<p><strong>ಫರೂಕಾಬಾದ್/ಮೈನ್ಪುರಿ:</strong> ಶಾಲೆಗಳಲ್ಲಿ ಜಂತುಹುಳು ನಿವಾರಣೆಗಾಗಿ ನೀಡಿದ ಮಾತ್ರೆ ಸೇವಿಸಿದ 120 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಪ್ರಕರಣ ಉತ್ತರ ಪ್ರದೇಶದ ಫರೂಕಾಬಾದ್ ಹಾಗೂ ಮೈನ್ಪುರಿ ಜಿಲ್ಲೆಗಳಲ್ಲಿ ಮಂಗಳವಾರ ವರದಿಯಾಗಿದೆ.</p><p>ಜಂತುಹುಳು ನಿವಾರಣೆಗಾಗಿ ಅಲ್ಬೆಂಡಜೋಲ್ ಮಾತ್ರೆಗಳನ್ನು ನೀಡಲಾಗಿತ್ತು. ಅದನ್ನು ಸೇವಿಸಿದ ನಂತರ ಮಕ್ಕಳಲ್ಲಿ ತಲೆನೋವು, ವಾಂತಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಫರೂಕಾಬಾದ್ನ ರಾಥೋರಾ ಮೊಹದ್ದೀನ್ಪುರ ಗ್ರಾಮದ ಜವಹಾರ್ ಲಾಲ್ ಪ್ರೇಮಾ ಶಾಲೆಯಲ್ಲಿ ಮಾತ್ರೆ ಸೇವಿಸಿದ ಸುಮಾರು 150 ಮಕ್ಕಳಲ್ಲಿ 100 ಮಂದಿ ಅಸ್ವಸ್ಥರಾಗಿದ್ದರು. ಇದರಿಂದಾಗಿ, ಶಾಲಾಡಳಿತ ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದೆ.</p><p>33 ವಿದ್ಯಾರ್ಥಿಗಳನ್ನು ಕಮಲಗಂಜ್ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಉಳಿದ 67 ಮಕ್ಕಳನ್ನು ಜಿಲ್ಲಾ ಕೇಂದ್ರದಲ್ಲಿರುವ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಅಶುತೋಷ್ ಕುಮಾರ್ ದ್ವಿವೇದಿ ಅವರು ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.</p><p>ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಲ್ಲೂ ಜಂತುಹುಳು ನಿವಾರಣಾ ಅಭಿಯಾನ ಆರಂಭಿಸಲಾಗಿದೆ. ಆದರೆ, ಆ ಶಾಲೆಯಲ್ಲಷ್ಟೇ ಸಮಸ್ಯೆ ಕಾಣಿಸಿಕೊಂಡಿದೆ. ಸದ್ಯ ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಡಾ. ಅವನೀಂದ್ರ ಕುಮಾರ್ ತಿಳಿಸಿದ್ದಾರೆ.</p><p>ಇತ್ತ, ಮೈನ್ಪುರಿ ಜಿಲ್ಲೆಯ ನಗ್ಲಾ ಕೀರತ್ಪುರ ಶಾಲೆಯಲ್ಲಿ ಮಾತ್ರೆ ಸೇವಿಸಿದ ಸುಮಾರು 20 ಮಕ್ಕಳ ಆರೋಗ್ಯ ಹದಗೆಟ್ಟಿದೆ.</p><p>ಆರೋಗ್ಯದಲ್ಲಿ ಏರುಪೇರಾಗುತ್ತಿದ್ದಂತೆಯೇ ಎಲ್ಲ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ, ಹೆಚ್ಚಿನವರು ಮನೆಗೆ ಮರಳಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ. ಆರ್.ಸಿ. ಗುಪ್ತಾ ಹೇಳಿದ್ದಾರೆ.</p><p>ಮೊದಲು ಇಬ್ಬರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಂತರ ಇತರ ವಿದ್ಯಾರ್ಥಿಗಳೂ ಪೋಷಕರೊಂದಿಗೆ ಆಸ್ಪತ್ರೆಗೆ ಬಂದರು. ಬಹುಶಃ ಆತಂಕದಿಂದಾಗಿ ಅವರಿಗೂ ಸಮಸ್ಯೆ ಕಾಡಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ 2 ರಿಂದ 19 ವರ್ಷದೊಳಗಿನ ಮಕ್ಕಳಿಗಾಗಿ ಪ್ರತಿವರ್ಷ ಫೆಬ್ರುವರಿ 10 ಹಾಗೂ ಆಗಸ್ಟ್ 10ರಂದು ಅಭಿಯಾನ ನಡೆಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫರೂಕಾಬಾದ್/ಮೈನ್ಪುರಿ:</strong> ಶಾಲೆಗಳಲ್ಲಿ ಜಂತುಹುಳು ನಿವಾರಣೆಗಾಗಿ ನೀಡಿದ ಮಾತ್ರೆ ಸೇವಿಸಿದ 120 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಪ್ರಕರಣ ಉತ್ತರ ಪ್ರದೇಶದ ಫರೂಕಾಬಾದ್ ಹಾಗೂ ಮೈನ್ಪುರಿ ಜಿಲ್ಲೆಗಳಲ್ಲಿ ಮಂಗಳವಾರ ವರದಿಯಾಗಿದೆ.</p><p>ಜಂತುಹುಳು ನಿವಾರಣೆಗಾಗಿ ಅಲ್ಬೆಂಡಜೋಲ್ ಮಾತ್ರೆಗಳನ್ನು ನೀಡಲಾಗಿತ್ತು. ಅದನ್ನು ಸೇವಿಸಿದ ನಂತರ ಮಕ್ಕಳಲ್ಲಿ ತಲೆನೋವು, ವಾಂತಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಫರೂಕಾಬಾದ್ನ ರಾಥೋರಾ ಮೊಹದ್ದೀನ್ಪುರ ಗ್ರಾಮದ ಜವಹಾರ್ ಲಾಲ್ ಪ್ರೇಮಾ ಶಾಲೆಯಲ್ಲಿ ಮಾತ್ರೆ ಸೇವಿಸಿದ ಸುಮಾರು 150 ಮಕ್ಕಳಲ್ಲಿ 100 ಮಂದಿ ಅಸ್ವಸ್ಥರಾಗಿದ್ದರು. ಇದರಿಂದಾಗಿ, ಶಾಲಾಡಳಿತ ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದೆ.</p><p>33 ವಿದ್ಯಾರ್ಥಿಗಳನ್ನು ಕಮಲಗಂಜ್ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಉಳಿದ 67 ಮಕ್ಕಳನ್ನು ಜಿಲ್ಲಾ ಕೇಂದ್ರದಲ್ಲಿರುವ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಅಶುತೋಷ್ ಕುಮಾರ್ ದ್ವಿವೇದಿ ಅವರು ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.</p><p>ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಲ್ಲೂ ಜಂತುಹುಳು ನಿವಾರಣಾ ಅಭಿಯಾನ ಆರಂಭಿಸಲಾಗಿದೆ. ಆದರೆ, ಆ ಶಾಲೆಯಲ್ಲಷ್ಟೇ ಸಮಸ್ಯೆ ಕಾಣಿಸಿಕೊಂಡಿದೆ. ಸದ್ಯ ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಡಾ. ಅವನೀಂದ್ರ ಕುಮಾರ್ ತಿಳಿಸಿದ್ದಾರೆ.</p><p>ಇತ್ತ, ಮೈನ್ಪುರಿ ಜಿಲ್ಲೆಯ ನಗ್ಲಾ ಕೀರತ್ಪುರ ಶಾಲೆಯಲ್ಲಿ ಮಾತ್ರೆ ಸೇವಿಸಿದ ಸುಮಾರು 20 ಮಕ್ಕಳ ಆರೋಗ್ಯ ಹದಗೆಟ್ಟಿದೆ.</p><p>ಆರೋಗ್ಯದಲ್ಲಿ ಏರುಪೇರಾಗುತ್ತಿದ್ದಂತೆಯೇ ಎಲ್ಲ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ, ಹೆಚ್ಚಿನವರು ಮನೆಗೆ ಮರಳಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ. ಆರ್.ಸಿ. ಗುಪ್ತಾ ಹೇಳಿದ್ದಾರೆ.</p><p>ಮೊದಲು ಇಬ್ಬರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಂತರ ಇತರ ವಿದ್ಯಾರ್ಥಿಗಳೂ ಪೋಷಕರೊಂದಿಗೆ ಆಸ್ಪತ್ರೆಗೆ ಬಂದರು. ಬಹುಶಃ ಆತಂಕದಿಂದಾಗಿ ಅವರಿಗೂ ಸಮಸ್ಯೆ ಕಾಡಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ 2 ರಿಂದ 19 ವರ್ಷದೊಳಗಿನ ಮಕ್ಕಳಿಗಾಗಿ ಪ್ರತಿವರ್ಷ ಫೆಬ್ರುವರಿ 10 ಹಾಗೂ ಆಗಸ್ಟ್ 10ರಂದು ಅಭಿಯಾನ ನಡೆಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>