<p><strong>ನವದೆಹಲಿ:</strong> ಈಶಾನ್ಯ ಪ್ರದೇಶದಲ್ಲಿ ಕಡಿಮೆ ಜನಸಂಖ್ಯೆ ಮತ್ತು ಮತಗಳು ಇದ್ದ ಕಾರಣ ಈ ಭಾಗದ ಪ್ರಗತಿಗೆ ಹಿಂದಿನ ಸರ್ಕಾರಗಳು ಹೆಚ್ಚಿನ ಒತ್ತು ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಭಾಗಕ್ಕೆ ಸಚಿವಾಲಯವೊಂದನ್ನು ಮೀಸಲಿಸಿರಿಸಿದ ಹೆಗ್ಗಳಿಕೆ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಲ್ಲುತ್ತದೆ. ಈ ಭಾಗದ ಅಭಿವೃದ್ಧಿಗೆ ಪ್ರತಿ ಸಚಿವಾಲಯಕ್ಕೆ ಬಜೆಟ್ನಲ್ಲಿ ಅವರು ಶೇ 20 ಮೀಸಲಿರಿಸಿದ್ದರು’ ಎಂದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದೇವೆ. ಇದು ಸುಲಭದ ಕೆಲಸವಾಗಿರಲಿಲ್ಲ. ಭಾರತದ ಪ್ರಗತಿಯೊಂದಿಗೆ ಈಶಾನ್ಯ ರಾಜ್ಯಗಳನ್ನೂ ಸೇರಿಸಲು ನಾವು ಸಾಧ್ಯವಾದಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಹೇಳಿದರು. </p>.<p>ಮುಂಬರುವ ದಿನಗಳಲ್ಲಿ ಪೂರ್ವ ಭಾರತ ಮತ್ತು ಈಶಾನ್ಯ ಭಾಗಗಳು ಸಾಕಷ್ಟು ಅಭಿವೃದ್ಧಿ ಕಾಣಲಿವೆ. ಮುಂಬೈ, ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರು ನಗರಗಳಂತೆ ಗುವಾಹಟಿ, ಶಿಲ್ಲಾಂಗ್, ಇಂಫಾಲ್, ಇಟಾನಗರ ಮತ್ತು ಐಜ್ವಾಲ್ ನಗರಗಳು ಬೆಳವಣಿಗೆ ಹೊಂದಲಿವೆ ಎಂದು ಪ್ರಧಾನಿ ಹೇಳಿದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ದೆಹಲಿ ಹಾಗೂ ಈಶಾನ್ಯ ಜನರ ನಡುವಿನ ಕಂದಕ ತಗ್ಗಿಸಲು ನಮ್ಮ ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದೆ. ಕೇಂದ್ರದ ಸಚಿವರು ಹತ್ತು ವರ್ಷಗಳಲ್ಲಿ 700 ಬಾರಿ ಈಶಾನ್ಯ ಭಾಗಕ್ಕೆ ಭೇಟಿ ನೀಡಿದ್ದಾರೆ’ ಎಂದರು.</p>.<p>ಮೊದಲ ಬಾರಿಗೆ ಅಷ್ಟಲಕ್ಮ್ಷಿ ಮಹೋತ್ಸವವನ್ನು ಇಲ್ಲಿನ ಭಾರತ ಮಂಟಪದಲ್ಲಿ ಡಿ.6ರಿಂದ 8ರವರೆಗೆ ಆಚರಿಸಲಾಗುತ್ತಿದೆ. ಈ ಉತ್ಸವವು ಈಶಾನ್ಯ ಭಾಗದ ಎಂಟು ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ ಮತ್ತು ಸಿಕ್ಕಿಂನ ಸೌಂದರ್ಯ, ವೈವಿಧ್ಯ ಪ್ರದರ್ಶಿಸುವ ಗುರಿ ಹೊಂದಿದೆ. ಇವೆಲ್ಲವನ್ನೂ ಒಟ್ಟಾಗಿ ‘ಅಷ್ಟಲಕ್ಷ್ಮಿ’ ಎಂದು ಕರೆಯಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈಶಾನ್ಯ ಪ್ರದೇಶದಲ್ಲಿ ಕಡಿಮೆ ಜನಸಂಖ್ಯೆ ಮತ್ತು ಮತಗಳು ಇದ್ದ ಕಾರಣ ಈ ಭಾಗದ ಪ್ರಗತಿಗೆ ಹಿಂದಿನ ಸರ್ಕಾರಗಳು ಹೆಚ್ಚಿನ ಒತ್ತು ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಭಾಗಕ್ಕೆ ಸಚಿವಾಲಯವೊಂದನ್ನು ಮೀಸಲಿಸಿರಿಸಿದ ಹೆಗ್ಗಳಿಕೆ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಲ್ಲುತ್ತದೆ. ಈ ಭಾಗದ ಅಭಿವೃದ್ಧಿಗೆ ಪ್ರತಿ ಸಚಿವಾಲಯಕ್ಕೆ ಬಜೆಟ್ನಲ್ಲಿ ಅವರು ಶೇ 20 ಮೀಸಲಿರಿಸಿದ್ದರು’ ಎಂದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದೇವೆ. ಇದು ಸುಲಭದ ಕೆಲಸವಾಗಿರಲಿಲ್ಲ. ಭಾರತದ ಪ್ರಗತಿಯೊಂದಿಗೆ ಈಶಾನ್ಯ ರಾಜ್ಯಗಳನ್ನೂ ಸೇರಿಸಲು ನಾವು ಸಾಧ್ಯವಾದಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಹೇಳಿದರು. </p>.<p>ಮುಂಬರುವ ದಿನಗಳಲ್ಲಿ ಪೂರ್ವ ಭಾರತ ಮತ್ತು ಈಶಾನ್ಯ ಭಾಗಗಳು ಸಾಕಷ್ಟು ಅಭಿವೃದ್ಧಿ ಕಾಣಲಿವೆ. ಮುಂಬೈ, ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರು ನಗರಗಳಂತೆ ಗುವಾಹಟಿ, ಶಿಲ್ಲಾಂಗ್, ಇಂಫಾಲ್, ಇಟಾನಗರ ಮತ್ತು ಐಜ್ವಾಲ್ ನಗರಗಳು ಬೆಳವಣಿಗೆ ಹೊಂದಲಿವೆ ಎಂದು ಪ್ರಧಾನಿ ಹೇಳಿದರು.</p>.<p>‘ಕಳೆದ ಹತ್ತು ವರ್ಷಗಳಲ್ಲಿ ದೆಹಲಿ ಹಾಗೂ ಈಶಾನ್ಯ ಜನರ ನಡುವಿನ ಕಂದಕ ತಗ್ಗಿಸಲು ನಮ್ಮ ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದೆ. ಕೇಂದ್ರದ ಸಚಿವರು ಹತ್ತು ವರ್ಷಗಳಲ್ಲಿ 700 ಬಾರಿ ಈಶಾನ್ಯ ಭಾಗಕ್ಕೆ ಭೇಟಿ ನೀಡಿದ್ದಾರೆ’ ಎಂದರು.</p>.<p>ಮೊದಲ ಬಾರಿಗೆ ಅಷ್ಟಲಕ್ಮ್ಷಿ ಮಹೋತ್ಸವವನ್ನು ಇಲ್ಲಿನ ಭಾರತ ಮಂಟಪದಲ್ಲಿ ಡಿ.6ರಿಂದ 8ರವರೆಗೆ ಆಚರಿಸಲಾಗುತ್ತಿದೆ. ಈ ಉತ್ಸವವು ಈಶಾನ್ಯ ಭಾಗದ ಎಂಟು ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ ಮತ್ತು ಸಿಕ್ಕಿಂನ ಸೌಂದರ್ಯ, ವೈವಿಧ್ಯ ಪ್ರದರ್ಶಿಸುವ ಗುರಿ ಹೊಂದಿದೆ. ಇವೆಲ್ಲವನ್ನೂ ಒಟ್ಟಾಗಿ ‘ಅಷ್ಟಲಕ್ಷ್ಮಿ’ ಎಂದು ಕರೆಯಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>