ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಜನದಟ್ಟಣೆ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂದು ಭಕ್ತ ಸಮೂಹ ಆರೋಪಿಸಿದೆ. ಅಯ್ಯಪ್ಪ ಮಾಲಾಧಾರಿಗಳು ದರ್ಶನ ಪಡೆಯಲು ಪರದಾಡುತ್ತಿದ್ದಾರೆ. ಸತತ 20 ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತರೂ ಸ್ವಾಮಿಯ ದರ್ಶನ ಸಿಗುತ್ತಿಲ್ಲ.