<p><strong>ಸಂಭಾಜಿನಗರ:</strong> ‘ಮಗಳ ಬಗ್ಗೆ ಅಷ್ಟೊಂದು ಕಾಳಜಿ ವಹಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮರಾಠರ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಮೀಸಲಾತಿ ನೀಡುತ್ತಿಲ್ಲ ಏಕೆ’ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಪ್ರಶ್ನಿಸಿದ್ದಾರೆ. </p><p>‘ನನ್ನ ಮಗಳ 10ನೇ ತರಗತಿ ಪರೀಕ್ಷೆ ಮುಗಿಯುವವರೆಗೆ ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಳ್ಳುವುದನ್ನು ಮುಂದೂಡಿದ್ದೇನೆ’ ಎಂದು ಸಿಎಂ ದೇವೇಂದ್ರ ಫಡಣವೀಸ್ ಅವರು ಈಚೆಗೆ ತಿಳಿಸಿದ್ದರು. </p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮಗಳ ಮೇಲಿನ ತಂದೆಯ ಪ್ರೀತಿಯನ್ನು ನೋಡಿದ್ದೇವೆ. ದೇವೇಂದ್ರ ಫಡಣವೀಸ್ ಅವರಿಗೆ ಮಗಳ ಮೇಲೆ ಅಷ್ಟೊಂದು ಕಾಳಜಿ ಇದ್ದರೆ ಮರಾಠ ಸಮುದಾಯದ ಮಕ್ಕಳ ಬಗ್ಗೆ ಏಕೆ ಕಾಳಜಿ ವಹಿಸುತ್ತಿಲ್ಲ’ ಎಂದು ಕಿಡಿಕಾರಿದ್ದಾರೆ. </p><p>‘ನಿಮ್ಮ ಮಗಳ ಸಲುವಾಗಿ ನೀವು ಕೇವಲ 500 ಮೀಟರ್ ದೂರದಲ್ಲಿರುವ ಬೇರೆ ಬಂಗಲೆಗೆ ಸ್ಥಳಾಂತರಗೊಳ್ಳುತ್ತಿಲ್ಲ. ಹಾಗಾದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ನೇಣು ಬಿಗಿದುಕೊಳ್ಳುವ ನಮ್ಮ ಮಕ್ಕಳ ಸ್ಥಿತಿ ನಿಮಗೆ ಏಕೆ ಆರ್ಥವಾಗುತ್ತಿಲ್ಲ’ ಎಂದು ಜಾರಂಗೆ ಟೀಕಿಸಿದ್ದಾರೆ. </p><p>‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಧಂಗರ್ ಸಮುದಾಯವನ್ನು ಮರಾಠರ ವಿರುದ್ಧ ಎತ್ತಿಕಟ್ಟಿದ್ದರು. ಹತ್ತು ವರ್ಷಗಳ ಕಾಲ ಮೀಸಲಾತಿಯ ಭರವಸೆಯೊಂದಿಗೆ ಧಂಗರ್ ಸಮುದಾಯವನ್ನು ದಾರಿ ತಪ್ಪಿಸಿದ್ದರು. ಇವತ್ತಿನವರೆಗೂ ಮೀಸಲಾತಿ ಕಾರ್ಯರೂಪಕ್ಕೆ ಬರಲೇ ಇಲ್ಲ’ ಎಂದು ಫಡಣವೀಸ್ ವಿರುದ್ಧ ಜಾರಂಗೆ ಗುಡುಗಿದ್ದಾರೆ. </p><p>ಮನೋಜ್ ಜಾರಂಗೆ ಅವರು ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಲವು ಬಾರಿ ಉಪವಾಸ ಸತ್ಯಾಗ್ರಹಗಳನ್ನು ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಾಜಿನಗರ:</strong> ‘ಮಗಳ ಬಗ್ಗೆ ಅಷ್ಟೊಂದು ಕಾಳಜಿ ವಹಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮರಾಠರ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಮೀಸಲಾತಿ ನೀಡುತ್ತಿಲ್ಲ ಏಕೆ’ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಪ್ರಶ್ನಿಸಿದ್ದಾರೆ. </p><p>‘ನನ್ನ ಮಗಳ 10ನೇ ತರಗತಿ ಪರೀಕ್ಷೆ ಮುಗಿಯುವವರೆಗೆ ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಳ್ಳುವುದನ್ನು ಮುಂದೂಡಿದ್ದೇನೆ’ ಎಂದು ಸಿಎಂ ದೇವೇಂದ್ರ ಫಡಣವೀಸ್ ಅವರು ಈಚೆಗೆ ತಿಳಿಸಿದ್ದರು. </p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮಗಳ ಮೇಲಿನ ತಂದೆಯ ಪ್ರೀತಿಯನ್ನು ನೋಡಿದ್ದೇವೆ. ದೇವೇಂದ್ರ ಫಡಣವೀಸ್ ಅವರಿಗೆ ಮಗಳ ಮೇಲೆ ಅಷ್ಟೊಂದು ಕಾಳಜಿ ಇದ್ದರೆ ಮರಾಠ ಸಮುದಾಯದ ಮಕ್ಕಳ ಬಗ್ಗೆ ಏಕೆ ಕಾಳಜಿ ವಹಿಸುತ್ತಿಲ್ಲ’ ಎಂದು ಕಿಡಿಕಾರಿದ್ದಾರೆ. </p><p>‘ನಿಮ್ಮ ಮಗಳ ಸಲುವಾಗಿ ನೀವು ಕೇವಲ 500 ಮೀಟರ್ ದೂರದಲ್ಲಿರುವ ಬೇರೆ ಬಂಗಲೆಗೆ ಸ್ಥಳಾಂತರಗೊಳ್ಳುತ್ತಿಲ್ಲ. ಹಾಗಾದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ನೇಣು ಬಿಗಿದುಕೊಳ್ಳುವ ನಮ್ಮ ಮಕ್ಕಳ ಸ್ಥಿತಿ ನಿಮಗೆ ಏಕೆ ಆರ್ಥವಾಗುತ್ತಿಲ್ಲ’ ಎಂದು ಜಾರಂಗೆ ಟೀಕಿಸಿದ್ದಾರೆ. </p><p>‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಧಂಗರ್ ಸಮುದಾಯವನ್ನು ಮರಾಠರ ವಿರುದ್ಧ ಎತ್ತಿಕಟ್ಟಿದ್ದರು. ಹತ್ತು ವರ್ಷಗಳ ಕಾಲ ಮೀಸಲಾತಿಯ ಭರವಸೆಯೊಂದಿಗೆ ಧಂಗರ್ ಸಮುದಾಯವನ್ನು ದಾರಿ ತಪ್ಪಿಸಿದ್ದರು. ಇವತ್ತಿನವರೆಗೂ ಮೀಸಲಾತಿ ಕಾರ್ಯರೂಪಕ್ಕೆ ಬರಲೇ ಇಲ್ಲ’ ಎಂದು ಫಡಣವೀಸ್ ವಿರುದ್ಧ ಜಾರಂಗೆ ಗುಡುಗಿದ್ದಾರೆ. </p><p>ಮನೋಜ್ ಜಾರಂಗೆ ಅವರು ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಲವು ಬಾರಿ ಉಪವಾಸ ಸತ್ಯಾಗ್ರಹಗಳನ್ನು ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>