 ರಸ್ತೆ ನಿರ್ಮಾಣ ಯೋಜನೆಗಳಿಗೆ ಲಾತೂರ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ.</p>.<p>‘ಲಾತೂರ್ ಜಿಲ್ಲೆಯಲ್ಲಿ ಅನೇಕ ಹೆದ್ದಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಹೊಸ ರಸ್ತೆಗಳು ಯುವಕರ ಭವಿಷ್ಯ ರೂಪಿಸಲಿವೆ. ಅನೇಕ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p>‘ಕಳೆದ ಕೆಲವು ವರ್ಷಗಳಲ್ಲಿ ಅನೇಕ ರಸ್ತೆಗಳನ್ನು ಸುಧಾರಿಸಲಾಗಿದೆ. ಹೊಸ ರಸ್ತೆಗಳನ್ನು ನಿರ್ಮಿಸಲಾಗಿದೆ. ಲಾತೂರ್ನಲ್ಲಿಯೂ ಹೆದ್ದಾರಿಗಳ ವಿಸ್ತರಣೆ ಮಾಡಲಾಗಿದೆ’ ಎಂದು ಗಡ್ಕರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾತೂರ್:</strong> ಉತ್ತಮ ರಸ್ತೆಗಳಿಲ್ಲದೆ ಅಭಿವೃದ್ಧಿ ಹೊಂದುವುದು ಅಸಾಧ್ಯ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ರಸ್ತೆಗಳನ್ನು ಸುಧಾರಿಸುವತ್ತ ಗಮನಹರಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>₹40 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತ್ನ ಸೂರತ್ ಮತ್ತು ದಕ್ಷಿಣ ಭಾರತದೊಂದಿಗೆ ಸಂಪರ್ಕ ಕಲ್ಪಿಸುವ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಇದು ಮಹಾರಾಷ್ಟ್ರದ ನಾಶಿಕ್, ಅಹ್ಮದ್ ನಗರ ಮತ್ತು ಸೋಲಾಪುರ ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ರಸ್ತೆಯ ಸಂಪರ್ಕವನ್ನು ಲಾತೂರ್ ಜಿಲ್ಲೆಯೂ ಸೇರಿದಂತೆ ಮರಾಠವಾಡ ಪ್ರದೇಶದ ಇತರ ಪ್ರದೇಶಗಳಿಗೂ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/govt-plans-more-tax-concessions-on-vehicles-purchased-after-scrapping-old-ones-gadkari-886420.html" itemprop="url">ಗುಜರಿ ನೀತಿ ಅಡಿ ಇನ್ನಷ್ಟು ವಿನಾಯಿತಿ ನೀಡುವ ಬಗ್ಗೆ ಪರಿಶೀಲನೆ: ನಿತಿನ್ ಗಡ್ಕರಿ </a></p>.<p>₹1,023 ಕೋಟಿ ವೆಚ್ಚದ 19 ರಸ್ತೆ ನಿರ್ಮಾಣ ಯೋಜನೆಗಳಿಗೆ ಲಾತೂರ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ.</p>.<p>‘ಲಾತೂರ್ ಜಿಲ್ಲೆಯಲ್ಲಿ ಅನೇಕ ಹೆದ್ದಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಹೊಸ ರಸ್ತೆಗಳು ಯುವಕರ ಭವಿಷ್ಯ ರೂಪಿಸಲಿವೆ. ಅನೇಕ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p>‘ಕಳೆದ ಕೆಲವು ವರ್ಷಗಳಲ್ಲಿ ಅನೇಕ ರಸ್ತೆಗಳನ್ನು ಸುಧಾರಿಸಲಾಗಿದೆ. ಹೊಸ ರಸ್ತೆಗಳನ್ನು ನಿರ್ಮಿಸಲಾಗಿದೆ. ಲಾತೂರ್ನಲ್ಲಿಯೂ ಹೆದ್ದಾರಿಗಳ ವಿಸ್ತರಣೆ ಮಾಡಲಾಗಿದೆ’ ಎಂದು ಗಡ್ಕರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>