ಇದಕ್ಕೂ ಮೊದಲು ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿದ್ದ ಜೆ.ಪಿ ನಡ್ಡಾ, ‘ದೇವೇಂದ್ರ ಫಡಣವೀಸ್ ಅವರು ಮಹಾರಾಷ್ಟ್ರ ಸರ್ಕಾರದ ಭಾಗವಾಗಬೇಕು ಎಂದು ಬಿಜೆಪಿಯ ಕೇಂದ್ರ ನಾಯಕತ್ವ ನಿರ್ಧರಿಸಿದೆ. ಹಾಗಾಗಿ ಅವರಿಗೆ ವೈಯಕ್ತಿಕವಾಗಿ ಮನವಿ ಮಾಡುತ್ತಿದ್ದೇನೆ. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಕೇಂದ್ರ ನಾಯಕತ್ವ ಹೇಳಿದೆ’ ಎಂದು ನಡ್ಡಾ ತಿಳಿಸಿದರು.