ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಾಮಿಯೇ ಶರಣಂ ಅಯಪ್ಪ‘ಎನ್ನುತ್ತಾ ದೇವರ ದರ್ಶನ ಪಡೆಯುತ್ತಿರುವ ಭಕ್ತರು!

Published 18 ನವೆಂಬರ್ 2023, 3:37 IST
Last Updated 18 ನವೆಂಬರ್ 2023, 3:37 IST
ಅಕ್ಷರ ಗಾತ್ರ

ಶಬರಿಮಲೆ: ದಕ್ಷಿಣ ಭಾರತದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಶುಕ್ರವಾರ ತೆರೆದಿದೆ.

ಎರಡು ತಿಂಗಳ ಕಾಲ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ನೀಡಲಿದ್ದು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ತಂಡೋಪತಂಡವಾಗಿ ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ. 

ನಸುಕಿನ ಜಾವ ಶ್ರದ್ಧಾ ಭಕ್ತಿಯಿಂದ ಹಾಗೂ ಸಾಂಪ್ರಾದಯಿಕ ಆಚರಣೆಗಳ ಮೂಲಕ ಗರ್ಭಗುಡಿಯ ಬಾಗಿಲನ್ನು ಅರ್ಚಕರು ತೆರೆದಿದ್ದಾರೆ.

ಇರುಮುಡಿ ಹೊತ್ತ ಭಕ್ತ ಸಾಗರವು ‘ಸ್ವಾಮಿಯೇ ಶರಣಂ ಅಯಪ್ಪ‘ ಎನ್ನುವ ನಾಮಸ್ಮರಣೆ ಮಾಡುತ್ತಾ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿರುವ ದೃಶ್ಯಗಳ ವಿಡಿಯೊವನ್ನು ಎಎನ್‌ಐ ಟ್ವೀಟ್‌ ಮಾಡಿದೆ.

ಸನ್ನಿಧಾನದಲ್ಲಿರುವ ಅನ್ನದಾನ ಮಂಟಪಮ್‌ನಲ್ಲಿ ಆಯೋಜಿಸಿರುವ ಉಚಿತ ಪ್ರಸಾದ ವಿತರಣೆಗೆ ಸಚಿವ ರಾಧಾಕೃಷ್ಣನ್‌ ಶುಕ್ರವಾರ ಚಾಲನೆ ನೀಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT